AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾ.. ತೆರೆಮೇಲೆ ಹುಟ್ಟಲಿದೆ ಅದ್ಭುತ ದೃಶ್ಯ ವೈಭವ

ಬಾಹುಬಲಿ ಮಾಂತ್ರಿಕ ನಿರ್ದೇಶಕ ರಾಜಮೌಳಿ ಆ್ಯಕ್ಷನ್‌ ಕಟ್ ಹೇಳ್ತಿರೋ ಆರ್‌ಆರ್‌ಆರ್‌ ಸಿನಿಮಾ ಒಂದಲ್ಲ ಒಂದು ವಿಶೇಷತೆಯಿಂದ ಸೌಂಡ್‌ ಮಾಡ್ತಾನೆ ಇದೆ. ಸದ್ಯಕ್ಕಂತೂ ಆರ್‌ಆರ್‌ಆರ್‌ ಸಿನಿಮಾಗಳಿಗಾಗಿ ಚಿತ್ರತಂಡ ಹಗಲಿರುಳು ಶ್ರಮಿಸಿ ತೆರೆಗೆ ತರೋಕೆ ಹರಸಾಹಸ ಪಡ್ತಿದೆ. ಆದ್ರೀಗ ಶೂಟಿಂಗ್‌ ಗಿಂತ ಸಿನಿಮಾ ಗ್ರಾಫಿಕ್ಸ್‌ ಕೆಲಸಕ್ಕೆ ಹೆಚ್ಚು ಹಣ ಖರ್ಚು ಮಾಡೋಕೆ ತಯಾರಾಗಿದೆ ಚಿತ್ರತಂಡ. ಈ ಕುರಿತ ಲೇಟೆಸ್ಟ್ ಅಪ್‌ಡೇಟ್‌ ಇಲ್ಲಿದೆ ಓದಿ.

RRR ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾ.. ತೆರೆಮೇಲೆ ಹುಟ್ಟಲಿದೆ ಅದ್ಭುತ ದೃಶ್ಯ ವೈಭವ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 20, 2020 | 7:49 AM

Share

ಆರ್‌ಆರ್‌ಆರ್, ನಿರ್ದೇಶಕ ರಾಜಮೌಳಿ ಆ್ಯಕ್ಷನ್‌ ಕಟ್ ಹೇಳ್ತಿರೋ ಸಿನಿಮಾ. ಕೋಮರಂ ಭೀಮ್‌ ಪಾತ್ರದಲ್ಲಿ ಜ್ಯೂನಿಯರ್ ಎನ್‌ಟಿಆರ್‌ ಹಾಗೆಯೇ ಅಲ್ಲುರಿ ಸೀತಾರಾಮ್‌ ಪಾತ್ರದಲ್ಲಿ ರಾಮ್‌ ಚರಣ್‌ ತೇಜಾ ನಟಿಸಿ ಕಮಾಲ್‌ ಮಾಡ್ತಿರೋದು ಒಂದೆಡೆಯಾದ್ರೆ ಸಿನಿಮಾ ಕುರಿತ ಲೇಟೆಸ್ಟ್ ಅಪ್‌ಡೇಟ್‌ ಮತ್ತಷ್ಟು ಕ್ಯೂರಿಯಾಸಿಟಿ ಹುಟ್ಟುಹಾಕಿದೆ.

ತೆರೆಮೇಲೆ ಅದ್ಭುತ ದೃಶ್ಯ ವೈಭವ: ರಾಜಮೌಳಿ ಆ್ಯಕ್ಷನ್‌ ಕಟ್‌ ಹೇಳ್ತಿರೋ ಆರ್‌ಆರ್‌ಆರ್‌ ಸಿನಿಮಾ ಬರೋಬ್ಬರಿ 10 ಭಾಷೆಯಲ್ಲಿ ರಿಲೀಸ್‌ ಆಗಲಿದೆ ಅನ್ನೋ ಮಾಹಿತಿ ಇದೆ. ಹೀಗಾಗಿ ಸದ್ಯ ಹಿಂದಿ ಭಾಷೆಯ ಸಿನಿಮಾದಲ್ಲಿ ನಾಯಕರನ್ನ ಪರಿಚಯಿಸೋ ಕೆಲ್ಸಕ್ಕೆ ಆಮೀರ್‌ ಖಾನ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರಂತೆ. ಈಗಾಗ್ಲೇ ಬಾಲಿವುಡ್‌ ನಟ ಅಜೇಯ್‌ ದೇವಗನ್‌ ಹಾಗೂ ಆಲಿಯಾ ಭಟ್‌ ನಟಿಸ್ತಿದ್ದಾರೆ. ಈಗ ಆಮೀರ್‌ ಖಾನ್ ಕೂಡ ಆರ್‌ಆರ್‌ಆರ್‌ ತಂಡ ಸೇರಿದ್ದಾರೆ. ಇದೆಲ್ಲಾ ಮಾಹಿತಿ ಒಂದು ಕಡೆಯಾದ್ರೆ ಸದ್ಯ ಸಿನಿಮಾದ ಗ್ರಾಫಿಕ್ಸ್‌ಗಾಗಿ ಚಿತ್ರತಂಡ ಖರ್ಚು ಮಾಡ್ತಿರೋ ಮೊತ್ತ ಎಲ್ಲರನ್ನೂ ಬೆರಗುಗೊಳಿಸಲಿದ್ಯಂತೆ. ಆದ್ರೆ, ಇದ್ರ ಪರಿಣಾಮ ತೆರೆಮೇಲೆ ಒಂದು ಅದ್ಭುತ ದೃಶ್ಯ ವೈಭವ ಕಟ್ಟಿಕೊಡೋಕೆ ತಯಾರಾಗಿದೆ ಆರ್‌ಆರ್‌ಆರ್ ತಂಡ.

ಈಗಾಗ್ಲೇ ಆರ್‌ಆರ್‌ಆರ್‌ ಸಿನಿಮಾವನ್ನ ಬರೋಬ್ಬರಿ 400 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಮಾಡ್ತಿದೆ ಚಿತ್ರತಂಡ. ವಿಶೇಷ ಅಂದ್ರೆ ಆರ್‌ಆರ್‌ಆರ್‌ ಸಿನಿಮಾದ ಶೂಟಿಂಗ್‌ ಗಿಂತ ಗ್ರಾಫಿಕ್ಸ್‌ಗೇ ಅತಿಹೆಚ್ಚು ಹಣ ಖರ್ಚಾಗಲಿದ್ಯಂತೆ. ಸದ್ಯ ಈ ಸುದ್ದಿ ಭಾರಿ ಸಂಚಲನ ಸೃಷ್ಟಿಸಿದೆ. ಮೊದಲೇ ರಾಜಮೌಳಿ ತಮ್ಮ ಕಲ್ಪನೆಯಂತೆ ಕೆತ್ತಿರೋ ಕಥೆ ಅಚ್ಚುಕಟ್ಟಾಗಿ ತೆರೆ ಮೇಲೆ ಮೂಡೋಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳೋ ನಿರ್ದೇಶಕ. ಹೀಗಾಗಿ ಈಗ ಗ್ರಾಫಿಕ್ಸ್‌ ವಿಚಾರವಾಗಿ ಸಿನಿಮಾ ಮೇಲಿನಿ ನಿರೀಕ್ಷೆ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಒಟ್ಟಿನಲ್ಲಿ ಆರ್‌ಆರ್‌ಆರ್‌ ಐತಿಹಾಸಿಕ ಸಿನಿಮಾಗಾಗಿ ನುರಿತ ತಂತ್ರಜ್ಞರ ತಂಡ ಕೆಲಸ ಮಾಡ್ತಿದೆ. ಆದ್ರೆ ಗ್ರಾಫಿಕ್ಸ್‌ಗಾಗಿ ಸುರೀತಿರೋ ಹಣ ಎಷ್ಟು ಅನ್ನೋದನ್ನ ಮಾತ್ರ ಚಿತ್ರತಂಡ ರಿವೀಲ್‌ ಮಾಡಿಲ್ಲ.

ರಾಜಮೌಳಿಯ RRR ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟನೆ? ಪಾತ್ರ ಯಾವುದು?

Follow Us
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ