ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ: ವಿಜಯೇಂದ್ರ

ಬೆಂಗಳೂರು: ನನ್ನ ದೆಹಲಿ ಭೇಟಿಗೆ ರಾಜಕಾರಣದ ಬಣ್ಣ ಬಳಿಯುವುದು ಬೇಡ. ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಾನು ವೈಯಕ್ತಿಕ ಕಾರ್ಯದ ನಿಮಿತ್ತ ದೆಹಲಿಗೆ ಹೋಗಿದ್ದೆ. ಈ ಸಂದರ್ಭ ಯಾವುದೇ ನಾಯಕರನ್ನು ಭೇಟಿ ಮಾಡುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು. ಮರಾಠ ನಿಗಮವನ್ನು ಸರ್ಕಾರ ಭಾಷೆಯ ಆಧಾರದ ಮೇಲೆ ರಚಿಸಿಲ್ಲ. ಮರಾಠಿಗರು ಕರ್ನಾಟಕದಲ್ಲಿ ಹಲವು ವರ್ಷಗಳಿಂದ ವಾಸಿವಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ಬಿಜೆಪಿಯ ಉದ್ದೇಶ. ತಪ್ಪು ಕಲ್ಪನೆಗಳು […]

ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ: ವಿಜಯೇಂದ್ರ
ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ
ಸಾಧು ಶ್ರೀನಾಥ್​

Updated on: Nov 23, 2020 | 12:13 PM

ಬೆಂಗಳೂರು: ನನ್ನ ದೆಹಲಿ ಭೇಟಿಗೆ ರಾಜಕಾರಣದ ಬಣ್ಣ ಬಳಿಯುವುದು ಬೇಡ. ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಾನು ವೈಯಕ್ತಿಕ ಕಾರ್ಯದ ನಿಮಿತ್ತ ದೆಹಲಿಗೆ ಹೋಗಿದ್ದೆ. ಈ ಸಂದರ್ಭ ಯಾವುದೇ ನಾಯಕರನ್ನು ಭೇಟಿ ಮಾಡುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಮರಾಠ ನಿಗಮವನ್ನು ಸರ್ಕಾರ ಭಾಷೆಯ ಆಧಾರದ ಮೇಲೆ ರಚಿಸಿಲ್ಲ. ಮರಾಠಿಗರು ಕರ್ನಾಟಕದಲ್ಲಿ ಹಲವು ವರ್ಷಗಳಿಂದ ವಾಸಿವಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ಬಿಜೆಪಿಯ ಉದ್ದೇಶ. ತಪ್ಪು ಕಲ್ಪನೆಗಳು ಬೇಡ ಎಂದು ನುಡಿದರು.

ಬಸವಕಲ್ಯಾಣ ಕ್ಷೇತ್ರದತ್ತ ಹೆಚ್ಚು ಗಮನ ಕೊಡುವಂತೆ ವರಿಷ್ಠರು ನನಗೆ ಸೂಚಿಸಿದ್ದಾರೆ. ನಾನು ಮತ್ತು ಬೀದರ್ ಸಂಸದ ಭಗವಂತ ಖೂಬಾ ಸೇರಿ ಬಸವ ಕಲ್ಯಾಣ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಹೇಳಿದರು.

ದೆಹಲಿಗೆ ಇಂದು ಸೋಮಣ್ಣ
ವಸತಿ ಸಚಿವ ವಿ.ಸೋಮಣ್ಣ ಇಂದು (ನ.23) ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ, ಪುನಾರಚನೆ ಚರ್ಚೆಗಳು ಗರಿಗೆದರಿರುವ ಹಿನ್ನೆಲೆಯಲ್ಲಿ ಸೋಮಣ್ಣ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.

ಈ ಹಿಂದೆ ರಮೇಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡಿ, ಅಲ್ಲಿಯೇ ಶಾಸಕರನ್ನು ಭೇಟಿಯಾಗಿದ್ದು ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us