AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಯಾರು ದಿಕ್ಕಿಲ್ಲವೆಂದು ನನ್ನ ಮಗನನ್ನು ಬಿಟ್ಟು ಕಳಿಸಿಲ್ಲ -SIT ವಶದಲ್ಲಿರುವ ಪುತ್ರ ಬಾರದಿದ್ದಕ್ಕೆ ತಾಯಿ ಕಣ್ಣೀರು

ಮತ್ತೊಬ್ಬ ವಿದ್ಯಾರ್ಥಿಯ ದೊಡ್ಡಪ್ಪ ವಕೀಲನಾಗಿದ್ದಕ್ಕೆ ಆತನನ್ನು ಬಿಟ್ಟಿದ್ದಾರೆ. ನಮಗೆ ಯಾರು ದಿಕ್ಕಿಲ್ಲವೆಂದು ನನ್ನ ಮಗನನ್ನು ಬಿಟ್ಟು ಕಳಿಸಿಲ್ಲ ಎಂದು ತಮ್ಮ ಮಗನನ್ನು ಬಿಡುಗಡೆ ಮಾಡುವಂತೆ ವಿದ್ಯಾರ್ಥಿಯ ತಾಯಿ ಕಣ್ಣೀರು ಹಾಕಿದ್ದಾರೆ.

ನಮಗೆ ಯಾರು ದಿಕ್ಕಿಲ್ಲವೆಂದು ನನ್ನ ಮಗನನ್ನು ಬಿಟ್ಟು ಕಳಿಸಿಲ್ಲ -SIT ವಶದಲ್ಲಿರುವ ಪುತ್ರ ಬಾರದಿದ್ದಕ್ಕೆ ತಾಯಿ ಕಣ್ಣೀರು
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Mar 14, 2021 | 4:47 PM

ಬೀದರ್: ನನ್ನ ಮಗ ತಪ್ಪು ಮಾಡಿದ್ರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ. ಆದರೆ, 3 ದಿನಗಳಾದ್ರೂ ಕೋರ್ಟ್‌ಗೆ ಹಾಜರುಪಡಿಸಿಲ್ಲವೆಂದು ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ SIT ವಶದಲ್ಲಿರುವ ಇಂಜಿನಿಯರಿಂಗ್​ ವಿದ್ಯಾರ್ಥಿಯ ತಾಯಿ ಕಣ್ಣೀರು ಹಾಕಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿಯ ದೊಡ್ಡಪ್ಪ ವಕೀಲನಾಗಿದ್ದಕ್ಕೆ ಆತನನ್ನು ಬಿಟ್ಟಿದ್ದಾರೆ. ನಮಗೆ ಯಾರು ದಿಕ್ಕಿಲ್ಲವೆಂದು ನನ್ನ ಮಗನನ್ನು ಬಿಟ್ಟು ಕಳಿಸಿಲ್ಲ ಎಂದು ತಮ್ಮ ಮಗನನ್ನು ಬಿಡುಗಡೆ ಮಾಡುವಂತೆ ವಿದ್ಯಾರ್ಥಿಯ ತಾಯಿ ಕಣ್ಣೀರು ಹಾಕಿದ್ದಾರೆ. ಜಿಲ್ಲೆಯ ಭಾಲ್ಕಿ ಪಟ್ಟಣದ ನಿವಾಸಿಯಾಗಿರುವ ವಿದ್ಯಾರ್ಥಿಯ ತಾಯಿ ತಮ್ಮ ನೋವು ತೋಡಿಕೊಂಡಿದ್ದಾರೆ.

ಮಾ.11ರಂದು SIT ತಂಡ ವಿದ್ಯಾರ್ಥಿಗಳಿಬ್ಬರನ್ನು ವಶಕ್ಕೆ ಪಡೆದಿದ್ದರು. ಮೆಕ್ಯಾನಿಕಲ್ ಇಂಜಿನಿಯರ್ ಹಾಗೂ ಕಾನೂನು ಪದವಿ ಓದುತ್ತಿದ್ದ ವಿದ್ಯಾರ್ಥಿಗಳಿಬ್ಬರನ್ನು ವಶಕ್ಕೆ ಪಡೆದಿದ್ದರು. ಇಬ್ಬರನ್ನು ಮೂರು ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿಟ್ಟು ಪೊಲೀಸರಿಂದ ವಿಚಾರಣೆ ನಡೆದಿತ್ತು.

ಬಳಿಕ SIT ತಂಡ ಕಾನೂನು ವಿದ್ಯಾರ್ಥಿಯನ್ನು ಬಿಟ್ಟು ಕಳಿಸಿದ್ದರು. ಆದರೆ, ಮೆಕ್ಯಾನಿಕಲ್ ಇಂಜಿನಿಯರ್‌ನನ್ನು ಬಿಟ್ಟು ಕಳುಹಿಸಿರಲಿಲ್ಲ. ಮೂರು ದಿನಗಳಾದ್ರೂ ಮಗ ಬಾರದಿದ್ದಕ್ಕೆ ಆತನ ತಾಯಿ ಕಣ್ಣೀರು ಹಾಕಿದ್ದಾರೆ. ಜೊತೆಗೆ, ಒಬ್ಬರನ್ನು ಬಿಟ್ಟು ಮತ್ತೊಬ್ಬರನ್ನು SIT ಬಿಡದಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಅಂದ ಹಾಗೆ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ SIT ಅಧಿಕಾರಿಗಳು ಇಂದು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಮೂವರನ್ನೂ ವಿಚಾರಣೆ ಮಾಡಲಾಗಿತ್ತು. ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಮೂಲದ ಪತ್ರಕರ್ತ ಹಾಗೂ ಸಿಡಿಯಲ್ಲಿದ್ದ ಯುವತಿಯ ಬಾಯ್ ಫ್ರೆಂಡ್ ಸೇರಿದಂತೆ ಐವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ವಿಚಾರಣೆಯ ಬಳಿಕ ಐವರನ್ನೂ ಬಿಟ್ಟು ಕಳಿಸಲಾಗಿತ್ತು. ಆದರೆ, ಇದೀಗ ಐವರ ಪೈಕಿ ಮೂವರನ್ನು ವಶಕ್ಕೆ ಪಡೆದು SIT ತಂಡ ವಿಚಾರಣೆ ನಡೆಸುತ್ತಿದೆ.

ಇದಲ್ಲದೆ, ಎರಡು ದೂರುನ್ನ ಪರಿಗಣನೆಗೆ ತೆಗದುಕೊಂಡು ತಂಡ ತನಿಖೆಗೆ  ಮುಂದಾಗಿದೆ. ದಿನೇಶ್​ ಕಲ್ಲಹಳ್ಳಿ ಮತ್ತು ರಮೇಶ ಕೊಟ್ಟಿರುವ ದೂರುಗಳನ್ನು ಪರಿಗಣಿಸಿ ತನಿಖೆ ಮಾಡಲಾಗುತ್ತಿದೆ. ಎರಡು ದೂರುಗಳ ಮೇಲೆ ಎರಡು ಆಯಾಮದಲ್ಲಿ ತೀವ್ರ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು