AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ. ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ […]

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!
ಆಯೇಷಾ ಬಾನು
| Edited By: |

Updated on: Aug 18, 2020 | 10:16 AM

Share

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ.

ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ ನಮಗೂ ಸೋಂಕು ಬರಬಹುದು ಎಂದು ದೇಹವನ್ನು ಆಸ್ಪತ್ರೆಗಳಲ್ಲೇ ಬಿಡುತ್ತಿದ್ದಾರೆ. ಸಂಬಂಧಿಕರಿದ್ದರೂ ಸುಮಾರು 20 ಶವಗಳು ಅನಾಥವಾಗಿವೆ. ತುಮಕೂರಿನ ಜನ ಮಾನವೀಯತೆ ಮರೆತರಾ ಎಂಬಂತಾಗಿದೆ.

ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಸರಕಾರದ ನಿಯಮದಂತೆ ಮೃತ ದೇಹ ಹಸ್ತಾಂತರ ಮಾಡಲು ಮುಂದಾದರೂ, ದೇಹ ಕೊಡ್ತೀವಿ ಅಂದ್ರೂ ಸಂಬಂಧಿಕರು ಒಲ್ಲೆ ಅಂತಿದ್ದಾರೆ. ಆರಂಭದಲ್ಲಿ ಮೃತ ದೇಹ ಹಸ್ತಾಂತರಿಸಲು ಸರಕಾರ ಹಿಂದೇಟು ಹಾಕಿತ್ತು. ಆಸ್ಪತ್ರೆ ಸಿಬ್ಬಂದಿಯೇ ಶವದ ಅಂತ್ಯಕ್ರಿಯೆ ಮಾಡುವಂತೆ ಹೇಳಿತ್ತು. ಆದರೆ ಈಗ ಸರಕಾರದ ನಿಯಮ ಬದಲಾಗಿದೆ. ಸರಕಾರದ ನಿಯಮ ಪಾಲಿಸಿದರೆ ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಎಂದು ಡಿಎಚ್ ಓ ನಾಗೇಂದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು