ಸಾಲ ಕೊಡಲ್ಲ ಅಂದಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗೆ ಹೀಗಾ ಮಾಡೋದು!

ಬೆಳಗಾವಿ: ಸಾಲ ನೀಡದ ಕಾರಣ ಬ್ಯಾಂಕ್​ ಸಿಬ್ಬಂದಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ‌ ಅವರಗೋಳ ಗ್ರಾಮದಲ್ಲಿ ನಡೆದಿದೆ. ಕೊಡಲಿ ಹಿಡಿದು ಪ್ರಾಥಮಿಕ ಕೃಷಿ ಪತ್ತಿನ‌ ಬ್ಯಾಂಕ್ ಸಿಬ್ಬಂದಿಗೆ ಕೊಲೆ ಆರೋಪಿ ಶಂಕರ ಕರಗುಪ್ಪಿ ಬೆದರಿಕೆ ಹಾಕಿದ್ದಾನೆ. ಆರೋಪಿ ಶಂಕರ ಕರಗುಪ್ಪಿ, ಸ್ವಂತ ಸಹೋದರನನ್ನು ಕೊಂದು ಜೈಲಿಗೆ ಹೋಗಿ ಬೇಲ್ ಮೇಲೆ ಹೊರ ಬಂದಿದ್ದ. ಕೊಡಲಿ‌ ಹಿಡಿದು ಬಂದ ಆರೋಪಿಯನ್ನ ನೋಡಿ ಸಿಬ್ಬಂದಿ ಬ್ಯಾಂಕ್​ನಿಂದ ಪರಾರಿಯಾಗಿದ್ದಾರೆ. ಸದ್ಯ ಆರೋಪಿಯನ್ನು ಹುಕ್ಕೇರಿ‌ ಪೊಲೀಸರು ವಶಕ್ಕೆ ಪಡೆದು […]

ಸಾಲ ಕೊಡಲ್ಲ ಅಂದಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗೆ ಹೀಗಾ ಮಾಡೋದು!
ಸಾಧು ಶ್ರೀನಾಥ್​ Edited By:

Updated on: Jul 01, 2020 | 5:23 PM

ಬೆಳಗಾವಿ: ಸಾಲ ನೀಡದ ಕಾರಣ ಬ್ಯಾಂಕ್​ ಸಿಬ್ಬಂದಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ‌ ಅವರಗೋಳ ಗ್ರಾಮದಲ್ಲಿ ನಡೆದಿದೆ. ಕೊಡಲಿ ಹಿಡಿದು ಪ್ರಾಥಮಿಕ ಕೃಷಿ ಪತ್ತಿನ‌ ಬ್ಯಾಂಕ್ ಸಿಬ್ಬಂದಿಗೆ ಕೊಲೆ ಆರೋಪಿ ಶಂಕರ ಕರಗುಪ್ಪಿ ಬೆದರಿಕೆ ಹಾಕಿದ್ದಾನೆ.

ಆರೋಪಿ ಶಂಕರ ಕರಗುಪ್ಪಿ, ಸ್ವಂತ ಸಹೋದರನನ್ನು ಕೊಂದು ಜೈಲಿಗೆ ಹೋಗಿ ಬೇಲ್ ಮೇಲೆ ಹೊರ ಬಂದಿದ್ದ. ಕೊಡಲಿ‌ ಹಿಡಿದು ಬಂದ ಆರೋಪಿಯನ್ನ ನೋಡಿ ಸಿಬ್ಬಂದಿ ಬ್ಯಾಂಕ್​ನಿಂದ ಪರಾರಿಯಾಗಿದ್ದಾರೆ. ಸದ್ಯ ಆರೋಪಿಯನ್ನು ಹುಕ್ಕೇರಿ‌ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 5:22 pm, Wed, 1 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us