AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸ್ವತ್ತು ತನ್ನದಾಗಿಸಿಕೊಳ್ಳಲು ಶಾಸಕ ಜಮೀರ್​ ಪ್ಲಾನ್? ಅದರ ಮೌಲ್ಯವೆಷ್ಟು ಗೊತ್ತಾ?

ಬೆಂಗಳೂರು: ಶಾಸಕ ಜಮೀರ್​ ಅಹಮದ್​ ಖಾನ್ ಅವರು ಬಿಬಿಎಂಪಿಯ 300 ಕೋಟಿ ಆಸ್ತಿ ಕಬಳಿಸಲು ಪ್ಲಾನ್ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕಾಟನ್‌ಪೇಟೆ ಮುಖ್ಯ ರಸ್ತೆಯಲ್ಲಿ ಸೂಪರ್ ಟಾಕೀಸ್ ಪಕ್ಕದಲ್ಲಿರೋ ಅಮೂಲ್ಯ ಎರಡೂ ಮುಕ್ಕಾಲು ಎಕರೆ ಜಾಗ ಇದೆ . ಈ ಜಾಗವನ್ನು ನ್ಯಾಯಾಲಯವು 6 ವರ್ಷಗಳ ಹಿಂದೆಯೇ ಪಾಲಿಕೆ ವಶಕ್ಕೆ ಪಡೆಯುವಂತೆ ತೀರ್ಪು‌ ನೀಡಿದೆ. ಜೊತೆಗೆ ಈ ಸ್ವತ್ತಿಗೆ ಕಾಂಪೌಂಡ್ ನಿರ್ಮಿಸಬೇಕೆಂದು ಉಚ್ಛ ನ್ಯಾಯಾಲಯವು ಆದೇಶ ಹೊರಡಿಸಿತ್ತು. ಒಟ್ಟು 1,19,894 ಚದರ ಅಡಿ ವಿಸ್ತೀರ್ಣದ […]

ಸರ್ಕಾರಿ ಸ್ವತ್ತು ತನ್ನದಾಗಿಸಿಕೊಳ್ಳಲು ಶಾಸಕ ಜಮೀರ್​ ಪ್ಲಾನ್? ಅದರ ಮೌಲ್ಯವೆಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on:Sep 19, 2020 | 1:10 PM

Share

ಬೆಂಗಳೂರು: ಶಾಸಕ ಜಮೀರ್​ ಅಹಮದ್​ ಖಾನ್ ಅವರು ಬಿಬಿಎಂಪಿಯ 300 ಕೋಟಿ ಆಸ್ತಿ ಕಬಳಿಸಲು ಪ್ಲಾನ್ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಕಾಟನ್‌ಪೇಟೆ ಮುಖ್ಯ ರಸ್ತೆಯಲ್ಲಿ ಸೂಪರ್ ಟಾಕೀಸ್ ಪಕ್ಕದಲ್ಲಿರೋ ಅಮೂಲ್ಯ ಎರಡೂ ಮುಕ್ಕಾಲು ಎಕರೆ ಜಾಗ ಇದೆ . ಈ ಜಾಗವನ್ನು ನ್ಯಾಯಾಲಯವು 6 ವರ್ಷಗಳ ಹಿಂದೆಯೇ ಪಾಲಿಕೆ ವಶಕ್ಕೆ ಪಡೆಯುವಂತೆ ತೀರ್ಪು‌ ನೀಡಿದೆ. ಜೊತೆಗೆ ಈ ಸ್ವತ್ತಿಗೆ ಕಾಂಪೌಂಡ್ ನಿರ್ಮಿಸಬೇಕೆಂದು ಉಚ್ಛ ನ್ಯಾಯಾಲಯವು ಆದೇಶ ಹೊರಡಿಸಿತ್ತು.

ಒಟ್ಟು 1,19,894 ಚದರ ಅಡಿ ವಿಸ್ತೀರ್ಣದ ಈ ಜಾಗದಲ್ಲಿ ಈಶಾನ್ಯ ಭಾಗದಲ್ಲಿದ್ದ ಸುಮಾರು 18,900 ಚದರ ಅಡಿ ಜಾಗವನ್ನ ಲಡಾಕ್ ಶಾ ವಾಲಿ ಮಸೀದಿ ಗೆ ಒಪ್ಪಿಸುವಂತೆ ಆದೇಶ ನೀಡಲಾಗಿದೆ. ನ್ಯಾಯಾಲಯದ ಆದೇಶದಂತೆ ಮತ್ತು ಸರ್ಕಾರಿ ಆದೇಶದಂತೆ ಸದರಿ ಸ್ವತ್ತಿಗೆ‌ ತಂತಿ ಬೇಲಿ ಹಾಕಲು ತೀರ್ಮಾನ ತೆಗೆದುಕೊಂಡ ಪಾಲಿಕೆಯು ಈ ಸಂಬಂಧ ಟೆಂಡರ್ ಆಹ್ವಾನಿಸಿತ್ತು.

C. S. ಜಗದೀಶ್ ಎಂಬ ಗುತ್ತಿಗೆದಾರನಿಗೆ 49 ಲಕ್ಷ ರೂಪಾಯಿಗಳ ವೆಚ್ಛದಲ್ಲಿ ಈ ಸ್ವತ್ತಿಗೆ ಕಾಂಪೌಂಡ್ ನಿರ್ಮಿಸಲು ದಿನಾಂಕ 19/05/2015 ರಂದು “ಕಾರ್ಯಾದೇಶ ಪತ್ರ”ವನ್ನು ನೀಡಿದೆ. ಆದರೆ, ಕಳೆದ ಐದಾರು ವರ್ಷಗಳಿಂದಲೂ ಪಾಲಿಕೆಯ ಈ ಸ್ವತ್ತಿಗೆ ಕಾಂಪೌಂಡ್ ಅನ್ನು ನಿರ್ಮಾಣ ಮಾಡಿಯೇ ಇಲ್ಲ. ಉಚ್ಛ ನ್ಯಾಯಾಲಯದ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತನ್ನೂ ನೀಡಿಲ್ಲ. ಪೀರ್ ಗ್ರೌಂಡ್ ಅಂತಲೇ ಈ ಜಾಗವನ್ನು ಕರೆಯುತ್ತಾರೆ.

ಪಾಲಿಕೆಯ ಚಾಮರಾಜಪೇಟೆ ವಿಭಾಗದ ಕಾರ್ಯಪಾಲಕ ಅಭಿಯಂತರ ತನ್ವೀರ್ ಅಹಮದ್ ಆಗಿದ್ದು, ಶಾಸಕ ಜಮೀರ್ ಆಪ್ತವಲಯದಲ್ಲಿದ್ದಾರೆ ಎನ್ನಲಾದ ತನ್ವೀರ್ ಅಹಮದ್ ಕಳೆದ ಐದಾರು ವರ್ಷಗಳಿಂದಲೂ ಚಾಮರಾಜಪೇಟೆ ವಿಭಾಗದಲ್ಲಿಯೇ ಮುಂದುವರೆದಿದ್ದಾರೆ. ಹೀಗಾಗಿ ಪಾಲಿಕೆ ಸ್ವತ್ತನ್ನ ವಶಕ್ಕೆ ಪಡೆಯಬೇಕು ಎಂದು ಎಸಿಬಿ ಹಾಗೂ ಬಿಎಂಟಿಎಫ್​ಗೆ ಎನ್.ಆರ್. ರಮೇಶ್ ದೂರು ನೀಡಿದ್ದಾರೆ. ಎನ್.ಆರ್ ರಮೇಶ್ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷರಾಗಿದ್ದಾರೆ.

Published On - 1:05 pm, Sat, 19 September 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ