AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶಣ್ಣ.. ನಿನಗೆ ಒಳ್ಳೆ ಖಾತೆ ಸಿಕ್ಕಿದೆ, ನೋಡ್ಕೊಂಡು ಸುಮ್ನಿರು -ರೇಣುಕಾಚಾರ್ಯ ಸಿಡಿಮಿಡಿ

ರಮೇಶಣ್ಣ ನಿನಗೆ ಒಳ್ಳೆ ಖಾತೆ ಸಿಕ್ಕಿದೆ, ನೋಡ್ಕೊಂಡು ಸುಮ್ನಿರು. ಸರ್ಕಾರ ಬರಲು ಯಾರೊಬ್ರೂ ನಯಾಪೈಸೆ ಖರ್ಚುಮಾಡಿಲ್ಲ. ಸಿಪಿವೈ​ 9 ಕೋಟಿ ಸಾಲ ಮಾಡಿಕೊಂಡಿದ್ದಾರೆ ಅನ್ನೋದು ಸುಳ್ಳು. ಯಾವ್ದೇ ಸಾಲ ಕೊಟ್ಟಿಲ್ಲವೆಂದು ಎಂಟಿಬಿ ನಾಗರಾಜ್​ ಹೇಳಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.

ರಮೇಶಣ್ಣ.. ನಿನಗೆ ಒಳ್ಳೆ ಖಾತೆ ಸಿಕ್ಕಿದೆ, ನೋಡ್ಕೊಂಡು ಸುಮ್ನಿರು -ರೇಣುಕಾಚಾರ್ಯ ಸಿಡಿಮಿಡಿ
M.P.ರೇಣುಕಾಚಾರ್ಯ (ಎಡ); ರಮೇಶ್ ಜಾರಕಿಹೊಳಿ (ಬಲ)
KUSHAL V
|

Updated on:Jan 17, 2021 | 10:38 PM

Share

ದಾವಣಗೆರೆ: 2 ವರ್ಷ ಕಾಲ ಸಚಿವರಾಗಿದ್ದವರನ್ನು ಸಂಪುಟದಿಂದ ಕೈಬಿಡಿ. ಬೇರೆಯವರಿಗೆ ಅವಕಾಶ ನೀಡಿ ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಒಬ್ಬರನ್ನು ವೈಭವೀಕರಿಸುತ್ತಿದ್ದಾರೆ. ರಮೇಶಣ್ಣ ನಿನಗೆ ಒಳ್ಳೆ ಖಾತೆ ಸಿಕ್ಕಿದೆ, ನೋಡ್ಕೊಂಡು ಸುಮ್ನಿರು. ಸರ್ಕಾರ ಬರಲು ಯಾರೊಬ್ರೂ ನಯಾಪೈಸೆ ಖರ್ಚುಮಾಡಿಲ್ಲ. ಸಿಪಿವೈ​ 9 ಕೋಟಿ ಸಾಲ ಮಾಡಿಕೊಂಡಿದ್ದಾರೆ ಅನ್ನೋದು ಸುಳ್ಳು. ಯಾವ್ದೇ ಸಾಲ ಕೊಟ್ಟಿಲ್ಲವೆಂದು ಎಂಟಿಬಿ ನಾಗರಾಜ್​ ಹೇಳಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.

ಎಲ್ಲಾ ಶಾಸಕರು ನನಗೆ ದೂರವಾಣಿ ಕರೆ ಮಾಡುತ್ತಿದ್ದಾರೆ. ಎಲ್ಲ ಶಾಸಕರು ಸೇರಿ ಸಭೆ ನಡೆಸುತ್ತೇವೆ, ಸಿಎಂ ವಿರುದ್ಧ ಅಲ್ಲ. ಆಗಿರುವ ಅವ್ಯವಸ್ಥೆ, ಲೋಪ ಸರಿಪಡಿಸಲು ಸಭೆ ನಡೆಸುತ್ತೇವೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.

‘ಬಿಎಸ್​ವೈ ವಿರುದ್ಧ ಮಾತನಾಡಿದ್ರೆ ಬಾಯಲ್ಲಿ ಹುಳ ಬೀಳುತ್ತೆ’ ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿಲ್ಲ. ಯಡಿಯೂರಪ್ಪ ವಿರುದ್ಧ ನಾನು ಯಾವತ್ತು ನಡೆದುಕೊಂಡಿಲ್ಲ. ಯಡಿಯೂರಪ್ಪ ನನಗೆ ರಾಜಕೀಯ ಪಾಠ ಹೇಳಿಕೊಟ್ಟವರು. ಬಿಎಸ್​ವೈ ವಿರುದ್ಧ ಮಾತನಾಡಿದ್ರೆ ಬಾಯಲ್ಲಿ ಹುಳ ಬೀಳುತ್ತೆ ಎಂದು ಶಾಸಕ ಹೇಳಿದರು.

‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾನು ಬಂಡಾಯ ಅಲ್ಲ’ ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾನು ಬಂಡಾಯ ಅಲ್ಲ. ಸಿಎಂ ಬಿ.ಎಸ್​.ಯಡಿಯೂರಪ್ಪ ನನ್ನ ತಂದೆಯ ಸಮಾನ. ರಾಜ್ಯ ಬಿಜೆಪಿ ಉಸ್ತುವಾರಿಗೆ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡುತ್ತೇನೆ ಎಂದು ಹೇಳಿದರು.

ಬೈ ಎಲೆಕ್ಷನ್​ನಲ್ಲಿ ಅನಿತಾ ಕುಮಾರಸ್ವಾಮಿ ಜೊತೆ ಸಿ.ಪಿ.ಯೋಗೇಶ್ವರ್ ಒಳಒಪ್ಪಂದ ಮಾಡಿಕೊಂಡಿದ್ದರು. ಈಗ ನನ್ನಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ ಅನ್ನುತ್ತಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದರು.

ನಾಳೆ ಮತ್ತೆ ದೆಹಲಿಗೆ ಹೋಗ್ತಿದ್ದೇನೆ. ಹೋಗುವ ಮುನ್ನ ಅಸಮಾಧಾನ ಇರುವ ಶಾಸಕರ ಸಭೆ ಬೆಂಗಳೂರಿನಲ್ಲಿ ನಡೆಯುತ್ತೆ. ಬಿಜೆಪಿ ವರಿಷ್ಠರ ಬಳಿ ವ್ಯವಸ್ಥೆ ಸರಿಪಡಿಸಲು ಒತ್ತಾಯ ಮಾಡುತ್ತೇನೆ. ಎಲ್ಲರೂ ಸೇರಿ ಸಭೆ ನಡೆಸುತ್ತೇವೆ, ಇದು ಸಿಎಂ BSY ವಿರುದ್ಧ ಅಲ್ಲ. ಈಗಾಗಿರುವ ಅವ್ಯವಸ್ಥೆ, ಲೋಪ ಸರಿಪಡಿಸಲು ಸಭೆ ನಡೆಸುತ್ತೇವೆ ಎಂದು ಹೇಳಿದರು.

ನನ್ನ ಬಳಿ ಯಾವುದೇ CD ಇಲ್ಲ.. ಇದು ಅಪ್ರಸ್ತುತ, ಅಸಹ್ಯ -ಸಿ.ಪಿ.ಯೋಗೇಶ್ವರ್

Published On - 10:36 pm, Sun, 17 January 21

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್