ಭಿಕ್ಷೆ ಬೇಡುತ್ತಿದ್ದ ವಿಶೇಷಚೇತನ ತಾಯಿ-ಮಗನಿಗೆ ಕ್ರೇನ್ ಡಿಕ್ಕಿ, ಇಬ್ಬರೂ ಸ್ಥಳದಲ್ಲೇ ಸಾವು

ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ ಮತ್ತು ಮಗವಿಗೆ ಕ್ರೇನ್ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ನಡೆದಿದೆ.

ಭಿಕ್ಷೆ ಬೇಡುತ್ತಿದ್ದ ವಿಶೇಷಚೇತನ ತಾಯಿ-ಮಗನಿಗೆ ಕ್ರೇನ್ ಡಿಕ್ಕಿ, ಇಬ್ಬರೂ ಸ್ಥಳದಲ್ಲೇ ಸಾವು
ಕ್ರೇನ್​ ಡಿಕ್ಕಿಯಾಗಿ ವಿಕಲಚೇತನ ತಾಯಿ, ಮಗು ಸಾವು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Dec 09, 2020 | 12:06 PM

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ ಮತ್ತು ಮಗವಿಗೆ ಕ್ರೇನ್ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದೃಶ್ಯ ನೋಡಲು ಭೀಭತ್ಸವಾಗಿದ್ದು 40 ವರ್ಷದ ಮಹಿಳೆ ಮತ್ತು 10 ವರ್ಷದ ಮಗನ ತಲೆ ಹೊಡೆದು ಹೋಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಇಂತಹದೊಂದು ಭಯಾನಕ ಘಟನೆಗೆ ಸಾಕ್ಷಿಯಾಗಿದೆ. ಚನ್ನಗಿರಿಯಿಂದ ನಲ್ಲೂರಿಗೆ ಬರುತ್ತಿದ್ದ ಕ್ರೇನ್, ವೀಲ್ ಚೇರ್​ನಲ್ಲಿ ರಸ್ತೆ ಬದಿ ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ, ಮಗನ ಮೇಲೆ ಏಕಾಏಕಿ ನುಗ್ಗಿದೆ. ಇಬ್ಬರೂ ಶೀವನ ಪಾದ ಸೇರಿದ್ದು ಮೃತರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BJP ಮುಖಂಡನ ಸ್ಕಾರ್ಪಿಯೋ ಗಾಡಿ ಬೈಕ್​ಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us