AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​
ಬಸನಗೌಡ ಪಾಟೀಲ್​ ಯತ್ನಾಳ್​ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on: Feb 05, 2021 | 11:18 PM

Share

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಪಂಚಮಸಾಲಿಗರಿಗೆ ಮೀಸಲಾತಿ ಬಗ್ಗೆ ಸಿಎಂ ನೀಡಿದ ಗೊಂದಲದ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್​ ಆಕ್ರೋಶ ಹೊರಹಾಕಿದ್ದಾರೆ. ವಯಸ್ಸಿನ ಕಾರಣ ಸಿಎಂ ಬಿಎಸ್​ವೈ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಗೊಂದಲದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಸಿಎಂ ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪಗೆ ಆಯಾಸ, ದಣಿವು ಆಗಿದೆ ಎಂದು ಯತ್ನಾಳ್​ ಹೇಳಿದರು.

‘BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು’ ಬೆಳಗ್ಗೆಯೇ ಈ ಆದೇಶ ನೀಡಿದ್ರೆ ಆಕ್ರೋಶ ಭುಗಿಲೇಳ್ತಿರಲಿಲ್ಲ. ಸಿಎಂ ಬಿಎಸ್​ವೈ ಬದಲು ಕುಟುಂಬದವರಿಂದ ಆಡಳಿತ ನಡೆಸಲಾಗುತ್ತಿದೆ. ವಿಜಯೇಂದ್ರ ಮತ್ತು ಕುಟುಂಬ ಸರ್ಕಾರ ನಡೆಸುತ್ತಿದೆ. ಪ್ರಧಾನಿಗೆ ಕುಟುಂಬ ರಾಜಕಾರಣ ಮುಕ್ತ ಕನಸಿದೆ. BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು ಎಂದು ಶಾಶಕರು ಹೇಳಿದರು.

ಹೈಕಮಾಂಡ್ ಗೌರವಯುತ ಬೇಡಿಕೆಗೆ ಸಜ್ಜಾಗಿದೆ. BSY​​​ ಉಳಿಯಬೇಕು, ಕುಟುಂಬ ಉದ್ಧಾರ ಮಾಡಬೇಕು. BSY ತಮ್ಮ ಕುಟುಂಬವನ್ನು ಉದ್ಧಾರ ಮಾಡಬೇಕೆಂದುಕೊಂಡಿದ್ದಾರೆ. ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್​ ಸದನಕ್ಕೆ ಬರಲಿಲ್ಲ. ಸಿದ್ದರಾಮಯ್ಯ ಬೇಕು ಬೇಡ ಮಾತಾಡಿದರು ಎಂದು ಯತ್ನಾಳ್​ ಹೇಳಿದರು. ಫೆ.10ರಂದು ಸಮುದಾಯದ ಶಾಸಕರು ಮುಖಂಡರ ಸಭೆ ನಡೆಸುತ್ತೇವೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಶಾಸಕ ಯತ್ನಾಳ್​ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ