AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್‌ ಸೆಂಟರ್‌ಗಳು ಖಾಲಿ ಹೊಡೆಯುತ್ತಿವೆ, ಕೆಲ ಸೆಂಟರ್‌ಗಳನ್ನ ಕೈ ಬಿಡುವ ಸಾಧ್ಯತೆ

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಮಾತ್ರ ದಿನೇ ದಿನೇ ಕಡಿಮೆಯಾಗುತ್ತಿದೆ. ಇದು ಅಚ್ಚರಿಯಾದರೂ ಸತ್ಯ. ಹೌದು ಬೆಂಗಳೂರಿನಲ್ಲಿರುವ ಬಹುತೇಕ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದೆ. ಇದು ಪ್ರಕರಣಗಳು ಹೆಚ್ಚುತ್ತಿದ್ದರೂ ಜನರು ಕೋವಿಡ್‌ ಕೇರ್‌ ಕೇಂದ್ರಗಳಿಗೆ ಹೋಗದೇ ಮನೆಯಲ್ಲಿಯೇ ಹೋಮ್‌ ಐಸೋಲೇಶನ್‌ಗೊಳಗಾಗುತ್ತಿರೋದು ಹೆಚ್ಚಾಗುತ್ತಿದೆ. ಹೀಗಾಗಿ ಬಹುತೇಕ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಬಹುತೇಕ ಬೆಡ್‌ಗಳು ಖಾಲಿ ಹೊಡೆಯುತ್ತಿರೋದು ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿರುವ ಒಟ್ಟು […]

ಕೋವಿಡ್‌ ಸೆಂಟರ್‌ಗಳು ಖಾಲಿ ಹೊಡೆಯುತ್ತಿವೆ, ಕೆಲ ಸೆಂಟರ್‌ಗಳನ್ನ ಕೈ ಬಿಡುವ ಸಾಧ್ಯತೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 27, 2020 | 12:54 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಮಾತ್ರ ದಿನೇ ದಿನೇ ಕಡಿಮೆಯಾಗುತ್ತಿದೆ. ಇದು ಅಚ್ಚರಿಯಾದರೂ ಸತ್ಯ.

ಹೌದು ಬೆಂಗಳೂರಿನಲ್ಲಿರುವ ಬಹುತೇಕ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದೆ. ಇದು ಪ್ರಕರಣಗಳು ಹೆಚ್ಚುತ್ತಿದ್ದರೂ ಜನರು ಕೋವಿಡ್‌ ಕೇರ್‌ ಕೇಂದ್ರಗಳಿಗೆ ಹೋಗದೇ ಮನೆಯಲ್ಲಿಯೇ ಹೋಮ್‌ ಐಸೋಲೇಶನ್‌ಗೊಳಗಾಗುತ್ತಿರೋದು ಹೆಚ್ಚಾಗುತ್ತಿದೆ. ಹೀಗಾಗಿ ಬಹುತೇಕ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಬಹುತೇಕ ಬೆಡ್‌ಗಳು ಖಾಲಿ ಹೊಡೆಯುತ್ತಿರೋದು ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿರುವ ಒಟ್ಟು 12 ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 4,576 ಬೆಡ್‌ಗಳು ಲಭ್ಯವಿವೆ. ಆದ್ರೆ ಈ 4576 ಬೆಡ್ ಗಳ ಪೈಕಿ 3 ಸಾವಿರ ಬೆಡ್‌ಗಳು ಮಾತ್ರ ಭರ್ತಿಯಾಗಿವೆ. ಬಿಐಇಸಿನಲ್ಲಿ 10 ಸಾವಿರ ಬೆಡ್ ಗಳ ಪೈಕಿ 5 ಸಾವಿರ ಬೆಡ್‌ಗಳು ಉಪಯೋಗಕ್ಕೆ ಲಭ್ಯವಿವೆ. ಆದರೂ ಕೇವಲ 1500 ಬೆಡ್‌ಗಳ ಬಳಕೆ ಮಾತ್ರ ಮಾಡಲಾಗ್ತಿದೆ. 1500 ಬೆಡ್‌ಗಳಿದ್ದರೂ 700 ರಿಂದ 800 ಸೋಂಕಿತರು ಮಾತ್ರ ದಾಖಲಾಗಿದ್ದಾರೆ. ಉಳಿದ ಬೆಡ್‌ಗಳು ಖಾಲಿ ಹೊಡೆಯುತ್ತಿವೆ.

ಕೋವಿಡ್ ಕೇರ್ ಸೆಂಟರ್‌ಗಳಿಗಾಗಿ ಜಿಕೆವಿಕೆ ಹಾಸ್ಟೆಲ್, ಜ್ಞಾನಭಾರತಿ ಹಾಸ್ಟೆಲ್, ಹಜ್ ಭವನ, ಸರ್ಕಾರಿ ಆಯುರ್ವೇದಿಕ್ ಕಾಲೇಜು, ಕೋರಮಂಗಲ ಒಳಾಂಣ ಕ್ರೀಡಾಂಗಣ, ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳು, ರವಿಶಂಕರ್ ಗುರೂಜಿ ಆಸ್ಪತ್ರೆ, ಹೆಚ್ ಎ ಎಲ್, ಬಿಐಇಸಿ, ಜ್ಞಾನ ಭಾರತಿ ನ್ಯೂ ಗರ್ಲ್ಸ್ ಹಾಸ್ಟೆಲ್ ಸೇರಿದಂತೆ ಒಟ್ಟು 12 ಕಡೆ ಕೇರ್ ಸೆಂಟರ್ ನಿರ್ಮಾಣ ಮಾಡಲಾಗಿದೆ.

ಹೆಚ್ಚಿನ ಸೋಂಕಿತರು ‌ಹೋಮ್ ಐಸೋಲೇಶನ್ ಆಗುತ್ತಿರೋದ್ರಿಂದ ಕಾಲೇಜು ಹಾಸ್ಟೆಲ್‌ಗಳನ್ನ ಕೇರ್ ಸೆಂಟರ್ ನಿಂದ ಮುಕ್ತಿ ನೀಡುವಂತೆ ಆಯಾ ವಿಶ್ವವಿದ್ಯಾಲಯಗಳಿಂದ ಮನವಿ ಬರುತ್ತಿವೆ. ಹೀಗಾಗಿ ಕೆಲ ಕೇರ್ ಸೆಂಟರ್‌ಗಳನ್ನ ಕೈ ಬಿಡುವ ಬಗ್ಗೆ ಚರ್ಚೆ ನಡೆದಿದ್ದು, ಖಾಲಿ ಬಿದ್ದಿರುವ ಬೆಡ್ ಮತ್ತು ಕಾಟ್ ಗಳನ್ನ ಸರ್ಕಾರಿ ಹಾಸ್ಟೆಲ್ ಗಳಿಗೆ ಶಿಫ್ಟ್ ಮಾಡುವ ಕುರಿತು ಚರ್ಚೆ ನಡೆಸಲಾಗುತ್ತಿದೆ.

ಆದರೆ ಇಲ್ಲಿವರೆಗೂ ಯಾವುದೇ ಅಂತಿಮ‌ ತೀರ್ಮಾನವಾಗಿಲ್ಲ. ಮುಂದಿನ ಒಂದೆರಡು ವಾರಗಳಲ್ಲಿ ಪರಿಸ್ಥಿತಿ ನೋಡಿಕೊಂಡು, ಸರ್ಕಾರದ ಆದೇಶದನ್ವಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಪ್ಲಾನ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Follow Us
Guru
Guru
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ