
ಮಂಡ್ಯ: ಜಿಲ್ಲೆಯ ಕೊವಿಡ್ ಆಸ್ಪತ್ರೆಯಿಂದ ಕೊಲೆ ಆರೋಪಿಯೊಬ್ಬ ಪರಾರಿಯಾದ್ದಾನೆ ಎಂದು ತಿಳಿದುಬಂದಿದೆ.
MIMS ಆಸ್ಪತ್ರೆಯ ಜೈಲ್ ವಾರ್ಡ್ನಿಂದ ಕೊಲೆ ಆರೋಪಿ ಕುಮಾರ್ ಎಸ್ಕೇಪ್ ಆಗಿದ್ದಾನೆ. ಭಿಕ್ಷುಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದ ಆರೋಪಿ ಕುಮಾರ್ ಜಿಲ್ಲೆಯ ಕೀಲಾರ ಗ್ರಾಮದ ನಿವಾಸಿ.
ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಕುಮಾರ್ನನ್ನು ಬಂಧಿಸಲಾಗಿತ್ತು. ಈ ವೇಳೆ ಆರೋಪಿಗೆ ಕೊರೊನಾ ಪಾಸಿಟಿವ್ ವರದಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿತ್ತು.
ಕುಮಾರ್ ಗುಣಮುಖನಾಗಿ ಡಿಸ್ಚಾರ್ಜ್ ಆಗುವ ಸಂದರ್ಭದಲ್ಲಿ ಪೊಲೀಸರ ಕಣ್ತಪ್ಪಿಸಿ, ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಇದೀಗ, ಮಂಡ್ಯ ಪೂರ್ವ ಠಾಣಾ ಪೊಲೀಸರಿಂದ ಆರೋಪಿಗಾಗಿ ಶೋಧಕಾರ್ಯ ನಡೆಯುತ್ತಿದೆ.
Published On - 2:45 pm, Tue, 25 August 20