ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಜನರ ಸೇವೆಗಿಳಿದ ಮಾಜಿ ಸಚಿವರು, ಜನರ ಆಕ್ರೋಶ

ಹೊಸಕೋಟೆ: ಹಂತಕ ಕೊರೊನಾ ವೈರೆಸ್ ದೇಶದಲ್ಲಿ ಆತಂಕ ಸೃಷ್ಟಿಸಿದೆ. ಕೊರೊನಾಗೆ ಜನ ಮೃತಪಟ್ತಿದ್ದಾರೆ. ದಿನೇ ದಿನೇ ತನ್ನ ಅಟ್ಟಹಾಸ ಮೆರೆಯುತ್ತಿದೆ. ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಹೀಗಾಗಿ ಇಂತವರ ಸಹಾಯಕ್ಕಾಗಿ ಮುಂದಾಗಿರುವ ಎಂಟಿಬಿ ನಾಗರಾಜ್ ಸಾಮಾಜಿಕ ಅಂತರ ಕಾಪಾಡದೇ ಜನರಿಗೆ ಹಣ್ಣು ಹಂಪಲು ವಿತರಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಬೈಲನರಸಾಪುರದಲ್ಲಿ ನಾಲ್ವರಿಗೆ ಸೋಂಕು ಇದ್ದರೂ ನಿರ್ಲಕ್ಷ್ಯ ತೋರಲಾಗಿದೆ. ಕೊರೊನಾ ಪ್ರಕರಣಗಳಿರುವ ಪ್ರದೇಶದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ನಿರ್ಲಕ್ಷ್ಯ ತೋರಿಸಿದ್ದಾರೆ. ಗುಂಪು ಗುಂಪಾಗಿ ಮನೆಗಳಿಗೆ ತೆರಳಿ […]

ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಜನರ ಸೇವೆಗಿಳಿದ ಮಾಜಿ ಸಚಿವರು, ಜನರ ಆಕ್ರೋಶ
ಸಾಧು ಶ್ರೀನಾಥ್​

Updated on: Apr 19, 2020 | 8:43 AM

ಹೊಸಕೋಟೆ: ಹಂತಕ ಕೊರೊನಾ ವೈರೆಸ್ ದೇಶದಲ್ಲಿ ಆತಂಕ ಸೃಷ್ಟಿಸಿದೆ. ಕೊರೊನಾಗೆ ಜನ ಮೃತಪಟ್ತಿದ್ದಾರೆ. ದಿನೇ ದಿನೇ ತನ್ನ ಅಟ್ಟಹಾಸ ಮೆರೆಯುತ್ತಿದೆ. ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಹೀಗಾಗಿ ಇಂತವರ ಸಹಾಯಕ್ಕಾಗಿ ಮುಂದಾಗಿರುವ ಎಂಟಿಬಿ ನಾಗರಾಜ್ ಸಾಮಾಜಿಕ ಅಂತರ ಕಾಪಾಡದೇ ಜನರಿಗೆ ಹಣ್ಣು ಹಂಪಲು ವಿತರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಬೈಲನರಸಾಪುರದಲ್ಲಿ ನಾಲ್ವರಿಗೆ ಸೋಂಕು ಇದ್ದರೂ ನಿರ್ಲಕ್ಷ್ಯ ತೋರಲಾಗಿದೆ. ಕೊರೊನಾ ಪ್ರಕರಣಗಳಿರುವ ಪ್ರದೇಶದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ನಿರ್ಲಕ್ಷ್ಯ ತೋರಿಸಿದ್ದಾರೆ. ಗುಂಪು ಗುಂಪಾಗಿ ಮನೆಗಳಿಗೆ ತೆರಳಿ ದಿನಸಿ ಕಿಟ್ ವಿತರಣೆ ಮಾಡಿ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ. ತುತ್ತು ಅನ್ನಕ್ಕು ಪರದಾಡುತ್ತಿರುವ ಸಮಯದಲ್ಲಿ ಇಂತಹ ಸೇವೆ ಶ್ಲಾಘನೀಯ ಆದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು ಜನರ ಆಕ್ರೋಶಕ್ಕೆ ಎಡೆ ಮಾಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us