AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB ದಾಳಿಯಿಂದ ಬಯಲಾಯ್ತು FDA ಬ್ರಹ್ಮಾಂಡ ಭ್ರಷ್ಟಾಚಾರ.. 4 ಕೋಟಿಗೂ ಅಧಿಕ ಮೌಲ್ಯದ ಚೆಕ್ ಪತ್ತೆ

ಜನವರಿ 25ರಂದು ಬಾಗಲಕೋಟೆಯಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿತ್ತು. ಈ ವೇಳೆ ಎಸಿಬಿ ಅಧಿಕಾರಿಗಳಿಗೆ 4 ಕೋಟಿಗೂ ಹೆಚ್ಚು ಮೌಲ್ಯದ ಪರಿಹಾರದ ಚೆಕ್​ಗಳು ಸಿಕ್ಕಿವೆ. ಕೃಷ್ಣಾ ಮೇಲ್ದಂಡೆ ಯೋಜನೆಯ 70 ಜನ ಫಲಾನುಭವಿಗಳಿಗೆ ನೀಡಬೇಕಿದ್ದ ಪರಿಹಾರದ ಚೆಕ್​ಗಳನ್ನು ವಿತರಿಸದೆ ಅಧಿಕಾರಿಗಳು ಅಕ್ರಮ ಎಸಗುತ್ತಿದ್ದದ್ದು ಬಯಲಾಗಿದೆ.

ACB ದಾಳಿಯಿಂದ ಬಯಲಾಯ್ತು FDA ಬ್ರಹ್ಮಾಂಡ ಭ್ರಷ್ಟಾಚಾರ.. 4 ಕೋಟಿಗೂ ಅಧಿಕ ಮೌಲ್ಯದ ಚೆಕ್ ಪತ್ತೆ
ಬಾಗಲಕೋಟೆಯಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕಚೇರಿ
Follow us
ಆಯೇಷಾ ಬಾನು
|

Updated on: Jan 30, 2021 | 7:49 AM

ಬಾಗಲಕೋಟೆ: ಜಿಲ್ಲೆಯಲ್ಲಿ ನಡೆದ ಎಸಿಬಿ ದಾಳಿಯಿಂದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಎಸಿಬಿಗೆ 4 ಕೋಟಿ 61 ಲಕ್ಷದ 46 ಸಾವಿರದ 310 ರೂ ಮೌಲ್ಯದ 50 ಚೆಕ್​ಗಳು ಸಿಕ್ಕಿವೆ.

ಜನವರಿ 25ರಂದು ಬಾಗಲಕೋಟೆಯಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿತ್ತು. ಈ ವೇಳೆ ಎಸಿಬಿ ಅಧಿಕಾರಿಗಳಿಗೆ 4 ಕೋಟಿಗೂ ಹೆಚ್ಚು ಮೌಲ್ಯದ ಪರಿಹಾರದ ಚೆಕ್​ಗಳು ಸಿಕ್ಕಿವೆ. ಕೃಷ್ಣಾ ಮೇಲ್ದಂಡೆ ಯೋಜನೆಯ 70 ಜನ ಫಲಾನುಭವಿಗಳಿಗೆ ನೀಡಬೇಕಿದ್ದ ಪರಿಹಾರದ ಚೆಕ್​ಗಳನ್ನು ವಿತರಿಸದೆ ಅಧಿಕಾರಿಗಳು ಅಕ್ರಮ ಎಸಗುತ್ತಿದ್ದದ್ದು ಬಯಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕಾರಿಗಳು, ಸಿಬ್ಬಂದಿಯ ಮುಖವಾಡ ಕಳಚಿದೆ.

FDA ಸುನಂದಾ ತೆಗ್ಗಿಯಿಂದ ಲಂಚಕ್ಕೆ ಡಿಮ್ಯಾಂಡ್

ಸುನಂದಾ ತೆಗ್ಗಿ

ಭೂಪರಿಹಾರದ ಹಣ ಜಮಾ ಮಾಡಲು ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಇಲಾಖೆ ಕಚೇರಿ ಎಫ್‌ಡಿಎ ಸುನಂದಾ ತೆಗ್ಗಿಯವರು ಕಮತಗಿ ಪಟ್ಟಣದ ಸಂಗಪ್ಪ ಹಿರಾಳರಿಗೆ ಲಂಚ ಕೇಳಿದ್ದರು. 3 ಲಕ್ಷದ 43 ಸಾವಿರ ಭೂಪರಿಹಾರದ ಹಣ ಜಮಾ ಮಾಡಲು 4 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. FDA ಸುನಂದಾ ತೆಗ್ಗಿ ಲಂಚ ಪಡೆಯುವ ವೇಳೆ ACB ದಾಳಿ ನಡೆಸಿತ್ತು. ಇನ್ನು ಈ ಬಗ್ಗೆ ಸಂಶಯಗೊಂಡು ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದರು.

ತನಿಖೆ ವೇಳೆ 70 ರೈತರಿಗೆ ಸೇರಿದ್ದ ಭೂಪರಿಹಾರದ ಚೆಕ್ ಪತ್ತೆಯಾಗಿದೆ. ಎಲ್ಲರಿಂದಲೂ ಲಂಚ ಪಡೆದು ವಿತರಿಸುವ ಉದ್ದೇಶದಿಂದ ಚೆಕ್ ನೀಡಿರಲಿಲ್ಲ ಎಂಬುವುದು ತಿಳಿದು ಬಂದಿದೆ. ದಾಳಿ ಬಳಿಕ ಲೆಕ್ಕಾಧಿಕಾರಿಗಳಿಗೆ ಭೂಪರಿಹಾರ ಜಮಾ ಮಾಡಲು ಸೂಚನೆ ನೀಡಲಾಗಿದೆ. ಇನ್ನು ರೈತರ ಖಾತೆಗೆ ಪರಿಹಾರದ ಹಣ ಜಮಾ ಮಾಡಲಾಗಿದ್ದು ಮತ್ತೆ ಲಂಚ ಕೇಳಿದ್ರೆ ಎಸಿಬಿ ಕಚೇರಿಗೆ ತಿಳಿಸುವಂತೆ ಸಂತ್ರಸ್ತರಿಗೆ ತಿಳಿಸಲಾಗಿದೆ.

ಎಸಿಬಿ ಉತ್ತರ ವಲಯ ಎಸ್​ಪಿ, ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ ಬಾಗಲಕೋಟೆ ಎಸಿಬಿ ಡಿವೈಎಸ್ ಎಮ್.ಕೆ. ಗಂಗಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಕೇವಲ ದಾಳಿ ನಡೆಸದೆ ಎಸಿಬಿ ತಂಡ ಪರಿಹಾರ ಕೂಡ ಕೊಡಿಸಿದೆ.

ಎಲ್ರೂ ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ -ರಜನಿ ರಂಗಪ್ರವೇಶಕ್ಕೆ ಸಿದ್ದರಾಮಯ್ಯ ರಿಯಾಕ್ಷನ್​

ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು