AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವತಿಯ ಶವಸಂಸ್ಕಾರದ ವೇಳೆ ಪೊಲೀಸರು ನಗುತ್ತಿದ್ರು; ರಾಮ ರಾಜ್ಯದಲ್ಲಿ ಇದು ಶೋಭೆ ತರುತ್ತಾ?’

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಗ್ಯಾಂಗ್ ‌ರೇಪ್ ಹಾಗೂ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕಾರ್ ಪ್ರತಿಕ್ರಿಯಿಸಿದ್ದಾರೆ. ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಘಟನೆ ಅಮಾನವೀಯ. ಯುವತಿ ಮೃತಪಟ್ಟ ಕೂಡಲೆ ಪೊಲೀಸರಿಂದಲೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಯುವತಿಯ ಮುಖವನ್ನ ಆಕೆಯ ಕುಟುಂಬಸ್ಥರಿಗೆ ನೋಡುವುದಕ್ಕೆ ಬಿಟ್ಟಿಲ್ಲ. ಮುಖ ತೋರಿಸದೆ ಪೊಲೀಸರೇ ಅಂತ್ಯಸಂಸ್ಕಾರ ಮಾಡಿದ್ದಾರೆ. ಉತ್ತರ ಪ್ರದೇಶ ಪೊಲೀಸರಿಗೆ ಮಾನವೀಯತೆ ಇದೆಯಾ? ಎಂದು ಲಕ್ಷ್ಮೀ ಹೆಬ್ಬಾಳ್ಕಾರ್ ಖಾರವಾಗಿ ಪ್ರಶ್ನಿಸಿದ್ದಾರೆ. ಘಟನೆ ನಡೆದ 8 […]

‘ಯುವತಿಯ ಶವಸಂಸ್ಕಾರದ ವೇಳೆ ಪೊಲೀಸರು ನಗುತ್ತಿದ್ರು; ರಾಮ ರಾಜ್ಯದಲ್ಲಿ ಇದು ಶೋಭೆ ತರುತ್ತಾ?’
KUSHAL V
| Updated By: ಸಾಧು ಶ್ರೀನಾಥ್​|

Updated on: Oct 01, 2020 | 4:04 PM

Share

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಗ್ಯಾಂಗ್ ‌ರೇಪ್ ಹಾಗೂ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕಾರ್ ಪ್ರತಿಕ್ರಿಯಿಸಿದ್ದಾರೆ.

ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಘಟನೆ ಅಮಾನವೀಯ. ಯುವತಿ ಮೃತಪಟ್ಟ ಕೂಡಲೆ ಪೊಲೀಸರಿಂದಲೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಯುವತಿಯ ಮುಖವನ್ನ ಆಕೆಯ ಕುಟುಂಬಸ್ಥರಿಗೆ ನೋಡುವುದಕ್ಕೆ ಬಿಟ್ಟಿಲ್ಲ. ಮುಖ ತೋರಿಸದೆ ಪೊಲೀಸರೇ ಅಂತ್ಯಸಂಸ್ಕಾರ ಮಾಡಿದ್ದಾರೆ. ಉತ್ತರ ಪ್ರದೇಶ ಪೊಲೀಸರಿಗೆ ಮಾನವೀಯತೆ ಇದೆಯಾ? ಎಂದು ಲಕ್ಷ್ಮೀ ಹೆಬ್ಬಾಳ್ಕಾರ್ ಖಾರವಾಗಿ ಪ್ರಶ್ನಿಸಿದ್ದಾರೆ.

ಘಟನೆ ನಡೆದ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದಾರೆ. ಆದರೆ, ಯುವತಿ ಮೃತಪಟ್ಟ ಬಳಿಕ ಆಕೆಯ ಆಕೆಯ ಶವವನ್ನು ಎಂಟು ನಿಮಿಷವೂ UP ಪೊಲೀಸರು ಇಡಲಿಲ್ಲ. ಉತ್ತರ ಪ್ರದೇಶದಲ್ಲಿ ರಾಮ ಮಂದಿರವನ್ನ ಎಲ್ಲರೂ ಕಟ್ಟೋಣ. ಆದರೆ, ದಲಿತ ಮಹಿಳೆ ಎಂಬ ಕಾರಣಕ್ಕೆ UP ಸರ್ಕಾರ ಈ ಘಟನೆಗೆ ಸಾಕ್ಷಿಯಾಯ್ತಾ? ಎಂದು ಶಾಸಕಿ ಪ್ರಶ್ನಿಸಿದ್ದಾರೆ.

ನಿರ್ಭಯಾ ಕೇಸ್‌ ಸಮಯದಲ್ಲಿ ಮನಮೋಹನ್ ಸಿಂಗ್ ಸರ್ಕಾರ ಇತ್ತು. ಆಗ ಹೆಚ್ಚಿನ‌ ಚಿಕಿತ್ಸೆಗೆ ಆಕೆಯನ್ನು ಸಿಂಗಾಪುರ್‌ಗೂ ಕಳುಹಿಸಿಕೊಟ್ಟಿದ್ದರು. ಆಕೆಯ ಅಂತ್ಯಕ್ರಿಯೆಯನ್ನು ಗೌರವದಿಂದ ನೆರವೇರಿಸಿದ್ದರು. ಈಗ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವುದು ಏನು? ಎಂಬುದು ನನ್ನ ಪ್ರಶ್ನೆ. ಮಹಿಳೆಯರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯೇ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯೋಗಿ ಆದಿತ್ಯನಾಥ್​ ಅವರೇ, UP ಯಲ್ಲಿ‌ ಮಹಿಳೆಯರನ್ನ ಈ ರೀತಿಯಾಗಿ ನಡೆಸಿಕೊಳ್ಳುವುದು ಸರಿಯೇ? ಯುವತಿಯ ಅಂತ್ಯ ಸಂಸ್ಕಾರದ ವೇಳೆ ಪೊಲೀಸರು ನಗುತ್ತಿದ್ದರು. ಹೀಗೆ ಮಾಡುವುದು ರಾಮ ರಾಜ್ಯದಲ್ಲಿ ಶೋಭೆ ತರುತ್ತಾ? ಆರೋಪಿಗಳಿಗೆ ಕಂಡಲ್ಲಿ ಗುಂಡು ಹಾಕಬೇಕು, ಗಲ್ಲಿಗೇರಿಸಬೇಕು ಅಂತಾ ನಾವೆಲ್ಲಾ ಒತ್ತಾಯ ಮಾಡೋಣ ಎಂದು ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪೋಸ್ಟ್ ಹಾಕಿದ್ದಾರೆ.

https://www.facebook.com/Laxmihebbalkarofficial/posts/1759149380906756

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್