AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ. ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ […]

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 18, 2020 | 10:16 AM

Share

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ.

ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ ನಮಗೂ ಸೋಂಕು ಬರಬಹುದು ಎಂದು ದೇಹವನ್ನು ಆಸ್ಪತ್ರೆಗಳಲ್ಲೇ ಬಿಡುತ್ತಿದ್ದಾರೆ. ಸಂಬಂಧಿಕರಿದ್ದರೂ ಸುಮಾರು 20 ಶವಗಳು ಅನಾಥವಾಗಿವೆ. ತುಮಕೂರಿನ ಜನ ಮಾನವೀಯತೆ ಮರೆತರಾ ಎಂಬಂತಾಗಿದೆ.

ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಸರಕಾರದ ನಿಯಮದಂತೆ ಮೃತ ದೇಹ ಹಸ್ತಾಂತರ ಮಾಡಲು ಮುಂದಾದರೂ, ದೇಹ ಕೊಡ್ತೀವಿ ಅಂದ್ರೂ ಸಂಬಂಧಿಕರು ಒಲ್ಲೆ ಅಂತಿದ್ದಾರೆ. ಆರಂಭದಲ್ಲಿ ಮೃತ ದೇಹ ಹಸ್ತಾಂತರಿಸಲು ಸರಕಾರ ಹಿಂದೇಟು ಹಾಕಿತ್ತು. ಆಸ್ಪತ್ರೆ ಸಿಬ್ಬಂದಿಯೇ ಶವದ ಅಂತ್ಯಕ್ರಿಯೆ ಮಾಡುವಂತೆ ಹೇಳಿತ್ತು. ಆದರೆ ಈಗ ಸರಕಾರದ ನಿಯಮ ಬದಲಾಗಿದೆ. ಸರಕಾರದ ನಿಯಮ ಪಾಲಿಸಿದರೆ ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಎಂದು ಡಿಎಚ್ ಓ ನಾಗೇಂದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!