ಕೌಟುಂಬಿಕ ಕಲಹ: ನಾಲೆಗೆ ಹಾರಿ ತಾಯಿ, ಮಕ್ಕಳು ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳ್ಳೇನಹಳ್ಳಿಯ ವಿಸಿ ನಾಲೆ ಬಳಿ ನಡೆದಿದೆ. ತಾಯಿ ಜ್ಯೋತಿ(33), 4 ವರ್ಷದ ಪವನ್ ಮತ್ತು 7 ವರ್ಷದ ನಿಸರ್ಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲೆಗೆ ಬಿದ್ದು ತಾಯಿ ಮತ್ತು ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ನಾಲೆಗೆ ತಾಯಿ ಹಾಗು ಮಕ್ಕಳು ಹಾರುತ್ತಿದ್ದಂತೆ ಘಟನಾ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿ ರಕ್ಷಿಸಲು ಯತ್ನಿಸಿದ್ರೂ ಜ್ಯೋತಿ ಬದುಕುಳಿಯಲಿಲ್ಲ. ನಾಲೆಯಲ್ಲಿ ಕೊಚ್ಚಿ […]

ಕೌಟುಂಬಿಕ ಕಲಹ: ನಾಲೆಗೆ ಹಾರಿ ತಾಯಿ, ಮಕ್ಕಳು ಆತ್ಮಹತ್ಯೆ
ಸಾಧು ಶ್ರೀನಾಥ್​

Updated on: Jan 24, 2020 | 5:36 PM

ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳ್ಳೇನಹಳ್ಳಿಯ ವಿಸಿ ನಾಲೆ ಬಳಿ ನಡೆದಿದೆ. ತಾಯಿ ಜ್ಯೋತಿ(33), 4 ವರ್ಷದ ಪವನ್ ಮತ್ತು 7 ವರ್ಷದ ನಿಸರ್ಗ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲೆಗೆ ಬಿದ್ದು ತಾಯಿ ಮತ್ತು ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ನಾಲೆಗೆ ತಾಯಿ ಹಾಗು ಮಕ್ಕಳು ಹಾರುತ್ತಿದ್ದಂತೆ ಘಟನಾ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿ ರಕ್ಷಿಸಲು ಯತ್ನಿಸಿದ್ರೂ ಜ್ಯೋತಿ ಬದುಕುಳಿಯಲಿಲ್ಲ. ನಾಲೆಯಲ್ಲಿ ಕೊಚ್ಚಿ ಹೋಗಿರುವ ಮಕ್ಕಳಿಗಾಗಿ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ.

Published On - 5:36 pm, Fri, 24 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us