AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​
ಬಸನಗೌಡ ಪಾಟೀಲ್​ ಯತ್ನಾಳ್​ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on: Feb 05, 2021 | 11:18 PM

Share

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಪಂಚಮಸಾಲಿಗರಿಗೆ ಮೀಸಲಾತಿ ಬಗ್ಗೆ ಸಿಎಂ ನೀಡಿದ ಗೊಂದಲದ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್​ ಆಕ್ರೋಶ ಹೊರಹಾಕಿದ್ದಾರೆ. ವಯಸ್ಸಿನ ಕಾರಣ ಸಿಎಂ ಬಿಎಸ್​ವೈ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಗೊಂದಲದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಸಿಎಂ ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪಗೆ ಆಯಾಸ, ದಣಿವು ಆಗಿದೆ ಎಂದು ಯತ್ನಾಳ್​ ಹೇಳಿದರು.

‘BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು’ ಬೆಳಗ್ಗೆಯೇ ಈ ಆದೇಶ ನೀಡಿದ್ರೆ ಆಕ್ರೋಶ ಭುಗಿಲೇಳ್ತಿರಲಿಲ್ಲ. ಸಿಎಂ ಬಿಎಸ್​ವೈ ಬದಲು ಕುಟುಂಬದವರಿಂದ ಆಡಳಿತ ನಡೆಸಲಾಗುತ್ತಿದೆ. ವಿಜಯೇಂದ್ರ ಮತ್ತು ಕುಟುಂಬ ಸರ್ಕಾರ ನಡೆಸುತ್ತಿದೆ. ಪ್ರಧಾನಿಗೆ ಕುಟುಂಬ ರಾಜಕಾರಣ ಮುಕ್ತ ಕನಸಿದೆ. BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು ಎಂದು ಶಾಶಕರು ಹೇಳಿದರು.

ಹೈಕಮಾಂಡ್ ಗೌರವಯುತ ಬೇಡಿಕೆಗೆ ಸಜ್ಜಾಗಿದೆ. BSY​​​ ಉಳಿಯಬೇಕು, ಕುಟುಂಬ ಉದ್ಧಾರ ಮಾಡಬೇಕು. BSY ತಮ್ಮ ಕುಟುಂಬವನ್ನು ಉದ್ಧಾರ ಮಾಡಬೇಕೆಂದುಕೊಂಡಿದ್ದಾರೆ. ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್​ ಸದನಕ್ಕೆ ಬರಲಿಲ್ಲ. ಸಿದ್ದರಾಮಯ್ಯ ಬೇಕು ಬೇಡ ಮಾತಾಡಿದರು ಎಂದು ಯತ್ನಾಳ್​ ಹೇಳಿದರು. ಫೆ.10ರಂದು ಸಮುದಾಯದ ಶಾಸಕರು ಮುಖಂಡರ ಸಭೆ ನಡೆಸುತ್ತೇವೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಶಾಸಕ ಯತ್ನಾಳ್​ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ