ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ. 6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು
ಸಾಧು ಶ್ರೀನಾಥ್​

Updated on: Feb 18, 2020 | 4:57 PM

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ.

6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 4:05 pm, Tue, 18 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us