AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆ ಚೆಲುವ ನಾರಾಯಣನಿಗೆ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ವಿಶೇಷ ಪೂಜೆ

ಮಂಡ್ಯ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಮತ್ತೆ ಸಿಎಂ ಆದ ಮೇಲೆ ದಕ್ಷಿಣ ಭಾರತದ ಧಾರ್ಮಿಕ ಟೂರ್‌ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ.  ನಿನ್ನೆ ಹೈದರಾಬಾದ್‌ನಲ್ಲಿದ್ದ ಅವರು ಈಗ ಸಕ್ಕರೆ ನಾಡು ಮಂಡ್ಯದಲ್ಲಿರುವ ಪ್ರಖ್ಯಾತ ಚೆಲುವನಾರಾಣನ ದರ್ಶನ ಪಡೆದಿದ್ದಾರೆ. ಹೌದು ಮಧ್ಯಪ್ರದೇಸದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಜೀಯರ್‌ ಮಠಕ್ಕೆ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಬಂದಿರುವ ಅವರು, ಮಠದಲ್ಲಿ ನಡೆದ ಪೂರ್ಣ ಕುಂಭ ಸ್ವಾಗತದ ನಂತರ ಚೆಲುವನಾರಾಣನಿಗೆ ನಡೆದ ವಿಶೇಷ […]

ಮೇಲುಕೋಟೆ ಚೆಲುವ ನಾರಾಯಣನಿಗೆ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ವಿಶೇಷ ಪೂಜೆ
ಆಯೇಷಾ ಬಾನು
| Edited By: |

Updated on:Jul 25, 2020 | 1:08 PM

Share

ಮಂಡ್ಯ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಮತ್ತೆ ಸಿಎಂ ಆದ ಮೇಲೆ ದಕ್ಷಿಣ ಭಾರತದ ಧಾರ್ಮಿಕ ಟೂರ್‌ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ.  ನಿನ್ನೆ ಹೈದರಾಬಾದ್‌ನಲ್ಲಿದ್ದ ಅವರು ಈಗ ಸಕ್ಕರೆ ನಾಡು ಮಂಡ್ಯದಲ್ಲಿರುವ ಪ್ರಖ್ಯಾತ ಚೆಲುವನಾರಾಣನ ದರ್ಶನ ಪಡೆದಿದ್ದಾರೆ.

ಹೌದು ಮಧ್ಯಪ್ರದೇಸದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಜೀಯರ್‌ ಮಠಕ್ಕೆ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಬಂದಿರುವ ಅವರು, ಮಠದಲ್ಲಿ ನಡೆದ ಪೂರ್ಣ ಕುಂಭ ಸ್ವಾಗತದ ನಂತರ ಚೆಲುವನಾರಾಣನಿಗೆ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಇದಾದ ನಂತರ ಪ್ರಸಾದ ಸೇವಿಸಿದ ಸಿಎಂ ನಂತರ ಬೆಟ್ಟದ ಮೇಲಿನ ಉಗ್ರನರಸಿಂಹ ಸ್ವಾಮಿಗೂ ವಿಶೇಷ ಪೂಜೆ ಸಲ್ಲಿಸಿ ಹರಕೆ ಸಲ್ಲಿಸಿದರು.

ಸಚಿವ ನಾರಾಯಣಗೌಡ ಸ್ವಾಗತ ಇದಕ್ಕೂ ಮೊದಲು ಮಂಡ್ಯಕ್ಕೆ ಆಗಮಿಸಿದ ಮಧ್ಯಪ್ರದೇಶದ ಸಿಎಂಗೆ ಮಂಡ್ಯ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಇದಾದ ನಂತರ ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಹೂವಿನ ಹಾರ ಹಾಕಿ ವಿಶೇಷ ಅತಿಥಿಯನ್ನ ಬರಮಾಡಿಕೊಂಡರು. ನಂತರ ಮಧ್ಯಪ್ರದೇಶದ ಸಿಎಂ ಜತೆಗೆ ಧಾರ್ಮಿಕ ಕಾರ್ಯಕ್ರಮದಲ್ಲೂ ಪಾಲ್ಗೊಂಡರು.

ಹೈದರಾಬಾದ್‌ನಲ್ಲೂ ವಿಶೇಷ ಪೂಜೆ ಕರ್ನಾಟಕಕ್ಕೂ ಬರುವ ಮೊದಲು ಶಿವರಾಜ್‌ ಸಿಂಗ್‌ ಚೌಹ್ವಾಣ್‌ ತೆಲಂಗಾಣದ ಹೈದರಾಬಾದ್‌ ಹೊರವಲಯದಲ್ಲಿರುವ ಚಿನ್ನ ಜಿಯರ್‌ ಸ್ವಾಮಿ ಮಠದಲ್ಲಿ ಕೂಡಾ ವಿಶೇಷ ಪೂಜೆ ಸಲ್ಲಿಸಿದ್ದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಅವರು ಇಂದು ಮಂಡ್ಯಕ್ಕೆ ಆಗಮಿಸಿದ್ದಾರೆ.

Published On - 5:28 pm, Fri, 26 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ