AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ನಲ್ಲಿ ಹೋಗ್ತಿದ್ದಾಗ ಮೊಬೈಲ್ ಸ್ಫೋಟ, ಬೈಕ್​ ಸವಾರನ ಎದೆ-ಕುತ್ತಿಗೆಗೆ ಗಾಯ!

ಮೈಸೂರು: ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಬೈಕ್ ಸವಾರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ. ಹುಲ್ಲಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹೆಚ್.ಎಂ.ಬಸವರಾಜು(47) ಗಾಯಗೊಂಡವರು. ಕುರಿಹುಂಡಿ ಗ್ರಾಮದ ರಸ್ತೆಯಿಂದ ಹುಲ್ಲಹಳ್ಳಿ ಗ್ರಾಮದ ಕಡೆಗೆ ಬೈಕ್​ನಲ್ಲಿ ಬಸವರಾಜು ತೆರಳುತ್ತಿದ್ದರು. ಈ ವೇಳೆ ಮೊಬೈಲ್ ರಿಂಗ್ ಆಗುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದೆ. ಮೊಬೈಲ್ ಸ್ಫೋಟದಿಂದ ನಿಯಂತ್ರಣ ಕಳೆದುಕೊಂಡ ಸವಾರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. […]

ಬೈಕ್​ನಲ್ಲಿ ಹೋಗ್ತಿದ್ದಾಗ ಮೊಬೈಲ್ ಸ್ಫೋಟ, ಬೈಕ್​ ಸವಾರನ ಎದೆ-ಕುತ್ತಿಗೆಗೆ ಗಾಯ!
ಸಾಧು ಶ್ರೀನಾಥ್​
|

Updated on:Feb 17, 2020 | 11:39 AM

Share

ಮೈಸೂರು: ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಬೈಕ್ ಸವಾರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ. ಹುಲ್ಲಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹೆಚ್.ಎಂ.ಬಸವರಾಜು(47) ಗಾಯಗೊಂಡವರು.

ಕುರಿಹುಂಡಿ ಗ್ರಾಮದ ರಸ್ತೆಯಿಂದ ಹುಲ್ಲಹಳ್ಳಿ ಗ್ರಾಮದ ಕಡೆಗೆ ಬೈಕ್​ನಲ್ಲಿ ಬಸವರಾಜು ತೆರಳುತ್ತಿದ್ದರು. ಈ ವೇಳೆ ಮೊಬೈಲ್ ರಿಂಗ್ ಆಗುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದೆ. ಮೊಬೈಲ್ ಸ್ಫೋಟದಿಂದ ನಿಯಂತ್ರಣ ಕಳೆದುಕೊಂಡ ಸವಾರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ.

ಮೊಬೈಲ್​ ಸ್ಫೋಟದಿಂದ ಬಸವರಾಜು ಎದೆ ಹಾಗೂ ಕುತ್ತಿಗೆ ಭಾಗಗಳಿಗೆ ಗಂಭೀರ ಗಾಯಗಳಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಬಸವರಾಜುರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾನವೀಯತೆ ಮರೆತ ವಾಹನ ಸವಾರರು: ಮೊಬೈಲ್ ಸ್ಫೋಟಗೊಂಡು ನೆಲಕ್ಕುರುಳಿ ಬಿದ್ದು ರಸ್ತೆ ಮಧ್ಯೆ ನರಳಾಡುತ್ತಿದ್ದರೂ ತಕ್ಷಣ ಜನರು ಬೈಕ್ ಸವಾರನನ್ನು ರಕ್ಷಿಸಲು ಮುಂದಾಗಲಿಲ್ಲ. ಬೈಕ್ ಸವಾರನ ರಕ್ಷಣೆಗೆ ಧಾವಿಸದೆ ಮೊಬೈಲ್​ನಲ್ಲಿ ವಿಡಿಯೋ ಮಾಡುತ್ತಾ ವಾಹನ ಸವಾರರು ಅಮಾನವೀಯತೆ ಮೆರೆದಿದ್ದಾರೆ. ಸಾಕಷ್ಟು ಜಾಗೃತಿ ಮೂಡಿಸಿದರು ನೊಂದವರ ನೆರವಿಗೆ ಧಾವಿಸದೆ ಕೇವಲ ಮೊಬೈಲ್​ನಲ್ಲಿ ಚಿತ್ರೀಕರಣ ಮಾಡುತ್ತಿರುವುದು ಕಂಡುಬಂದಿದೆ.

Published On - 11:30 am, Mon, 17 February 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್