AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯರಿಗೆ ಕಂಟಕ: ಕೊರೊನಾ ಭಯದಲ್ಲೇ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ ಗರ್ಭಿಣಿಯರು!

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯಪಟ್ಟು ಗರ್ಭಿಣಿಯರು ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂಬ ಸ್ಫೋಟಕ ಮಾಹಿತಿಯನ್ನು ವೈದ್ಯರು ಹೊರ ಹಾಕಿದ್ದಾರೆ. ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸದೆ ಕಳೆದ ಏಳೆಂಟು ತಿಂಗಳಿಂದ ಎಲ್ಲಾ ಕಡೆ ಪಸರಿಸಿದೆ. ಈ ನಡುವೆ ಗರ್ಭಿಣಿಯರು ಕೊರೊನಾಗೆ ಹೆದರಿ ಆಸ್ಪತ್ರೆಗಳಿಗೆ ಹೋಗದೆ ನಿರ್ಲಕ್ಷ್ಯವಹಿಸಿ ತಮ್ಮ ಸಾವಿಗೆ ಕಾರಣರಾಗುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಮುನ್ನ ಕೊರೊನಾ ಟೆಸ್ಟ್ ಮಾಡಿಸುವುದು ಕಡ್ಡಾಯ. ಹೀಗಾಗಿ ಕೊವಿಡ್ ಟೆಸ್ಟ್ ಮಾಡಿದ್ರೆ ಏನಾಗುತ್ತೋ, ಟೆಸ್ಟ್ ನಲ್ಲಿ ಪಾಸಿಟಿವ್ ಬಂದರೆ ಏನ್ ಮಾಡೋದು ಅನ್ನೋ […]

ಗರ್ಭಿಣಿಯರಿಗೆ ಕಂಟಕ: ಕೊರೊನಾ ಭಯದಲ್ಲೇ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ ಗರ್ಭಿಣಿಯರು!
ಆಯೇಷಾ ಬಾನು
|

Updated on: Oct 23, 2020 | 8:29 AM

Share

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯಪಟ್ಟು ಗರ್ಭಿಣಿಯರು ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂಬ ಸ್ಫೋಟಕ ಮಾಹಿತಿಯನ್ನು ವೈದ್ಯರು ಹೊರ ಹಾಕಿದ್ದಾರೆ. ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸದೆ ಕಳೆದ ಏಳೆಂಟು ತಿಂಗಳಿಂದ ಎಲ್ಲಾ ಕಡೆ ಪಸರಿಸಿದೆ. ಈ ನಡುವೆ ಗರ್ಭಿಣಿಯರು ಕೊರೊನಾಗೆ ಹೆದರಿ ಆಸ್ಪತ್ರೆಗಳಿಗೆ ಹೋಗದೆ ನಿರ್ಲಕ್ಷ್ಯವಹಿಸಿ ತಮ್ಮ ಸಾವಿಗೆ ಕಾರಣರಾಗುತ್ತಿದ್ದಾರೆ.

ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಮುನ್ನ ಕೊರೊನಾ ಟೆಸ್ಟ್ ಮಾಡಿಸುವುದು ಕಡ್ಡಾಯ. ಹೀಗಾಗಿ ಕೊವಿಡ್ ಟೆಸ್ಟ್ ಮಾಡಿದ್ರೆ ಏನಾಗುತ್ತೋ, ಟೆಸ್ಟ್ ನಲ್ಲಿ ಪಾಸಿಟಿವ್ ಬಂದರೆ ಏನ್ ಮಾಡೋದು ಅನ್ನೋ ಭಯದಲ್ಲೇ ಗರ್ಭಿಣಿಯರು ಆಸ್ಪತ್ರೆಗಳ ಕಡೆ ಮುಖ ಮಾಡುತ್ತಿಲ್ಲ. ಪ್ರತಿ ತಿಂಗಳು ಚೆಕಪ್​ಗೆ ಹೋಗದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಅಲ್ಲದೆ ಕೆಲ ಆಸ್ಪತ್ರೆಗಳು ಕೋವಿಡ್ ಕೇರ್ ಸೆಂಟರ್​ಗಳಾಗಿದ್ದು, ಸೋಂಕಿತರೇ ಹೆಚ್ಚಾಗಿ ಓಡಾಡುತ್ತಿರುತ್ತಾರೆ.

ಜೊತೆಗೆ ಭಾಗಶಃ ವೈದ್ಯರು ಕೋವಿಡ್ ಡ್ಯೂಟಿ ಮಾಡುತ್ತಿದ್ದಾರೆ. ಹೀಗಾಗಿ ವೈದ್ಯರಿಂದ ನಮಗೆ ಕೊರೊನಾ ಬಂದ್ರೆ ಎಂಬ ಕಾರಣಕ್ಕೆ ಚೆಕಪ್​ಗೆ ಹೋಗಲು ಗರ್ಭೀಣಿಯರು ಹಿಂದೇಟು ಹಾಕುತ್ತಿದ್ದಾರೆ. ಕೊನೆಗೆ ಅಂತಿಮ ಘಟ್ಟದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಸೂಕ್ತ ಕಾಲಕ್ಕೆ ಚಿಕಿತ್ಸೆ ಪಡೆಯದೇ ಇರುವ ಕಾರಣ ಹುಟ್ಟುವ ಮಗುವಿಗೆ ನಾನಾ ಸಮಸ್ಯೆಗಳು ಕಾಡುತ್ತಿವೆ. ಹೀಗಾಗಿ ವೈದ್ಯರಿಗೆ ಚಿಕಿತ್ಸೆ ನೀಡಲಾಗದೆ ಗರ್ಭಿಣಿಯರು ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ ಎಂದು ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಏಪ್ರಿಲ್ ನಿಂದ ಆಗಸ್ಟ್ ತನಕ 32 ಗರ್ಭಿಣಿಯರ ಸಾವು: ಇನ್ನು ಕೊರೊನಾ ಭಯದಿಂದಲೇ ಆಸ್ಪತ್ರೆಗೆ ಬಾರದೆ, ಸೂಕ್ತ ಕಾಲಕ್ಕೆ ಚಿಕಿತ್ಸೆ ಪಡೆಯದೆ ಏಪ್ರಿಲ್ ನಿಂದ ಆಗಸ್ಟ್ ತನಕ 32 ಗರ್ಭಿಣಿಯರು ಸಾವನ್ನಪ್ಪಿದ್ದಾರೆ. ಕೊರೊನಾ ಇದೆಯೋ ಇಲ್ವೋ ಎಂಬ ಆತಂಕದಲ್ಲೇ ಸಾವನ್ನಪ್ಪುವ ಸ್ಥಿತಿ ನಿರ್ಮಾಣವಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ