AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ 13ನೇ ಬಾರಿಗೆ ದುರ್ಗಾದೇವಿ ದೇವಸ್ಥಾನದ ಹುಂಡಿ ಹಣ ಕಳವು

ನೆಲಮಂಗಲ: ಲಾಕ್​ಡೌನ್ ಸಮಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ಕೆರೆ ಏರಿ ಮೇಲಿರುವ ದುರ್ಗಾದೇವಿ ದೇವಸ್ಥಾನದ ಹುಂಡಿ ಹಣವನ್ನ ಕಳ್ಳತನ ಮಾಡಿದ್ದಾರೆ. ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಕದ್ದು ಹುಂಡಿಯನ್ನು ಕೆರೆಗೆ ಎಸೆದು ಕಳ್ಳರು ಪರಾರಿಯಾಗಿದ್ದಾರೆ. ಅಚ್ಚರಿ ಎಂದರೆ ಇದು ಸತತ 13ನೇ ಬಾರಿಗೆ ನಡೆದಿರುವ ಕಳ್ಳತನ. ಹುಂಡಿಯಲ್ಲಿ ಸುಮಾರು 1 ಲಕ್ಷ ಹಣವಿತ್ತು ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ […]

ಸತತ 13ನೇ ಬಾರಿಗೆ ದುರ್ಗಾದೇವಿ ದೇವಸ್ಥಾನದ ಹುಂಡಿ ಹಣ ಕಳವು
ಆಯೇಷಾ ಬಾನು
ಆಯೇಷಾ ಬಾನು|

Updated on:Jun 05, 2020 | 3:14 PM

Share

ನೆಲಮಂಗಲ: ಲಾಕ್​ಡೌನ್ ಸಮಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ಕೆರೆ ಏರಿ ಮೇಲಿರುವ ದುರ್ಗಾದೇವಿ ದೇವಸ್ಥಾನದ ಹುಂಡಿ ಹಣವನ್ನ ಕಳ್ಳತನ ಮಾಡಿದ್ದಾರೆ.

ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಕದ್ದು ಹುಂಡಿಯನ್ನು ಕೆರೆಗೆ ಎಸೆದು ಕಳ್ಳರು ಪರಾರಿಯಾಗಿದ್ದಾರೆ. ಅಚ್ಚರಿ ಎಂದರೆ ಇದು ಸತತ 13ನೇ ಬಾರಿಗೆ ನಡೆದಿರುವ ಕಳ್ಳತನ. ಹುಂಡಿಯಲ್ಲಿ ಸುಮಾರು 1 ಲಕ್ಷ ಹಣವಿತ್ತು ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:22 am, Fri, 5 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.