Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡೋ ಯೋಗ ಬರಲಿದೆ -ಸಿಎಂ BSYಗೆ ಮತ್ತೆ ಟಾಂಗ್ ಕೊಟ್ಟ ಯತ್ನಾಳ್

ನಾನು ಏನೆಂಬುದು ದೆಹಲಿ ಹೈಕಮಾಂಡ್‌ಗೆ ಗೊತ್ತಿದೆ. ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡುವ ಯೋಗ ಬರಲಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದರು.

ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡೋ ಯೋಗ ಬರಲಿದೆ -ಸಿಎಂ BSYಗೆ ಮತ್ತೆ ಟಾಂಗ್ ಕೊಟ್ಟ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (ಎಡ); ಸಿಎಂ B.S. ಯಡಿಯೂರಪ್ಪ
Follow us
KUSHAL V
|

Updated on: Feb 02, 2021 | 11:27 PM

ಚಿತ್ರದುರ್ಗ: ಯುಗಾದಿ ಒಳಗೆ ಉತ್ತರ ಕರ್ನಾಟಕದವರೇ ಸಿಎಂ ಆಗ್ತಾರೆ. ಬಿಜೆಪಿ ಹೈಕಮಾಂಡ್ ಈ ಬಗ್ಗೆ ತೀರ್ಮಾನಿಸಲಿದೆ ಎಂದು ಜಿಲ್ಲೆಯಲ್ಲಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಮತ್ತೊಮ್ಮೆ ಹೇಳಿದ್ದಾರೆ.

ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದ ಯತ್ನಾಳ್‌ ಯಾರು ಸಿಎಂ ಆಗ್ತಾರೆಂಬುದು ಗೊತ್ತಿಲ್ಲ. ಆದರೆ, ಉತ್ತರ ಕರ್ನಾಟಕದವರು ಸಿಎಂ ಆಗುವ ಕಾಲ‌ ಸನ್ನಿಹಿತವಾಗಿದೆ. ರಾಜ್ಯದಲ್ಲಿ ಎರಡನೇ ಹಂತದ ನಾಯಕತ್ವದ ಯುಗಾರಂಭವಾಗಿದೆ ಎಂದು ಹೇಳಿದರು.

ರಾಜ್ಯಕ್ಕೆ ಪ್ರಾಮಾಣಿಕ, ಹಿಂದುತ್ವ ಪರವಿರುವ ವ್ಯಕ್ತಿ ಬೇಕಿದೆ. ಯಾವುದೇ ಕಾರಣಕ್ಕೂ BSY ಸಂಪುಟದಲ್ಲಿ ಸಚಿವನಾಗಲ್ಲ. ನಾನು ಮಠಾಧೀಶರ ಕಾಲು ಹಿಡಿದಿಲ್ಲ, ಲಾಬಿ ಮಾಡಿಲ್ಲ. ಕೆಲವರು ಏನೇನೋ ಲಾಬಿ ಮಾಡಿ ಸಚಿವರಾಗಿದ್ದಾರೆ ಎಂದು ಹೇಳಿದರು.

ನನಗೆ ಡಿನ್ನರ್ ಪಾರ್ಟಿ ಬೇಡ, ಸಭೆ ಕರೆಯಲು ಒತ್ತಾಯಿಸಿದ್ದೇವೆ. ಶಾಸಕಾಂಗ ಪಕ್ಷದ ಸಭೆ ಕರೆಯಲು ಸಿಎಂಗೆ ಆಗ್ರಹಿಸಿದ್ದೇವೆ. ಡಿಕೆಶಿ, ಸಿದ್ದರಾಮಯ್ಯ, ಜಮೀರ್‌, ಜಾರ್ಜ್ ಕ್ಷೇತ್ರಕ್ಕೆ ಹಣ ಕೊಟ್ಟಿದ್ದಾರೆ. ಬಿಜೆಪಿ ಶಾಸಕರಿಗೂ ಸಿಎಂ ಹೆಚ್ಚಿನ ಅನುದಾನ ನೀಡಬೇಕು ಎಂದು ಯತ್ನಾಳ್ ಹೇಳಿದರು.

ಸಿಎಂ ಊಟ, ತಿಂಡಿ ಮಾಡಿಸುವುದರಿಂದ ಬೇಡಿಕೆ ಈಡೇರಲ್ಲ. ನಮ್ಮ ಬೇಡಿಕೆ ಈಡೇರಲ್ಲವೆಂದು ಸಿಎಂಗೆ ಯತ್ನಾಳ್‌ ಟಾಂಗ್‌ ಕೊಟ್ಟರು. ನಾವು ಪಕ್ಷದಲ್ಲಿದ್ರೂ ಗೆಲ್ತೀವಿ, ಹೊರ ಹಾಕಿದ್ರೂ ಗೆಲ್ತೀವಿ. ಪಕ್ಷೇತರನಾಗಿ ವಿಧಾನಪರಿಷತ್‌ಗೆ ನಾನು ಗೆದ್ದು ಬಂದಿದ್ದೇನೆ. ನಾವು ಶಾಸಕರು,‌ ಸಂಸದರು ಹೇಗೆ ಆಗಬೇಕೆಂದು ಗೊತ್ತಿದೆ ಎಂದು ಹೇಳಿದರು.

ದೆಹಲಿಗೆ ಹೋಗಿ ಯಾರು ಏನು ಹೇಳಿದರೂ ಏನೂ ಆಗಲ್ಲ. ನಾನು ಏನೆಂಬುದು ದೆಹಲಿ ಹೈಕಮಾಂಡ್‌ಗೆ ಗೊತ್ತಿದೆ. ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡುವ ಯೋಗ ಬರಲಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದರು.

ನಾಡಿನ ಜನತೆಗೆ ಅನಾನುಕೂಲವಾದ್ರೆ ಕಾಯ್ದೆಗೆ ಬೆಂಬಲವಿಲ್ಲ -ಗೋಹತ್ಯೆ ನಿಷೇಧಕ್ಕೆ HDK ಪರೋಕ್ಷ ವಿರೋಧ

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ