AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು

ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡರು. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೇಳಿದರು.

ನನ್ನ ಹಣೆಬರಹ ಕೆಟ್ಟಿರಬೇಕು.. ಅದಕ್ಕೆ ಮಂತ್ರಿಯಾಗಿಲ್ಲ -MTB ನಾಗರಾಜ್​ ಮನದಾಳದ ನೋವು
MTB ನಾಗರಾಜ್
KUSHAL V
| Edited By: |

Updated on: Nov 28, 2020 | 1:31 PM

Share

ಬೆಂಗಳೂರು: ನನ್ನ ಹಣೆಬರಹ ಕೆಟ್ಟಿರಬೇಕು. ಅದಕ್ಕೆ ನಾನು ಮಂತ್ರಿಯಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ MTB ನಾಗರಾಜ್​ ತಮ್ಮ ನೋವು ತೋಡಿಕೊಂಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿರನ್ನು ಭೇಟಿಯಾದ ಬಳಿಕ MTB ನಾಗರಾಜ್ ಹೀಗೆ ಹತಾಶೆಯ ಮಾತನ್ನಾಡಿದ್ದಾರೆ.

ನಾವು ಮಂತ್ರಿಯಾಗಿದ್ದವರು, ಈಗ ಶಾಸಕರಾಗಿದ್ದೇವೆ. ಈಗ ಶಾಸಕರಾಗಿರುವುದು ನಮಗೆ ಕಷ್ಟ. ರಮೇಶ್ ಜಾರಕಿಹೊಳಿ ಭೇಟಿಗೆ ಬೇರೆ ವಿಶೇಷ ಇಲ್ಲ. ನಾವೆಲ್ಲಾ 15 ದಿನ ಮುಂಬೈನಲ್ಲಿ ಒಟ್ಟಾಗಿ ಇದ್ದೆವು. ಹೀಗಾಗಿ ಕಷ್ಟ, ಸುಖ ಮಾತನಾಡಲು ಭೇಟಿಯಾಗಿದ್ದೆ ಎಂದು ನಾಗರಾಜ್ ಹೇಳಿದರು.

ಸಚಿವ ಸ್ಥಾನ ಕೊಡುತ್ತೇನೆ, ಸಚಿವರನ್ನಾಗಿ ಮಾಡುತ್ತೇನೆ ಎಂದು ಸಿಎಂ ಹೇಳುತ್ತಲೇ ಇದ್ದಾರೆ. ಅದ್ರೆ ಈವರೆಗೂ ಮಂತ್ರಿ ಮಾಡಿಲ್ಲ. ನಾವು ಈಗ ಮಂತ್ರಿ ಆಗುವವರೆಗೂ ಕಾಯಲೇಬೇಕು. ನಾನು ವಿಧಾನ ಪರಿಷತ್ ಸದಸ್ಯನಾಗಿ 5 ತಿಂಗಳಾಗಿದೆ. 17 ಜನ ಒಟ್ಟಾಗಿ ಇದ್ದೆವು, ನಾವು ಇನ್ನೂ ಮಂತ್ರಿ ಆಗಿಲ್ಲ. ನಮ್ಮ ಹಣೆಬರಹ ಕೆಟ್ಟಿರಬೇಕು, ಹೀಗಾಗಿ ಮಂತ್ರಿ ಆಗಿಲ್ಲ. ಆದರೆ, ರಮೇಶ್ ಜಾರಕಿಹೊಳಿ ಮೇಲೆ ನಮಗೆ ಅಸಮಾಧಾನವಿಲ್ಲ ಎಂದು ನಾಗರಾಜ್ ಹೇಳಿದರು.

ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ MTB ಇಂದು ಭೇಟಿ ಕೊಟ್ಟಿದ್ದರು. ಸಿಎಂ ಭೇಟಿ ಬಳಿಕ ನಾಗರಾಜ್​ ಸದಾಶಿವನಗರದಲ್ಲಿರುವ ರಮೇಶ್ ನಿವಾಸಕ್ಕೆ ಭೇಟಿ ಕೊಟ್ಟರು. MTB ನಾಗರಾಜ್​ ನಿನ್ನೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿಯೂ ಭಾಗಿಯಾಗಿದ್ದರು.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್