AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆ ಚೆಲುವ ನಾರಾಯಣನಿಗೆ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ವಿಶೇಷ ಪೂಜೆ

ಮಂಡ್ಯ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಮತ್ತೆ ಸಿಎಂ ಆದ ಮೇಲೆ ದಕ್ಷಿಣ ಭಾರತದ ಧಾರ್ಮಿಕ ಟೂರ್‌ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ.  ನಿನ್ನೆ ಹೈದರಾಬಾದ್‌ನಲ್ಲಿದ್ದ ಅವರು ಈಗ ಸಕ್ಕರೆ ನಾಡು ಮಂಡ್ಯದಲ್ಲಿರುವ ಪ್ರಖ್ಯಾತ ಚೆಲುವನಾರಾಣನ ದರ್ಶನ ಪಡೆದಿದ್ದಾರೆ. ಹೌದು ಮಧ್ಯಪ್ರದೇಸದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಜೀಯರ್‌ ಮಠಕ್ಕೆ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಬಂದಿರುವ ಅವರು, ಮಠದಲ್ಲಿ ನಡೆದ ಪೂರ್ಣ ಕುಂಭ ಸ್ವಾಗತದ ನಂತರ ಚೆಲುವನಾರಾಣನಿಗೆ ನಡೆದ ವಿಶೇಷ […]

ಮೇಲುಕೋಟೆ ಚೆಲುವ ನಾರಾಯಣನಿಗೆ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ವಿಶೇಷ ಪೂಜೆ
ಆಯೇಷಾ ಬಾನು
| Edited By: |

Updated on:Jul 25, 2020 | 1:08 PM

Share

ಮಂಡ್ಯ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಮತ್ತೆ ಸಿಎಂ ಆದ ಮೇಲೆ ದಕ್ಷಿಣ ಭಾರತದ ಧಾರ್ಮಿಕ ಟೂರ್‌ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ.  ನಿನ್ನೆ ಹೈದರಾಬಾದ್‌ನಲ್ಲಿದ್ದ ಅವರು ಈಗ ಸಕ್ಕರೆ ನಾಡು ಮಂಡ್ಯದಲ್ಲಿರುವ ಪ್ರಖ್ಯಾತ ಚೆಲುವನಾರಾಣನ ದರ್ಶನ ಪಡೆದಿದ್ದಾರೆ.

ಹೌದು ಮಧ್ಯಪ್ರದೇಸದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಜೀಯರ್‌ ಮಠಕ್ಕೆ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಬಂದಿರುವ ಅವರು, ಮಠದಲ್ಲಿ ನಡೆದ ಪೂರ್ಣ ಕುಂಭ ಸ್ವಾಗತದ ನಂತರ ಚೆಲುವನಾರಾಣನಿಗೆ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಇದಾದ ನಂತರ ಪ್ರಸಾದ ಸೇವಿಸಿದ ಸಿಎಂ ನಂತರ ಬೆಟ್ಟದ ಮೇಲಿನ ಉಗ್ರನರಸಿಂಹ ಸ್ವಾಮಿಗೂ ವಿಶೇಷ ಪೂಜೆ ಸಲ್ಲಿಸಿ ಹರಕೆ ಸಲ್ಲಿಸಿದರು.

ಸಚಿವ ನಾರಾಯಣಗೌಡ ಸ್ವಾಗತ ಇದಕ್ಕೂ ಮೊದಲು ಮಂಡ್ಯಕ್ಕೆ ಆಗಮಿಸಿದ ಮಧ್ಯಪ್ರದೇಶದ ಸಿಎಂಗೆ ಮಂಡ್ಯ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಇದಾದ ನಂತರ ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಹೂವಿನ ಹಾರ ಹಾಕಿ ವಿಶೇಷ ಅತಿಥಿಯನ್ನ ಬರಮಾಡಿಕೊಂಡರು. ನಂತರ ಮಧ್ಯಪ್ರದೇಶದ ಸಿಎಂ ಜತೆಗೆ ಧಾರ್ಮಿಕ ಕಾರ್ಯಕ್ರಮದಲ್ಲೂ ಪಾಲ್ಗೊಂಡರು.

ಹೈದರಾಬಾದ್‌ನಲ್ಲೂ ವಿಶೇಷ ಪೂಜೆ ಕರ್ನಾಟಕಕ್ಕೂ ಬರುವ ಮೊದಲು ಶಿವರಾಜ್‌ ಸಿಂಗ್‌ ಚೌಹ್ವಾಣ್‌ ತೆಲಂಗಾಣದ ಹೈದರಾಬಾದ್‌ ಹೊರವಲಯದಲ್ಲಿರುವ ಚಿನ್ನ ಜಿಯರ್‌ ಸ್ವಾಮಿ ಮಠದಲ್ಲಿ ಕೂಡಾ ವಿಶೇಷ ಪೂಜೆ ಸಲ್ಲಿಸಿದ್ದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಅವರು ಇಂದು ಮಂಡ್ಯಕ್ಕೆ ಆಗಮಿಸಿದ್ದಾರೆ.

Published On - 5:28 pm, Fri, 26 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?