AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಮಗುಗೆ ಮೂತ್ರ ಮಾಡಿಸ್ತಿದ್ದ ತಾಯಿಗೆ ಟ್ರಾಕ್ಟರ್ ಡಿಕ್ಕಿ, ತಾಯಿ ದುರ್ಮರಣ

ಬೆಂಗಳೂರು ಗ್ರಾಮಾಂತರ: ಮಗುವಿಗೆ ಮೂತ್ರವಿಸರ್ಜನೆ ಮಾಡಿಸಲು ರಸ್ತೆಬದಿಯಲ್ಲಿ ನಿಂತಿದ್ದ ಮಹಿಳೆ ಮೇಲೆ ಟ್ರ್ಯಾಕ್ಟರ್ ಹರಿದು ಸಾವನ್ನಪಿರೋ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಬಳಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ನಾಗಸಂದ್ರದ ನಿವಾಸಿಯಾಗಿರುವ 26 ವರ್ಷದ ಉಮಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ತನ್ನ ಪತಿ ನಾಗೇಶ್ ಹಾಗೂ ಮಗುವಿನೊಂದಿಗೆ ಬೈಕ್​ನಲ್ಲಿ ದೊಡ್ಡಬಳ್ಳಾಪುರದಿಂದ ಅರಳುಮಲ್ಲಿಗೆಯ ಕಡೆಗೆ ಬರುತ್ತಿದ್ದಾಗ ಮಗುವಿಗೆ ಮೂತ್ರವಿಸರ್ಜನೆ ಮಾಡಿಸಲು ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದ್ದರು. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಟ್ರ್ಯಾಕ್ಟರ್ […]

ರಸ್ತೆ ಬದಿ ಮಗುಗೆ ಮೂತ್ರ ಮಾಡಿಸ್ತಿದ್ದ ತಾಯಿಗೆ ಟ್ರಾಕ್ಟರ್ ಡಿಕ್ಕಿ, ತಾಯಿ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 15, 2020 | 11:04 AM

Share

ಬೆಂಗಳೂರು ಗ್ರಾಮಾಂತರ: ಮಗುವಿಗೆ ಮೂತ್ರವಿಸರ್ಜನೆ ಮಾಡಿಸಲು ರಸ್ತೆಬದಿಯಲ್ಲಿ ನಿಂತಿದ್ದ ಮಹಿಳೆ ಮೇಲೆ ಟ್ರ್ಯಾಕ್ಟರ್ ಹರಿದು ಸಾವನ್ನಪಿರೋ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಬಳಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ನಾಗಸಂದ್ರದ ನಿವಾಸಿಯಾಗಿರುವ 26 ವರ್ಷದ ಉಮಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ತನ್ನ ಪತಿ ನಾಗೇಶ್ ಹಾಗೂ ಮಗುವಿನೊಂದಿಗೆ ಬೈಕ್​ನಲ್ಲಿ ದೊಡ್ಡಬಳ್ಳಾಪುರದಿಂದ ಅರಳುಮಲ್ಲಿಗೆಯ ಕಡೆಗೆ ಬರುತ್ತಿದ್ದಾಗ ಮಗುವಿಗೆ ಮೂತ್ರವಿಸರ್ಜನೆ ಮಾಡಿಸಲು ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದ್ದರು. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಟ್ರ್ಯಾಕ್ಟರ್ ಏಕಾಏಕಿ ನುಗ್ಗಿ ಬಂದು ತಾಯಿಯ ಮೇಲೆ ಹರಿದುಹೋಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಉಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.  ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 4:30 pm, Sun, 14 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು