AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ | ನಿಂದಿಸಿದವರ ಮುಂದೆಯೇ ಸಾಮ್ರಾಟನಾಗಿ ಮೆರೆದ ಸಿರಾಜ್​ ಮಾನವೀಯ ಮುಖ

ಆಸಿಸ್​ ಪ್ರವಾಸದಲ್ಲಿ ಆತನಿಗೆ ಆದ ಮಾನಸಿಕ ಹಿಂಸೆ, ತಂದೆಯ ಅಗಲಿಕೆಯ ನೋವು, ಜನಾಂಗೀಯ ನಿಂದನೆಗಳ ನಡುವೆ ಆತ ತೋರಿದ ಮಾನವಿಯತೆಯ ಮುಖ ಕ್ರಿಕೆಟ್​ ಪ್ರೇಮಿಗಳ ಹೃದಯ ಗೆದ್ದಿದೆ.

ವೈರಲ್ | ನಿಂದಿಸಿದವರ ಮುಂದೆಯೇ ಸಾಮ್ರಾಟನಾಗಿ ಮೆರೆದ ಸಿರಾಜ್​ ಮಾನವೀಯ ಮುಖ
ಪೆಟ್ಟು ತಿಂದ ಗ್ರೀನ್​ ನೆರವಿಗೆ ಬಂದ ಸಿರಾಜ್​
ಪೃಥ್ವಿಶಂಕರ
|

Updated on:Jan 21, 2021 | 5:08 PM

Share

ಮಹಮದ್​ ಸಿರಾಜ್​, ಹೈದ್ರಾಬಾದ್​ನ ಗಲ್ಲಿಯೊಂದರಲ್ಲಿ ಬಡತನಗಳ ನಡುವೆ ಅರಳಿದ ಪ್ರತಿಭೆ. ಸಿರಾಜ್​ ಆಸಿಸ್​ ಪ್ರವಾಸಕ್ಕೆ ತೆರಳುವವರೆಗೆ ಕ್ರಿಕೆಟ್​ ಪ್ರೇಮಿಗಳಲ್ಲಿ ಗುರುತಿಸಿಕೊಂಡಿದ್ದು ತೀರಾ ಕಡಿಮೆ. ಆದರೆ ಆಸಿಸ್​ ಪ್ರವಾಸದಲ್ಲಿ ಆತನಿಗೆ ಆದ ಮಾನಸಿಕ ಹಿಂಸೆ, ತಂದೆಯ ಅಗಲಿಕೆಯ ನೋವು, ಜನಾಂಗೀಯ ನಿಂದನೆಗಳ ನಡುವೆ ಆತ ತೋರಿದ ಮಾನವಿಯತೆಯ ಮುಖ ಕ್ರಿಕೆಟ್​ ಪ್ರೇಮಿಗಳ ಹೃದಯ ಗೆದ್ದಿದೆ.

ಸಿಡ್ನಿಯಲ್ಲಿ ನಡೆದ ಭಾರತ- ಆಸ್ಟ್ರೇಲಿಯಾ ನಡುವಿನ ಅಭ್ಯಾಸ ಪಂದ್ಯದ ವೇಳೆ ಆಸಿಸ್​ ತಂಡದ ಸ್ಫಿನ್ನರ್​ ಕ್ಯಾಮರೂನ್ ಗ್ರೀನ್‌, ಕ್ರಿಸ್​​ನಲ್ಲಿ ಬ್ಯಾಟಿಂಗ್​ ಮಾಡುತ್ತಿದ್ದ ಜಸ್ಪ್ರಿತ್​ ಬುಮ್ರಾಗೆ ಬೌಲಿಂಗ್​ ಮಾಡಿದರು. ಗ್ರೀನ್‌ ಎಸೆದ ಚೆಂಡನ್ನು ಬುಮ್ರಾ ರಬಸವಾಗಿ ಬಾರಿಸಿದರು. ಬುಮ್ರಾ ಬ್ಯಾಟ್​ನಿಂದ ಸಿಡಿದ ಚೆಂಡು ನೇರವಾಗಿ ಗ್ರೀನ್‌ ಕಡೆಗೆ ಹಾರಿಬಂತು. ರಬಸವಾಗಿ ಬಂದ ಚೆಂಡನ್ನು ಗ್ರೀನ್​ ಹಿಡಿಯಲು ಯತ್ನಿಸಿದರು. ಆ ಯತ್ನದಲ್ಲಿ ಗ್ರೀನ್​ ಕೈಗೆ ತಗುಲಿದ ಚೆಂಡು ಕೈತಪ್ಪಿ ಗ್ರೀನ್​ ತಲೆಗೆ ರಬಸವಾಗಿ ಬಡಿಯಿತು.

ಚೆಂಡು ತಲೆಗೆ ಬಡಿದ ಕೂಡಲೇ ಗ್ರೀನ್​ ಅಲ್ಲಿಯೇ ಕುಸಿದು ಬಿದ್ದರು. ಕೂಡಲೇ ನಾನ್​ ಸ್ರ್ಟೈಕ್​ನಲ್ಲಿ ನಿಂತಿದ್ದ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಮಹಮದ್​ ಸಿರಾಜ್​ ಕೂಡಲೇ ರನ್​ ಗಳಿಸುವುದನ್ನು ಬಿಟ್ಟು, ತಮ್ಮ ಕೈನಲ್ಲಿದ್ದ ಬ್ಯಾಟ್​ ಎಸೆದು ಗ್ರೀನ್​ ನೆರವಿಗೆ ದಾವಿಸಿದರು. ನೋವಿನಿಂದ ಓದ್ದಾಡುತ್ತಿದ್ದ ಗ್ರೀನ್​ನನ್ನು, ಸಿರಾಜ್ ಸಂತೈಸಿದರು. ಸಿರಾಜ್​ ಅವರ ಈ ಕ್ರೀಡಾ ಸ್ಫೂರ್ತಿಯನ್ನು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.

ಮೊಹಮದ್ ಸಿರಾಜ್​ರ ಮಾನವೀಯ ಮುಖವನ್ನು ಬಿಂಬಿಸುವ ವಿಡಿಯೊ ಹಂಚಿಕೊಂಡಿರುವ ಹಲವರು, ಜನಾಂಗೀಯ ನಿಂದನೆಯನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯನ್ನರು, ‘ಜನಾಂಗೀಯ ನಿಂದನೆ ಮಾಡಿರುವ ಕೆಲವೇ ದುಷ್ಟರು ಇಡೀ ಆಸ್ಟ್ರೇಲಿಯಾವನ್ನು ಪ್ರತಿನಿಧಿಸುವುದಿಲ್ಲ. ನಾವು ಕ್ರಿಕೆಟ್ ಇಷ್ಟಪಡುತ್ತೇವೆ’ ಎಂದು ಹೇಳಿದ್ದಾರೆ.

ಇಲ್ಲಿದೆ ವಿಡಿಯೊ

India vs Australia Test Series | 5 ವಿಕೆಟ್​ ಪಡೆದ ಸಿರಾಜ್​ ಅಪರೂಪದ ಸಾಧನೆಗೆ ಅಪ್ಪನ ನೆನಪೇ ಆಸರೆ

Published On - 4:55 pm, Thu, 21 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ