AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸ್ವತ್ತು ತನ್ನದಾಗಿಸಿಕೊಳ್ಳಲು ಶಾಸಕ ಜಮೀರ್​ ಪ್ಲಾನ್? ಅದರ ಮೌಲ್ಯವೆಷ್ಟು ಗೊತ್ತಾ?

ಬೆಂಗಳೂರು: ಶಾಸಕ ಜಮೀರ್​ ಅಹಮದ್​ ಖಾನ್ ಅವರು ಬಿಬಿಎಂಪಿಯ 300 ಕೋಟಿ ಆಸ್ತಿ ಕಬಳಿಸಲು ಪ್ಲಾನ್ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕಾಟನ್‌ಪೇಟೆ ಮುಖ್ಯ ರಸ್ತೆಯಲ್ಲಿ ಸೂಪರ್ ಟಾಕೀಸ್ ಪಕ್ಕದಲ್ಲಿರೋ ಅಮೂಲ್ಯ ಎರಡೂ ಮುಕ್ಕಾಲು ಎಕರೆ ಜಾಗ ಇದೆ . ಈ ಜಾಗವನ್ನು ನ್ಯಾಯಾಲಯವು 6 ವರ್ಷಗಳ ಹಿಂದೆಯೇ ಪಾಲಿಕೆ ವಶಕ್ಕೆ ಪಡೆಯುವಂತೆ ತೀರ್ಪು‌ ನೀಡಿದೆ. ಜೊತೆಗೆ ಈ ಸ್ವತ್ತಿಗೆ ಕಾಂಪೌಂಡ್ ನಿರ್ಮಿಸಬೇಕೆಂದು ಉಚ್ಛ ನ್ಯಾಯಾಲಯವು ಆದೇಶ ಹೊರಡಿಸಿತ್ತು. ಒಟ್ಟು 1,19,894 ಚದರ ಅಡಿ ವಿಸ್ತೀರ್ಣದ […]

ಸರ್ಕಾರಿ ಸ್ವತ್ತು ತನ್ನದಾಗಿಸಿಕೊಳ್ಳಲು ಶಾಸಕ ಜಮೀರ್​ ಪ್ಲಾನ್? ಅದರ ಮೌಲ್ಯವೆಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on:Sep 19, 2020 | 1:10 PM

Share

ಬೆಂಗಳೂರು: ಶಾಸಕ ಜಮೀರ್​ ಅಹಮದ್​ ಖಾನ್ ಅವರು ಬಿಬಿಎಂಪಿಯ 300 ಕೋಟಿ ಆಸ್ತಿ ಕಬಳಿಸಲು ಪ್ಲಾನ್ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಕಾಟನ್‌ಪೇಟೆ ಮುಖ್ಯ ರಸ್ತೆಯಲ್ಲಿ ಸೂಪರ್ ಟಾಕೀಸ್ ಪಕ್ಕದಲ್ಲಿರೋ ಅಮೂಲ್ಯ ಎರಡೂ ಮುಕ್ಕಾಲು ಎಕರೆ ಜಾಗ ಇದೆ . ಈ ಜಾಗವನ್ನು ನ್ಯಾಯಾಲಯವು 6 ವರ್ಷಗಳ ಹಿಂದೆಯೇ ಪಾಲಿಕೆ ವಶಕ್ಕೆ ಪಡೆಯುವಂತೆ ತೀರ್ಪು‌ ನೀಡಿದೆ. ಜೊತೆಗೆ ಈ ಸ್ವತ್ತಿಗೆ ಕಾಂಪೌಂಡ್ ನಿರ್ಮಿಸಬೇಕೆಂದು ಉಚ್ಛ ನ್ಯಾಯಾಲಯವು ಆದೇಶ ಹೊರಡಿಸಿತ್ತು.

ಒಟ್ಟು 1,19,894 ಚದರ ಅಡಿ ವಿಸ್ತೀರ್ಣದ ಈ ಜಾಗದಲ್ಲಿ ಈಶಾನ್ಯ ಭಾಗದಲ್ಲಿದ್ದ ಸುಮಾರು 18,900 ಚದರ ಅಡಿ ಜಾಗವನ್ನ ಲಡಾಕ್ ಶಾ ವಾಲಿ ಮಸೀದಿ ಗೆ ಒಪ್ಪಿಸುವಂತೆ ಆದೇಶ ನೀಡಲಾಗಿದೆ. ನ್ಯಾಯಾಲಯದ ಆದೇಶದಂತೆ ಮತ್ತು ಸರ್ಕಾರಿ ಆದೇಶದಂತೆ ಸದರಿ ಸ್ವತ್ತಿಗೆ‌ ತಂತಿ ಬೇಲಿ ಹಾಕಲು ತೀರ್ಮಾನ ತೆಗೆದುಕೊಂಡ ಪಾಲಿಕೆಯು ಈ ಸಂಬಂಧ ಟೆಂಡರ್ ಆಹ್ವಾನಿಸಿತ್ತು.

C. S. ಜಗದೀಶ್ ಎಂಬ ಗುತ್ತಿಗೆದಾರನಿಗೆ 49 ಲಕ್ಷ ರೂಪಾಯಿಗಳ ವೆಚ್ಛದಲ್ಲಿ ಈ ಸ್ವತ್ತಿಗೆ ಕಾಂಪೌಂಡ್ ನಿರ್ಮಿಸಲು ದಿನಾಂಕ 19/05/2015 ರಂದು “ಕಾರ್ಯಾದೇಶ ಪತ್ರ”ವನ್ನು ನೀಡಿದೆ. ಆದರೆ, ಕಳೆದ ಐದಾರು ವರ್ಷಗಳಿಂದಲೂ ಪಾಲಿಕೆಯ ಈ ಸ್ವತ್ತಿಗೆ ಕಾಂಪೌಂಡ್ ಅನ್ನು ನಿರ್ಮಾಣ ಮಾಡಿಯೇ ಇಲ್ಲ. ಉಚ್ಛ ನ್ಯಾಯಾಲಯದ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತನ್ನೂ ನೀಡಿಲ್ಲ. ಪೀರ್ ಗ್ರೌಂಡ್ ಅಂತಲೇ ಈ ಜಾಗವನ್ನು ಕರೆಯುತ್ತಾರೆ.

ಪಾಲಿಕೆಯ ಚಾಮರಾಜಪೇಟೆ ವಿಭಾಗದ ಕಾರ್ಯಪಾಲಕ ಅಭಿಯಂತರ ತನ್ವೀರ್ ಅಹಮದ್ ಆಗಿದ್ದು, ಶಾಸಕ ಜಮೀರ್ ಆಪ್ತವಲಯದಲ್ಲಿದ್ದಾರೆ ಎನ್ನಲಾದ ತನ್ವೀರ್ ಅಹಮದ್ ಕಳೆದ ಐದಾರು ವರ್ಷಗಳಿಂದಲೂ ಚಾಮರಾಜಪೇಟೆ ವಿಭಾಗದಲ್ಲಿಯೇ ಮುಂದುವರೆದಿದ್ದಾರೆ. ಹೀಗಾಗಿ ಪಾಲಿಕೆ ಸ್ವತ್ತನ್ನ ವಶಕ್ಕೆ ಪಡೆಯಬೇಕು ಎಂದು ಎಸಿಬಿ ಹಾಗೂ ಬಿಎಂಟಿಎಫ್​ಗೆ ಎನ್.ಆರ್. ರಮೇಶ್ ದೂರು ನೀಡಿದ್ದಾರೆ. ಎನ್.ಆರ್ ರಮೇಶ್ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷರಾಗಿದ್ದಾರೆ.

Published On - 1:05 pm, Sat, 19 September 20

ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು