AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​
ಬಸನಗೌಡ ಪಾಟೀಲ್​ ಯತ್ನಾಳ್​ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on: Feb 05, 2021 | 11:18 PM

Share

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಪಂಚಮಸಾಲಿಗರಿಗೆ ಮೀಸಲಾತಿ ಬಗ್ಗೆ ಸಿಎಂ ನೀಡಿದ ಗೊಂದಲದ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್​ ಆಕ್ರೋಶ ಹೊರಹಾಕಿದ್ದಾರೆ. ವಯಸ್ಸಿನ ಕಾರಣ ಸಿಎಂ ಬಿಎಸ್​ವೈ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಗೊಂದಲದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಸಿಎಂ ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪಗೆ ಆಯಾಸ, ದಣಿವು ಆಗಿದೆ ಎಂದು ಯತ್ನಾಳ್​ ಹೇಳಿದರು.

‘BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು’ ಬೆಳಗ್ಗೆಯೇ ಈ ಆದೇಶ ನೀಡಿದ್ರೆ ಆಕ್ರೋಶ ಭುಗಿಲೇಳ್ತಿರಲಿಲ್ಲ. ಸಿಎಂ ಬಿಎಸ್​ವೈ ಬದಲು ಕುಟುಂಬದವರಿಂದ ಆಡಳಿತ ನಡೆಸಲಾಗುತ್ತಿದೆ. ವಿಜಯೇಂದ್ರ ಮತ್ತು ಕುಟುಂಬ ಸರ್ಕಾರ ನಡೆಸುತ್ತಿದೆ. ಪ್ರಧಾನಿಗೆ ಕುಟುಂಬ ರಾಜಕಾರಣ ಮುಕ್ತ ಕನಸಿದೆ. BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು ಎಂದು ಶಾಶಕರು ಹೇಳಿದರು.

ಹೈಕಮಾಂಡ್ ಗೌರವಯುತ ಬೇಡಿಕೆಗೆ ಸಜ್ಜಾಗಿದೆ. BSY​​​ ಉಳಿಯಬೇಕು, ಕುಟುಂಬ ಉದ್ಧಾರ ಮಾಡಬೇಕು. BSY ತಮ್ಮ ಕುಟುಂಬವನ್ನು ಉದ್ಧಾರ ಮಾಡಬೇಕೆಂದುಕೊಂಡಿದ್ದಾರೆ. ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್​ ಸದನಕ್ಕೆ ಬರಲಿಲ್ಲ. ಸಿದ್ದರಾಮಯ್ಯ ಬೇಕು ಬೇಡ ಮಾತಾಡಿದರು ಎಂದು ಯತ್ನಾಳ್​ ಹೇಳಿದರು. ಫೆ.10ರಂದು ಸಮುದಾಯದ ಶಾಸಕರು ಮುಖಂಡರ ಸಭೆ ನಡೆಸುತ್ತೇವೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಶಾಸಕ ಯತ್ನಾಳ್​ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ