ಮೋದಿಯವರೇ ನನ್ನನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದ್ದರು: ಮಾಜಿ ಸಿಎಂ HDK

ತುಮಕೂರು: ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಶಿರಾದಲ್ಲಿ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಈ ರೀತಿ ಹೇಳಿದ್ದಾರೆ. ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು. 5 ವರ್ಷಗಳ ಕಾಲ ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್‌ನ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ಈಗ ದರಿದ್ರ ಸರ್ಕಾರ ಬಂದಿದೆ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ […]

ಮೋದಿಯವರೇ ನನ್ನನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದ್ದರು: ಮಾಜಿ ಸಿಎಂ HDK
Edited By:

Updated on: Sep 30, 2020 | 4:55 PM

ತುಮಕೂರು: ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಶಿರಾದಲ್ಲಿ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಈ ರೀತಿ ಹೇಳಿದ್ದಾರೆ.

ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು. 5 ವರ್ಷಗಳ ಕಾಲ ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್‌ನ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ಈಗ ದರಿದ್ರ ಸರ್ಕಾರ ಬಂದಿದೆ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ ಮಾಡಿದ್ದರು ಎಂದು ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪ್ರಹಾರ ಮಾಡಿದ್ದಾರೆ.

ಸಿಎಂ ಆಗುವ ಆಸೆ ಇರಲಿಲ್ಲ, ಆರೋಗ್ಯ ಸರಿ ಇಲ್ಲ ಅಂದಿದ್ದೆ:
ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಅಂದುಕೊಂಡೆ. ಆದ್ರೆ ಕಾಂಗ್ರೆಸ್​ನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದ್ರು. ದೇವೇಗೌಡರು ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ ಅಂದಿದ್ರು. ಎಷ್ಟೇ ಹೇಳಿದ್ರೂ ಕೇಳದೇ ನನಗೆ ಕಾಂಗ್ರೆಸ್​ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದ್ರು. ನನಗೆ ಮುಖ್ಯಮಂತ್ರಿ ಆಗುವ ಆಸೆ ಇರಲಿಲ್ಲ ಎಂದಿದ್ದಾರೆ.

ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ:
ಇನ್ನು ಕೆಲ ಕಾರಣಗಳಿಂದ ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ ಎಂದು ಶಿರಾ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು. ಕಾಂಗ್ರೆಸ್ ಮತ್ತು ಬಿಜೆಪಿ ಬಹಳ ವೇಗದಲ್ಲಿ ಹೊರಟಿದೆ. ಸಭೆ ಸಮಾರಂಭ ಮಾಡಿದೆ. ಆದರೂ ಇದರಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಈ ಕ್ಷೇತ್ರದಲ್ಲಿ ಕಾಡು ಗೊಲ್ಲರು ನನಗೆ ಸತ್ಕಾರ ನೀಡಿದ್ದಾರೆ. ನಾನು ಗ್ರಾಮ ವಾಸ್ತವ್ಯ ಮಾಡಿದ್ದು ಕಾಡು ಗೊಲ್ಲರ ಮನೆಯಲ್ಲಿ, ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತ ನಿರ್ಣಾಯಕ ಎಂದು ಕುಮಾರಸ್ವಾಮಿ ತಿಳಿಸಿದ್ರು.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us