AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ DK ಸುರೇಶ್, ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ: HD ಕುಮಾರಸ್ವಾಮಿ ವಾಗ್ದಾಳಿ

ರಾಮನಗರ:ಇತ್ತೀಚೆಗೆ ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್‌ಡಿ ಕುಮಾರಸ್ವಾಮಿ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಸಂಸದ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರ ತಾಲೂಕಿನ ಕೂನಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ HD ಕುಮಾರಸ್ವಾಮಿ, ಕಾಂಗ್ರೆಸ್​ನ 5 ವರ್ಷಗಳ ಅವಧಿಯಲ್ಲಿ ಮರಳು ದಂಧೆ ನಡೆಸಲಾಗಿದೆ. ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ […]

ಸಂಸದ DK ಸುರೇಶ್, ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ: HD ಕುಮಾರಸ್ವಾಮಿ ವಾಗ್ದಾಳಿ
ಸಾಧು ಶ್ರೀನಾಥ್​
|

Updated on:Nov 05, 2020 | 4:31 PM

Share

ರಾಮನಗರ:ಇತ್ತೀಚೆಗೆ ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್‌ಡಿ ಕುಮಾರಸ್ವಾಮಿ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಸಂಸದ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ರಾಮನಗರ ತಾಲೂಕಿನ ಕೂನಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ HD ಕುಮಾರಸ್ವಾಮಿ, ಕಾಂಗ್ರೆಸ್​ನ 5 ವರ್ಷಗಳ ಅವಧಿಯಲ್ಲಿ ಮರಳು ದಂಧೆ ನಡೆಸಲಾಗಿದೆ. ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಇತ್ತು. ಮರಳು ದಂಧೆಗೆ ಕಡಿವಾಣ ಹಾಕಲು ನನ್ನಿಂದ ಆಗಲಿಲ್ಲ. ಕಾಂಗ್ರೆಸ್​ನವರೇ ಮರಳು ದಂಧೆ ಮಾಡುತ್ತಿರುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಮರಳು ದಂಧೆ ನಡೆಸದಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಮರಳು ದಂಧೆ ನಡೆಸಲು ಉತ್ತೇಜನ ಕೊಟ್ಟಿರೋದು ಯಾರು ನನ್ನ ಪಕ್ಷದ ಕಾರ್ಯಕರ್ತರಿಗೆ ಮರಳು ದಂಧೆ ಮಾಡಬಾರದು ಎಂದು ಸೂಚಿಸಿದ್ದೇನೆ. ಮರಳು ದಂಧೆ ಮಾಡುಕೊಂಡು ಅಮಾಯಕ ಜನರ ಜೀವದ ಜೊತೆ ಚೆಲ್ಲಾಟ ಆಡ್ತಾ ಇರೋರು ಕಾಂಗ್ರೆಸ್ ನವರು ಎಂದು HDK ಆಕ್ರೋಶ ವ್ಯಕ್ತಪಡಿಸಿದರು.

Published On - 4:30 pm, Thu, 5 November 20

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ