AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಚೇತನ ಮಹಿಳೆಯ ಸಂಕಷ್ಟಕ್ಕೆ ಓಗೊಟ್ಟ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ವಿಶೇಷ ಚೇತನ ಮಹಿಳೆಯರು ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಆಲಂಬೂರಿನ ಮಹಿಳೆ ಮನೆಗೆ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಅವರ ಕಷ್ಟಕ್ಕೆ ಸ್ಪಂದಿಸಿದ್ದಾರೆ.

ವಿಶೇಷ ಚೇತನ ಮಹಿಳೆಯ ಸಂಕಷ್ಟಕ್ಕೆ ಓಗೊಟ್ಟ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರ ಬಳಿ ವಿಶೇಷ ಚೇತನ ಮಹಿಳೆಯರು ಅಳಲು ತೋಡಿಕೊಂಡ್ರು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Mar 04, 2021 | 11:12 AM

Share

ಮೈಸೂರು: ವಿಶೇಷ ಚೇತನ ಮಹಿಳೆಯೊಬ್ಬರು ತಾವು ಮೂಲಸೌಕರ್ಯದಿಂದ ವಂಚಿತವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಆಲಂಬೂರಿನ ಮಹಿಳೆ ಮನೆಗೆ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಅವರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಅಧಿಕಾರಿಗಳ ಜತೆ ಭೇಟಿ ನೀಡಿದ ಶಾಸಕ ಡಾ. ಯತೀಂದ್ರ ಮೂಲಸೌಕರ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಶೇಷ ಚೇತನ ಮಹಿಳೆಯರಿಗೆ ನೆರವಾದ ಯತೀಂದ್ರ ಕೆಲಸಕ್ಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ನನ್ನ ಮತ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಆಲಂಬೂರು ಗ್ರಾಮದ ವಿಕಲ ಚೇತನ ಸಹೋದರಿಯರು ವಸತಿ ಸೌಲಭ್ಯವಿಲ್ಲದೆ ತೊಂದರೆಗೀಡಾಗಿರುವ ಸುದ್ದಿಯು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ನಿನ್ನೆ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಕೂಡಲೇ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಯಿತು. ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗುವ ವಸತಿ ಸೌಲಭ್ಯದ ಯೋಜನೆಯಡಿ ಈ ವಿಕಲ ಚೇತನ ಸಹೋದರಿಯರಿಗೆ ಮೊದಲ ಆದ್ಯತೆಯ ಮೇರೆಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು ಹಾಗೂ ಇನ್ನಿತರ ಸರ್ಕಾರಿ ಸವಲತ್ತುಗಳನ್ನು ಶೀಘ್ರವಾಗಿ ಕಲ್ಪಿಸಿಕೊಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು ಎಂದು ಡಾ.ಯತೀಂದ್ರ ತಮ್ಮ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ.

MLA Yathindra siddaramaiah

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

MLA Yathindra siddaramaiah

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಇದನ್ನೂ ಓದಿ: ಇಂಥ ಕೆಲಸಕ್ಕೆ ಕರ್ನಾಟಕ ಭವನವನ್ನು ಬಳಸಿಕೊಂಡಿದ್ದು ತಪ್ಪು: ಶಾಸಕ ಯತೀಂದ್ರ ಸಿದ್ದರಾಮಯ್ಯ ಗರಂ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು