AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾ.. ತೆರೆಮೇಲೆ ಹುಟ್ಟಲಿದೆ ಅದ್ಭುತ ದೃಶ್ಯ ವೈಭವ

ಬಾಹುಬಲಿ ಮಾಂತ್ರಿಕ ನಿರ್ದೇಶಕ ರಾಜಮೌಳಿ ಆ್ಯಕ್ಷನ್‌ ಕಟ್ ಹೇಳ್ತಿರೋ ಆರ್‌ಆರ್‌ಆರ್‌ ಸಿನಿಮಾ ಒಂದಲ್ಲ ಒಂದು ವಿಶೇಷತೆಯಿಂದ ಸೌಂಡ್‌ ಮಾಡ್ತಾನೆ ಇದೆ. ಸದ್ಯಕ್ಕಂತೂ ಆರ್‌ಆರ್‌ಆರ್‌ ಸಿನಿಮಾಗಳಿಗಾಗಿ ಚಿತ್ರತಂಡ ಹಗಲಿರುಳು ಶ್ರಮಿಸಿ ತೆರೆಗೆ ತರೋಕೆ ಹರಸಾಹಸ ಪಡ್ತಿದೆ. ಆದ್ರೀಗ ಶೂಟಿಂಗ್‌ ಗಿಂತ ಸಿನಿಮಾ ಗ್ರಾಫಿಕ್ಸ್‌ ಕೆಲಸಕ್ಕೆ ಹೆಚ್ಚು ಹಣ ಖರ್ಚು ಮಾಡೋಕೆ ತಯಾರಾಗಿದೆ ಚಿತ್ರತಂಡ. ಈ ಕುರಿತ ಲೇಟೆಸ್ಟ್ ಅಪ್‌ಡೇಟ್‌ ಇಲ್ಲಿದೆ ಓದಿ.

RRR ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾ.. ತೆರೆಮೇಲೆ ಹುಟ್ಟಲಿದೆ ಅದ್ಭುತ ದೃಶ್ಯ ವೈಭವ
ಆಯೇಷಾ ಬಾನು
|

Updated on: Dec 20, 2020 | 7:49 AM

Share

ಆರ್‌ಆರ್‌ಆರ್, ನಿರ್ದೇಶಕ ರಾಜಮೌಳಿ ಆ್ಯಕ್ಷನ್‌ ಕಟ್ ಹೇಳ್ತಿರೋ ಸಿನಿಮಾ. ಕೋಮರಂ ಭೀಮ್‌ ಪಾತ್ರದಲ್ಲಿ ಜ್ಯೂನಿಯರ್ ಎನ್‌ಟಿಆರ್‌ ಹಾಗೆಯೇ ಅಲ್ಲುರಿ ಸೀತಾರಾಮ್‌ ಪಾತ್ರದಲ್ಲಿ ರಾಮ್‌ ಚರಣ್‌ ತೇಜಾ ನಟಿಸಿ ಕಮಾಲ್‌ ಮಾಡ್ತಿರೋದು ಒಂದೆಡೆಯಾದ್ರೆ ಸಿನಿಮಾ ಕುರಿತ ಲೇಟೆಸ್ಟ್ ಅಪ್‌ಡೇಟ್‌ ಮತ್ತಷ್ಟು ಕ್ಯೂರಿಯಾಸಿಟಿ ಹುಟ್ಟುಹಾಕಿದೆ.

ತೆರೆಮೇಲೆ ಅದ್ಭುತ ದೃಶ್ಯ ವೈಭವ: ರಾಜಮೌಳಿ ಆ್ಯಕ್ಷನ್‌ ಕಟ್‌ ಹೇಳ್ತಿರೋ ಆರ್‌ಆರ್‌ಆರ್‌ ಸಿನಿಮಾ ಬರೋಬ್ಬರಿ 10 ಭಾಷೆಯಲ್ಲಿ ರಿಲೀಸ್‌ ಆಗಲಿದೆ ಅನ್ನೋ ಮಾಹಿತಿ ಇದೆ. ಹೀಗಾಗಿ ಸದ್ಯ ಹಿಂದಿ ಭಾಷೆಯ ಸಿನಿಮಾದಲ್ಲಿ ನಾಯಕರನ್ನ ಪರಿಚಯಿಸೋ ಕೆಲ್ಸಕ್ಕೆ ಆಮೀರ್‌ ಖಾನ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರಂತೆ. ಈಗಾಗ್ಲೇ ಬಾಲಿವುಡ್‌ ನಟ ಅಜೇಯ್‌ ದೇವಗನ್‌ ಹಾಗೂ ಆಲಿಯಾ ಭಟ್‌ ನಟಿಸ್ತಿದ್ದಾರೆ. ಈಗ ಆಮೀರ್‌ ಖಾನ್ ಕೂಡ ಆರ್‌ಆರ್‌ಆರ್‌ ತಂಡ ಸೇರಿದ್ದಾರೆ. ಇದೆಲ್ಲಾ ಮಾಹಿತಿ ಒಂದು ಕಡೆಯಾದ್ರೆ ಸದ್ಯ ಸಿನಿಮಾದ ಗ್ರಾಫಿಕ್ಸ್‌ಗಾಗಿ ಚಿತ್ರತಂಡ ಖರ್ಚು ಮಾಡ್ತಿರೋ ಮೊತ್ತ ಎಲ್ಲರನ್ನೂ ಬೆರಗುಗೊಳಿಸಲಿದ್ಯಂತೆ. ಆದ್ರೆ, ಇದ್ರ ಪರಿಣಾಮ ತೆರೆಮೇಲೆ ಒಂದು ಅದ್ಭುತ ದೃಶ್ಯ ವೈಭವ ಕಟ್ಟಿಕೊಡೋಕೆ ತಯಾರಾಗಿದೆ ಆರ್‌ಆರ್‌ಆರ್ ತಂಡ.

ಈಗಾಗ್ಲೇ ಆರ್‌ಆರ್‌ಆರ್‌ ಸಿನಿಮಾವನ್ನ ಬರೋಬ್ಬರಿ 400 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಮಾಡ್ತಿದೆ ಚಿತ್ರತಂಡ. ವಿಶೇಷ ಅಂದ್ರೆ ಆರ್‌ಆರ್‌ಆರ್‌ ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾಗಲಿದ್ಯಂತೆ. ಸದ್ಯ ಈ ಸುದ್ದಿ ಭಾರಿ ಸಂಚಲನ ಸೃಷ್ಟಿಸಿದೆ. ಮೊದಲೇ ರಾಜಮೌಳಿ ತಮ್ಮ ಕಲ್ಪನೆಯಂತೆ ಕೆತ್ತಿರೋ ಕಥೆ ಅಚ್ಚುಕಟ್ಟಾಗಿ ತೆರೆ ಮೇಲೆ ಮೂಡೋಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳೋ ನಿರ್ದೇಶಕ. ಹೀಗಾಗಿ ಈಗ ಗ್ರಾಫಿಕ್ಸ್‌ ವಿಚಾರವಾಗಿ ಸಿನಿಮಾ ಮೇಲಿನಿ ನಿರೀಕ್ಷೆ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಒಟ್ಟಿನಲ್ಲಿ ಆರ್‌ಆರ್‌ಆರ್‌ ಐತಿಹಾಸಿಕ ಸಿನಿಮಾಗಾಗಿ ನುರಿತ ತಂತ್ರಜ್ಞರ ತಂಡ ಕೆಲಸ ಮಾಡ್ತಿದೆ. ಆದ್ರೆ ಗ್ರಾಫಿಕ್ಸ್‌ಗಾಗಿ ಸುರೀತಿರೋ ಹಣ ಎಷ್ಟು ಅನ್ನೋದನ್ನ ಮಾತ್ರ ಚಿತ್ರತಂಡ ರಿವೀಲ್‌ ಮಾಡಿಲ್ಲ.

ರಾಜಮೌಳಿಯ RRR ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟನೆ? ಪಾತ್ರ ಯಾವುದು?

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?