AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು

ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡರು. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೇಳಿದರು.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು
MTB ನಾಗರಾಜ್
KUSHAL V
| Edited By: ಸಾಧು ಶ್ರೀನಾಥ್​|

Updated on: Nov 28, 2020 | 1:31 PM

Share

ಬೆಂಗಳೂರು: ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೀಗೆ ಹತಾಶೆಯ ಮಾತನ್ನಾಡಿದ್ದಾರೆ.

ನಾವು ಮಂತ್ರಿಯಾಗಿದ್ದವರು, ಈಗ ಶಾಸಕರಾಗಿದ್ದೇವೆ. ಈಗ ಶಾಸಕರಾಗಿರುವುದು ನಮಗೆ ಕಷ್ಟ. ರಮೇಶ್ ಜಾರಕಿಹೊಳಿ ಭೇಟಿಗೆ ಬೇರೆ ವಿಶೇಷ ಇಲ್ಲ. ನಾವೆಲ್ಲಾ 15 ದಿನ ಮುಂಬೈನಲ್ಲಿ ಒಟ್ಟಾಗಿ ಇದ್ದೆವು. ಹೀಗಾಗಿ ಕಷ್ಟ, ಸುಖ ಮಾತನಾಡಲು ಭೇಟಿಯಾಗಿದ್ದೆ ಎಂದು ನಾಗರಾಜ್ ಹೇಳಿದರು.

ಸಚಿವ ಸ್ಥಾನ ಕೊಡುತ್ತೇನೆ, ಸಚಿವರನ್ನಾಗಿ ಮಾಡುತ್ತೇನೆ ಎಂದು ಸಿಎಂ ಹೇಳುತ್ತಲೇ ಇದ್ದಾರೆ. ಅದ್ರೆ ಈವರೆಗೂ ಮಂತ್ರಿ ಮಾಡಿಲ್ಲ. ನಾವು ಈಗ ಮಂತ್ರಿ ಆಗುವವರೆಗೂ ಕಾಯಲೇಬೇಕು. ನಾನು ವಿಧಾನ ಪರಿಷತ್ ಸದಸ್ಯನಾಗಿ 5 ತಿಂಗಳಾಗಿದೆ. 17 ಜನ ಒಟ್ಟಾಗಿ ಇದ್ದೆವು, ನಾವು ಇನ್ನೂ ಮಂತ್ರಿ ಆಗಿಲ್ಲ. ನಮ್ಮ ಹಣೆಬರಹ ಕೆಟ್ಟಿರಬೇಕು, ಹೀಗಾಗಿ ಮಂತ್ರಿ ಆಗಿಲ್ಲ. ಆದರೆ, ರಮೇಶ್ ಜಾರಕಿಹೊಳಿ ಮೇಲೆ ನಮಗೆ ಅಸಮಾಧಾನವಿಲ್ಲ ಎಂದು ನಾಗರಾಜ್ ಹೇಳಿದರು.

ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ MTB ಇಂದು ಭೇಟಿ ಕೊಟ್ಟಿದ್ದರು. ಸಿಎಂ ಭೇಟಿ ಬಳಿಕ ನಾಗರಾಜ್​ ಸದಾಶಿವನಗರದಲ್ಲಿರುವ ರಮೇಶ್ ನಿವಾಸಕ್ಕೆ ಭೇಟಿ ಕೊಟ್ಟರು. MTB ನಾಗರಾಜ್​ ನಿನ್ನೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿಯೂ ಭಾಗಿಯಾಗಿದ್ದರು.

Follow Us
KUSHAL V
KUSHAL V
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!