AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಂತ್ರಣ ಇಲ್ಲದಿದ್ದರೂ BSY ಇದ್ದ ವೇದಿಕೆ ಏರಿದ ಹ್ಯಾರಿಸ್ ಪುತ್ರ ನಲಪಾಡ್!

ಬೆಂಗಳೂರು: ಆಮಂತ್ರಣ ಇಲ್ಲದಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ N.A. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ವೇದಿಕೆಯನ್ನು ಹಂಚಿಕೊಂಡಿದ್ದಾರೆ! ಸಿಎಂ ಯಡಿಯೂರಪ್ಪ ಕ್ಲೀನ್ ಏರ್ ಸ್ಟ್ರೀಟ್ ಪರಿಕಲ್ಪನೆಗೆ ಚಾಲನೆ ನೀಡಿದರು. ತನ್ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೊದಲು ಸ್ಥಳೀಯ ಶಾಸಕ N.A.ಹ್ಯಾರಿಸ್ ವೇದಿಕೆ ಹಂಚಿಕೊಂಡರು. ಬಳಿಕ, ಅವರ ಹಿಂದೆಯೇ ಬಂದು ಪುತ್ರ ನಲಪಾಡ್ ಹಿಂದಿನ ಸಾಲಿನಲ್ಲಿ ಕುಳಿತುಕೊಂಡರು. ಆದ್ರೆ ಸರ್ಕಾರಿ ಕಾರ್ಯಕ್ರಮದಲ್ಲಿ ನಲಪಾಡ್ ಹ್ಯಾರಿಸ್‌ಗೇನು ಕೆಲಸ? ಸಚಿವರು, ಶಾಸಕರು ಮತ್ತು ಅಧಿಕಾರಿಗಳಿದ್ದ ವೇದಿಕೆಯಲ್ಲಿ ನಲಪಾಡ್‌ಗೆ ಏನು […]

ಆಮಂತ್ರಣ ಇಲ್ಲದಿದ್ದರೂ BSY ಇದ್ದ ವೇದಿಕೆ ಏರಿದ ಹ್ಯಾರಿಸ್ ಪುತ್ರ ನಲಪಾಡ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Nov 07, 2020 | 1:06 PM

Share

ಬೆಂಗಳೂರು: ಆಮಂತ್ರಣ ಇಲ್ಲದಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ N.A. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ವೇದಿಕೆಯನ್ನು ಹಂಚಿಕೊಂಡಿದ್ದಾರೆ!

ಸಿಎಂ ಯಡಿಯೂರಪ್ಪ ಕ್ಲೀನ್ ಏರ್ ಸ್ಟ್ರೀಟ್ ಪರಿಕಲ್ಪನೆಗೆ ಚಾಲನೆ ನೀಡಿದರು. ತನ್ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೊದಲು ಸ್ಥಳೀಯ ಶಾಸಕ N.A.ಹ್ಯಾರಿಸ್ ವೇದಿಕೆ ಹಂಚಿಕೊಂಡರು. ಬಳಿಕ, ಅವರ ಹಿಂದೆಯೇ ಬಂದು ಪುತ್ರ ನಲಪಾಡ್ ಹಿಂದಿನ ಸಾಲಿನಲ್ಲಿ ಕುಳಿತುಕೊಂಡರು.

ಆದ್ರೆ ಸರ್ಕಾರಿ ಕಾರ್ಯಕ್ರಮದಲ್ಲಿ ನಲಪಾಡ್ ಹ್ಯಾರಿಸ್‌ಗೇನು ಕೆಲಸ? ಸಚಿವರು, ಶಾಸಕರು ಮತ್ತು ಅಧಿಕಾರಿಗಳಿದ್ದ ವೇದಿಕೆಯಲ್ಲಿ ನಲಪಾಡ್‌ಗೆ ಏನು ಕೆಲಸ? ಆಮಂತ್ರಣ ಇಲ್ಲದೇ ಹೋದ್ರು ನಲಪಾಡ್ ಹ್ಯಾರಿಸ್ ವೇದಿಕೆ ಏರಿದ್ದು ಯಾಕೆ? ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ಅಧಿಕಾರಿಗಳು ಚರ್ಚಿಸತೊಡಗಿದರು.

ಅಷ್ಟೇ ಅಲ್ಲ; ಹ್ಯಾರಿಸ್ ಹಿಂದೆ ಕುಳಿತು ಪುತ್ರ ನಲಪಾಡ್ ಪೋಸ್ ನೀಡಿದ್ದೇ ನೀಡಿದ್ದು! ಜೊತೆಗೆ, ಚರ್ಚ್ ಸ್ಟ್ರೀಟ್‌ನಲ್ಲಿ ಸಿಎಂ ಯಡಿಯೂರಪ್ಪ ನಡೆದುಕೊಂಡು ಹೋಗುತ್ತಿದ್ದರೆ ಹ್ಯಾರಿಸ್ ಪುತ್ರ ನಲಪಾಡ್ ಮಾತ್ರ ಎಲೆಕ್ಟ್ರಾನಿಕ್​ ವೆಹಿಕಲ್‌ನಲ್ಲಿ ಸಂಚಾರ ಮಾಡಿ, ಅಧಿಕಾರಿಗಳ ಹುಬ್ಬೇರುವಂತೆ ಮಾಡಿದರು.

Published On - 1:03 pm, Sat, 7 November 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!