AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ: ಅರುಣಾದೇವಿ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂಬ ಗುಲ್ಲೆದ್ದಿರುವಾಗಲೇ ಅವರ ಪುತ್ರಿ ಅರುಣಾದೇವಿ ಅಂಥ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ನನ್ನ ತಂದೆ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ: ಅರುಣಾದೇವಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರಿ ಅರುಣಾದೇವಿ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Dec 18, 2020 | 10:12 PM

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಅವಧಿ ಪೂರ್ತಿಗೊಳಿಸಲ್ಲ ಎಂಬ ವದಂತಿಗಳನ್ನು ಅವರ ಪುತ್ರಿ ಅರುಣಾದೇವಿ ಅಲ್ಲಗಳೆದಿದ್ದಾರೆ. ಆದರೆ ಅದೃಷ್ಟ ಕೈಕೊಟ್ಟರೆ ಯಾರೇನೂ ಮಾಡಲಾಗದು ಅಂತಲೂ ಅವರು ಹೇಳಿರುವುದು ಕುತೂಹಲ ಮೂಡಿಸುತ್ತದೆ.

ಧಾರವಾಡದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅರುಣಾದೇವಿ, ತಮ್ಮ ತಂದೆ ಖಂಡಿತವಾಗಿಯೂ ರಾಜ್ಯದ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತಾರೆ, ಈ ವಿಷಯದಲ್ಲಿ ಯಾರಿಗೂ ಸಂಶಯವೇ ಬೇಡ ಎಂದರು.

‘‘ಅವರು ನನ್ನ ತಂದೆಯೆಂಬ ಅಭಿಮಾನಕ್ಕೆ ಇದನ್ನು ಹೇಳುತ್ತಿಲ್ಲ, ಒಬ್ಬ ಸಾಮಾನ್ಯ ಮಹಿಳೆಯಾಗಿ ಹೇಳುತ್ತಿದ್ದೇನೆ, ಅವರು ಮುಖ್ಯಮಂತ್ರಿಯಾಗಿರುವುದು ನಮ್ಮೆಲ್ಲರ ಅದೃಷ್ಟ. ಅವರು ಅವಧಿಗೆ ಮುಂಚೆಯೇ ಸ್ಥಾನ ತ್ಯಜಿಸಲಿದ್ದಾರೆ ಎನ್ನುವ ವದಂತಿಗಳು ಶುದ್ಧ ಸುಳ್ಳು. ಆದರೆ, ಅದೃಷ್ಟ ವಿಮುಖವಾದರೆ ಅವರೇನು ಮಾಡುವುದಕ್ಕಾಗುತ್ತೆ?,’ ಎಂದು ಅರುಣಾದೇವಿ ಹೇಳಿದರು.

ಯಡಿಯೂರಪ್ಪನವರು ಕೌನ್ಸಿಲರ್, ಶಾಸಕರಾಗಿದ್ದಾಗಿನಿಂದಲೂ ರಾಜಕೀಯದ ಎಲ್ಲ ಮಜಲುಗಳನ್ನು ನೋಡುತ್ತಾ ಬಂದಿದ್ದಾರೆ, ರಾಜ್ಯದಲ್ಲಿ ಕೊವಿಡ್-19 ಮತ್ತು ಪ್ರವಾಹದ ಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ, ಹಾಗಾಗೇ ಜನರಿಗೆ ಅವರ ಮೇಲೆ ಪ್ರೀತಿ ಜಾಸ್ತಿ, ಅವರು ಮೇರು ಪರ್ವತವಿದ್ದಂತೆ ಎಂದ ಅರುಣಾದೇವಿ ಪಕ್ಷದ ಆಂತರಿಕ ವಿಷಯಗಳಲ್ಲಿ ತಾನ್ಯಾವತ್ತೂ ತಲೆಹಾಕಿಲ್ಲ ಮತ್ತು ಅದರ ಜ್ಞಾನವೂ ತನಗಿಲ್ಲ ಅಂತ ಹೇಳಿದರು.

ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್