AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡೋ ಯೋಗ ಬರಲಿದೆ -ಸಿಎಂ BSYಗೆ ಮತ್ತೆ ಟಾಂಗ್ ಕೊಟ್ಟ ಯತ್ನಾಳ್

ನಾನು ಏನೆಂಬುದು ದೆಹಲಿ ಹೈಕಮಾಂಡ್‌ಗೆ ಗೊತ್ತಿದೆ. ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡುವ ಯೋಗ ಬರಲಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದರು.

ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡೋ ಯೋಗ ಬರಲಿದೆ -ಸಿಎಂ BSYಗೆ ಮತ್ತೆ ಟಾಂಗ್ ಕೊಟ್ಟ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (ಎಡ); ಸಿಎಂ B.S. ಯಡಿಯೂರಪ್ಪ
KUSHAL V
|

Updated on: Feb 02, 2021 | 11:27 PM

Share

ಚಿತ್ರದುರ್ಗ: ಯುಗಾದಿ ಒಳಗೆ ಉತ್ತರ ಕರ್ನಾಟಕದವರೇ ಸಿಎಂ ಆಗ್ತಾರೆ. ಬಿಜೆಪಿ ಹೈಕಮಾಂಡ್ ಈ ಬಗ್ಗೆ ತೀರ್ಮಾನಿಸಲಿದೆ ಎಂದು ಜಿಲ್ಲೆಯಲ್ಲಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಮತ್ತೊಮ್ಮೆ ಹೇಳಿದ್ದಾರೆ.

ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದ ಯತ್ನಾಳ್‌ ಯಾರು ಸಿಎಂ ಆಗ್ತಾರೆಂಬುದು ಗೊತ್ತಿಲ್ಲ. ಆದರೆ, ಉತ್ತರ ಕರ್ನಾಟಕದವರು ಸಿಎಂ ಆಗುವ ಕಾಲ‌ ಸನ್ನಿಹಿತವಾಗಿದೆ. ರಾಜ್ಯದಲ್ಲಿ ಎರಡನೇ ಹಂತದ ನಾಯಕತ್ವದ ಯುಗಾರಂಭವಾಗಿದೆ ಎಂದು ಹೇಳಿದರು.

ರಾಜ್ಯಕ್ಕೆ ಪ್ರಾಮಾಣಿಕ, ಹಿಂದುತ್ವ ಪರವಿರುವ ವ್ಯಕ್ತಿ ಬೇಕಿದೆ. ಯಾವುದೇ ಕಾರಣಕ್ಕೂ BSY ಸಂಪುಟದಲ್ಲಿ ಸಚಿವನಾಗಲ್ಲ. ನಾನು ಮಠಾಧೀಶರ ಕಾಲು ಹಿಡಿದಿಲ್ಲ, ಲಾಬಿ ಮಾಡಿಲ್ಲ. ಕೆಲವರು ಏನೇನೋ ಲಾಬಿ ಮಾಡಿ ಸಚಿವರಾಗಿದ್ದಾರೆ ಎಂದು ಹೇಳಿದರು.

ನನಗೆ ಡಿನ್ನರ್ ಪಾರ್ಟಿ ಬೇಡ, ಸಭೆ ಕರೆಯಲು ಒತ್ತಾಯಿಸಿದ್ದೇವೆ. ಶಾಸಕಾಂಗ ಪಕ್ಷದ ಸಭೆ ಕರೆಯಲು ಸಿಎಂಗೆ ಆಗ್ರಹಿಸಿದ್ದೇವೆ. ಡಿಕೆಶಿ, ಸಿದ್ದರಾಮಯ್ಯ, ಜಮೀರ್‌, ಜಾರ್ಜ್ ಕ್ಷೇತ್ರಕ್ಕೆ ಹಣ ಕೊಟ್ಟಿದ್ದಾರೆ. ಬಿಜೆಪಿ ಶಾಸಕರಿಗೂ ಸಿಎಂ ಹೆಚ್ಚಿನ ಅನುದಾನ ನೀಡಬೇಕು ಎಂದು ಯತ್ನಾಳ್ ಹೇಳಿದರು.

ಸಿಎಂ ಊಟ, ತಿಂಡಿ ಮಾಡಿಸುವುದರಿಂದ ಬೇಡಿಕೆ ಈಡೇರಲ್ಲ. ನಮ್ಮ ಬೇಡಿಕೆ ಈಡೇರಲ್ಲವೆಂದು ಸಿಎಂಗೆ ಯತ್ನಾಳ್‌ ಟಾಂಗ್‌ ಕೊಟ್ಟರು. ನಾವು ಪಕ್ಷದಲ್ಲಿದ್ರೂ ಗೆಲ್ತೀವಿ, ಹೊರ ಹಾಕಿದ್ರೂ ಗೆಲ್ತೀವಿ. ಪಕ್ಷೇತರನಾಗಿ ವಿಧಾನಪರಿಷತ್‌ಗೆ ನಾನು ಗೆದ್ದು ಬಂದಿದ್ದೇನೆ. ನಾವು ಶಾಸಕರು,‌ ಸಂಸದರು ಹೇಗೆ ಆಗಬೇಕೆಂದು ಗೊತ್ತಿದೆ ಎಂದು ಹೇಳಿದರು.

ದೆಹಲಿಗೆ ಹೋಗಿ ಯಾರು ಏನು ಹೇಳಿದರೂ ಏನೂ ಆಗಲ್ಲ. ನಾನು ಏನೆಂಬುದು ದೆಹಲಿ ಹೈಕಮಾಂಡ್‌ಗೆ ಗೊತ್ತಿದೆ. ರಾಜ್ಯದಲ್ಲಿ ನಾವೇ ಮಂತ್ರಿಗಿರಿ ಕೊಡುವ ಯೋಗ ಬರಲಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದರು.

ನಾಡಿನ ಜನತೆಗೆ ಅನಾನುಕೂಲವಾದ್ರೆ ಕಾಯ್ದೆಗೆ ಬೆಂಬಲವಿಲ್ಲ -ಗೋಹತ್ಯೆ ನಿಷೇಧಕ್ಕೆ HDK ಪರೋಕ್ಷ ವಿರೋಧ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ