AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಮೂಲ ಆಸ್ತಿ ಕೇವಲ 2.5 ಎಕರೆ.. ಆದ್ರೆ ಈಗ ಇಷ್ಟೊಂದು ಸಂಪತ್ತು ಎಲ್ಲಿಂದ ಬಂತು? ಕೋಡಿಹಳ್ಳಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಕೋಡಿಹಳ್ಳಿ ಆದಾಯದ ಮೂಲವನ್ನು ಬಹಿರಂಗ ಮಾಡಲಿ, ಅವರು 200 ಜನರಿಗೆ ಸೈಟ್ ಕೊಡಿಸುವುದಾಗಿ ಮೋಸ ಮಾಡಿದ್ದಾರೆ. ಮನೆ ನಿರ್ಮಿಸಿ ಕೊಡೋದಾಗಿ 3ರಿಂದ 6 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಭೈರಯ್ಯ ಎಂಬುವರಿಗೆ ಸೊಸೈಟಿಯಿಂದ ಸೈಟ್ ಮಂಜೂರು ಮಾಡುವುದಾಗಿ ಹಣ ಪಡೆದು ಇಂದು ನಾಳೆ ಎಂದು ಗೂಂಡಾಗಿರಿ ಮಾಡಿದ್ದಾರೆ ಎಂದು ಆರೋಪಿಸಿದ ಎಂ.ಪಿ.ರೇಣುಕಾಚಾರ್ಯ

ನಿನ್ನ ಮೂಲ ಆಸ್ತಿ ಕೇವಲ 2.5 ಎಕರೆ.. ಆದ್ರೆ ಈಗ ಇಷ್ಟೊಂದು ಸಂಪತ್ತು ಎಲ್ಲಿಂದ ಬಂತು? ಕೋಡಿಹಳ್ಳಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಸಾಂದರ್ಭಿಕ ಚಿತ್ರ
Skanda
| Updated By: ಸಾಧು ಶ್ರೀನಾಥ್​|

Updated on: Dec 18, 2020 | 3:18 PM

Share

ಬೆಂಗಳೂರು: ಕೋಡಿಹಳ್ಳಿ ಚಂದ್ರಶೇಖರ್​ ಒಬ್ಬ ನಕಲಿ ಹೋರಾಟಗಾರ. ಅಂದಿನ ಕಾಂಗ್ರೆಸ್‌ ಸರ್ಕಾರ ಕೋಡಿಹಳ್ಳಿಯನ್ನ ರಕ್ಷಿಸಿತ್ತು. ಅದಕ್ಕಾಗಿಯೇ ಅವರು ಕಾಂಗ್ರೆಸ್ ಸರ್ಕಾರ ಇದ್ದಾಗ ತುಟಿ ಬಿಚ್ಚಲಿಲ್ಲ. ಈಗ ಐಷಾರಾಮಿ ಜೀವನ ನಡೆಸ್ತಿದ್ದಾರೆ. ಆದರೆ, ಬೇರೆಯವರ ಮುಂದೆ ತಾನು ಗದ್ದೆ ನಾಟಿ ಮಾಡಿದ್ದೇನೆ, ಉತ್ತಿದ್ದೇನೆ, ಬಿತ್ತಿದ್ದೇನೆ, ಟ್ರ್ಯಾಕ್ಟರ್ ಓಡಿಸಿದ್ದೇನೆ ಅಂತೆಲ್ಲಾ ಹೇಳಿಕೊಳ್ತಾರೆ. ಅವರು ಹೊಲ ಉತ್ತುವವರಲ್ಲ, ಬ್ಲ್ಯಾಕ್​ಮೇಲ್​ ಮಾಡೋರು ಎಂದು ಕೋಡಿಹಳ್ಳಿ ವಿರುದ್ಧ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಕೋಡಿಹಳ್ಳಿ ಆದಾಯದ ಮೂಲವನ್ನು ಬಹಿರಂಗ ಮಾಡಲಿ, ಅವರು 200 ಜನರಿಗೆ ಸೈಟ್ ಕೊಡಿಸುವುದಾಗಿ ಮೋಸ ಮಾಡಿದ್ದಾರೆ. ಮನೆ ನಿರ್ಮಿಸಿ ಕೊಡೋದಾಗಿ ತಲಾ 3ರಿಂದ 6 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಭೈರಯ್ಯ ಎಂಬುವರಿಗೆ ಸೊಸೈಟಿಯಿಂದ ಸೈಟ್ ಮಂಜೂರು ಮಾಡುವುದಾಗಿ ಹಣ ಪಡೆದು ಇಂದೂ-ನಾಳೆ ಎಂದು ಗೂಂಡಾಗಿರಿ ಮಾಡಿದ್ದಾರೆ. ಈ ಕುರಿತು ದೂರು ಸಹ ದಾಖಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್.. ನಿನ್ನ ಮೂಲ ಆಸ್ತಿ ಕೇವಲ ಎರಡೂವರೆ ಎಕರೆಯಷ್ಟು ಇದೆ. ಆದರೆ ಈಗ ಇಷ್ಟೊಂದು ಸಂಪತ್ತು ಎಲ್ಲಿಂದ ಬಂತು? ನೀನು ಸತ್ಯ ಹರಿಶ್ಚಂದ್ರ ಆಗಿದ್ದರೆ ಇದಕ್ಕೆ ಉತ್ತರ ಕೊಡು. ಮಂಡ್ಯ, ಮೈಸೂರು ಸೇರಿ ರಾಜ್ಯಾದ್ಯಂತ ರೈತರ ಸಾವಾಯ್ತು. ಆಗ ಮೃತಪಟ್ಟ ರೈತರ ಕುಟುಂಬಗಳಿಗೆ ಸಾಂತ್ವನ ಏಕೆ ಹೇಳಲಿಲ್ಲ? ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ನೀನು ತುಟಿ ಬಿಚ್ಚಲಿಲ್ಲ ಎಂದು ಏಕವಚನದಲ್ಲಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು