AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ: ರಿಷಿ​ಗೆ ಭಾರತ ಬೇರೆ ದೇಶದಂತೆ, ನೋಡಿ ಖುಷಿಪಡಬೇಕು ಎಂದ​ ಪೈ

ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ ಒಲಿದಿದ್ದು, ಇದು ಭಾರತೀಯ ಸಂತೋಷಕ್ಕೆ ಕಾರಣವಾಗಿದೆ. ಇನ್ನು ಷಿ ಸುನಕ್ ಬ್ರಿಟನ್ ಪ್ರಧಾನಿಯಾಗಿ ಆಯ್ಕೆrಉವ ಬಗ್ಗೆ ಮೋಹನ್​ ದಾಸ್​ ಪೈ ಹೇಳಿದ್ದಿಷ್ಟು.

ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ:  ರಿಷಿ​ಗೆ ಭಾರತ ಬೇರೆ ದೇಶದಂತೆ, ನೋಡಿ ಖುಷಿಪಡಬೇಕು ಎಂದ​ ಪೈ
Rishi Sunak And Mohandas pai
TV9 Web
| Edited By: |

Updated on:Oct 24, 2022 | 7:38 PM

Share

ಬೆಂಗಳೂರು: ಬ್ರಿಟನ್​ನಲ್ಲಿ ನಡೆದ ಸಿನಿಮೀಯ ರೀತಿಯ ರಾಜಕೀಯ ಬೆಳವಣಿಗೆ ಬಳಿಕ ರಿಷಿ ಸುನಕ್(Rishi Sunak) ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿಯವರ ಅಳಿಯ ರಿಷಿ ಸುನಕ್ ಇನ್ಮುಂದೆ ಬ್ರಿಟನ್ ಪ್ರಧಾನಿ. ಇನ್ನು ಈ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ(mohandas pai )ಪ್ರತಿಕ್ರಿಯಿಸಿದ್ದು, ಎಲ್ಲಾ ಭಾರತೀಯರು ಖುಷಿಪಡುವಂತಹ ಸಂದರ್ಭವಿದು ಎಂದಿದ್ದಾರೆ.

ಇಂದು(ಅ.24) ಅತ್ತ ಭಾರತದ ಅಳಿಯ ರಿಷಿಗೆ ಬ್ರಿಟನ್ ಪಟ್ಟ ಒಲಿಯುತ್ತಿದ್ದಂತೆಯೇ ಇತ್ತ ಟಿವಿ9ಗೆ ಉದ್ಯಮಿ ಮೋಹನ್ ದಾಸ್ ಪೈ  ಮಾತನಾಡಿ, ಒಬ್ಬ ಭಾರತೀಯ ಬ್ರಿಟನ್​ ಪ್ರಧಾನಮಂತ್ರಿಯಾಗಿದ್ದಾರೆ. ರಿಷಿ ನಿಷ್ಠೆ ಬ್ರಿಟನ್​ಗೆ ಮಾತ್ರ, ಬ್ರಿಟನ್​ಗಾಗಿ ಕೆಲಸ ಮಾಡುತ್ತಾರೆ. ರಿಷಿ ಸುನಕ್​ಗೆ ಭಾರತ ಬೇರೆ ದೇಶದಂತೆ ಇರುತ್ತದೆ. ಭಾರತಕ್ಕೆ ಏನೋ ಆಗುತ್ತೆ ಎಂದು ಅಂದುಕೊಳ್ಳಬಾರದು. ಭಾರತೀಯನೊಬ್ಬ ಬ್ರಿಟನ್ ಪ್ರಧಾನಿಯಾದ ಎಂದು ಖುಷಿಪಡಬೇಕು ಎಂದು ಹೇಳಿದರು.

ಯುಕೆ ಪ್ರಧಾನಿ ರಿಷಿ ಸುನಕ್ ಯಾರು?, ಭಾರತದೊಂದಿಗೆ ಅವರಿಗಿರುವ ಸಂಬಂಧ ಏನು?

ರಿಷಿ ಸುನಕ್​ ಯುನೈಟೆಡ್​ ಕಿಂಗ್​ಡಮ್​ ಪ್ರಜೆಯಾಗಿದ್ದಾರೆ. ನಾವು ಅದನ್ನು ನೋಡಬೇಕು. ನಮಸ್ಕಾರ ಮಾಡಿ ಸುಮ್ಮನಿರಬೇಕು ಎಂದು ಅಭಿಪ್ರಾಯಪಟ್ಟರು.

ಬ್ರಿಟನ್ ಪ್ರಧಾನಿಯಾಗಿ ಕೇವಲ 45 ದಿನಗಳಲ್ಲೇ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದರಿಂದ, ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ನೂತನ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಜೊತೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸಲು ನಿಂತಿದ್ದ ಪೆನ್ನಿ ಮೊರ್ಡೌಂಟ್ ಸಂಸದರ ಬೆಂಬಲದ ಬಹುಮತ ಸಿಗದೆ, ರೇಸ್​ನಿಂದ ಹೊರ ಬಿದ್ದಿದ್ದಾರೆ. ಹೀಗಾಗಿ ರಿಷಿ ಸುನಕ್ 100ಕ್ಕೂ ಹೆಚ್ಚು ಸಂಸದರ ಬೆಂಬಲದೊಂದಿಗೆ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಒಟ್ಟಿನಲ್ಲಿ ಭಾರತದ ಅಳಿಯ ಬ್ರಿಟನ್ ಪ್ರಧಾನಿಯಾಗಿದ್ದು, ಉಭಯ ದೇಶಗಳ ನಡುವಿನ ಸಂಬಂಧದ ಬಗ್ಗೆ hಲವು ನಿರೀಕ್ಷೆಗಳು ಇವೆ.

Published On - 7:27 pm, Mon, 24 October 22

Follow Us
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ