AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​
ಬಸನಗೌಡ ಪಾಟೀಲ್​ ಯತ್ನಾಳ್​ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on: Feb 05, 2021 | 11:18 PM

Share

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಪಂಚಮಸಾಲಿಗರಿಗೆ ಮೀಸಲಾತಿ ಬಗ್ಗೆ ಸಿಎಂ ನೀಡಿದ ಗೊಂದಲದ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್​ ಆಕ್ರೋಶ ಹೊರಹಾಕಿದ್ದಾರೆ. ವಯಸ್ಸಿನ ಕಾರಣ ಸಿಎಂ ಬಿಎಸ್​ವೈ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಗೊಂದಲದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಸಿಎಂ ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪಗೆ ಆಯಾಸ, ದಣಿವು ಆಗಿದೆ ಎಂದು ಯತ್ನಾಳ್​ ಹೇಳಿದರು.

‘BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು’ ಬೆಳಗ್ಗೆಯೇ ಈ ಆದೇಶ ನೀಡಿದ್ರೆ ಆಕ್ರೋಶ ಭುಗಿಲೇಳ್ತಿರಲಿಲ್ಲ. ಸಿಎಂ ಬಿಎಸ್​ವೈ ಬದಲು ಕುಟುಂಬದವರಿಂದ ಆಡಳಿತ ನಡೆಸಲಾಗುತ್ತಿದೆ. ವಿಜಯೇಂದ್ರ ಮತ್ತು ಕುಟುಂಬ ಸರ್ಕಾರ ನಡೆಸುತ್ತಿದೆ. ಪ್ರಧಾನಿಗೆ ಕುಟುಂಬ ರಾಜಕಾರಣ ಮುಕ್ತ ಕನಸಿದೆ. BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು ಎಂದು ಶಾಶಕರು ಹೇಳಿದರು.

ಹೈಕಮಾಂಡ್ ಗೌರವಯುತ ಬೇಡಿಕೆಗೆ ಸಜ್ಜಾಗಿದೆ. BSY​​​ ಉಳಿಯಬೇಕು, ಕುಟುಂಬ ಉದ್ಧಾರ ಮಾಡಬೇಕು. BSY ತಮ್ಮ ಕುಟುಂಬವನ್ನು ಉದ್ಧಾರ ಮಾಡಬೇಕೆಂದುಕೊಂಡಿದ್ದಾರೆ. ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್​ ಸದನಕ್ಕೆ ಬರಲಿಲ್ಲ. ಸಿದ್ದರಾಮಯ್ಯ ಬೇಕು ಬೇಡ ಮಾತಾಡಿದರು ಎಂದು ಯತ್ನಾಳ್​ ಹೇಳಿದರು. ಫೆ.10ರಂದು ಸಮುದಾಯದ ಶಾಸಕರು ಮುಖಂಡರ ಸಭೆ ನಡೆಸುತ್ತೇವೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಶಾಸಕ ಯತ್ನಾಳ್​ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್