
ತುಮಕೂರು: ನವೆಂಬರ್ 3ರಂದು ನಡೆಯಲಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳಿಂದ ಭರ್ಜರಿ ತಯಾರಿ ನಡೆಯುತ್ತಿದೆ. ಮತದಾರರನ್ನು ತಮ್ಮತ್ತ ಸೆಳೆಯಲು ಭಾವೋದ್ವೇಗದ ಭಾಷಣಗಳನ್ನು ಮಾಡುತ್ತಿದ್ದಾರೆ. ಈ ನಡುವೆ ಶಿರಾ ಜನರು ನನಗೆ ಹಾಲು ಕೊಡ್ತಿರೋ ಅಥವಾ ವಿಷ ಕೊಡ್ತಿರೋ ಅನ್ನೋ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.
ಅಪ್ಪ ಮಕ್ಳು, ಸೊಸೆಯಂದಿರು, ಮೊಮ್ಮಕ್ಕಳು ಎಲ್ಲಾ ಸಾಲಾಗಿ ಬಂದು ಅಳೋರು..
ಶಿರಾ ಜನರು ಹಾಲು ಕೊಡ್ತಿರೋ ವಿಷ ಕೊಡ್ತಿರೋ ಅಂತಾ ಕೇಳ್ತಿದಾರೆ. ನಾನು ಶಿರಾ ಜನತೆಗೆ ಹೇಳಲಿಕ್ಕೆ ಬಯಸ್ತೇನೆ. ಕೊರೊನಾ ಸಂದರ್ಭದಲ್ಲಿ ಕುಮಾರಸ್ವಾಮಿಗೆ ಕಷಾಯ ಕೊಟ್ಟು ಕಳುಹಿಸಿ ಎಂದು ಶಿರಾದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಸಂಸದ ಸಿಂಹ ಟಾಂಗ್ ನೀಡಿದ್ದಾರೆ.
Published On - 4:24 pm, Fri, 2 October 20