AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ: ಅರುಣಾದೇವಿ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂಬ ಗುಲ್ಲೆದ್ದಿರುವಾಗಲೇ ಅವರ ಪುತ್ರಿ ಅರುಣಾದೇವಿ ಅಂಥ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ನನ್ನ ತಂದೆ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ: ಅರುಣಾದೇವಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರಿ ಅರುಣಾದೇವಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Dec 18, 2020 | 10:12 PM

Share

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಅವಧಿ ಪೂರ್ತಿಗೊಳಿಸಲ್ಲ ಎಂಬ ವದಂತಿಗಳನ್ನು ಅವರ ಪುತ್ರಿ ಅರುಣಾದೇವಿ ಅಲ್ಲಗಳೆದಿದ್ದಾರೆ. ಆದರೆ ಅದೃಷ್ಟ ಕೈಕೊಟ್ಟರೆ ಯಾರೇನೂ ಮಾಡಲಾಗದು ಅಂತಲೂ ಅವರು ಹೇಳಿರುವುದು ಕುತೂಹಲ ಮೂಡಿಸುತ್ತದೆ.

ಧಾರವಾಡದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅರುಣಾದೇವಿ, ತಮ್ಮ ತಂದೆ ಖಂಡಿತವಾಗಿಯೂ ರಾಜ್ಯದ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತಾರೆ, ಈ ವಿಷಯದಲ್ಲಿ ಯಾರಿಗೂ ಸಂಶಯವೇ ಬೇಡ ಎಂದರು.

‘‘ಅವರು ನನ್ನ ತಂದೆಯೆಂಬ ಅಭಿಮಾನಕ್ಕೆ ಇದನ್ನು ಹೇಳುತ್ತಿಲ್ಲ, ಒಬ್ಬ ಸಾಮಾನ್ಯ ಮಹಿಳೆಯಾಗಿ ಹೇಳುತ್ತಿದ್ದೇನೆ, ಅವರು ಮುಖ್ಯಮಂತ್ರಿಯಾಗಿರುವುದು ನಮ್ಮೆಲ್ಲರ ಅದೃಷ್ಟ. ಅವರು ಅವಧಿಗೆ ಮುಂಚೆಯೇ ಸ್ಥಾನ ತ್ಯಜಿಸಲಿದ್ದಾರೆ ಎನ್ನುವ ವದಂತಿಗಳು ಶುದ್ಧ ಸುಳ್ಳು. ಆದರೆ, ಅದೃಷ್ಟ ವಿಮುಖವಾದರೆ ಅವರೇನು ಮಾಡುವುದಕ್ಕಾಗುತ್ತೆ?,’ ಎಂದು ಅರುಣಾದೇವಿ ಹೇಳಿದರು.

ಯಡಿಯೂರಪ್ಪನವರು ಕೌನ್ಸಿಲರ್, ಶಾಸಕರಾಗಿದ್ದಾಗಿನಿಂದಲೂ ರಾಜಕೀಯದ ಎಲ್ಲ ಮಜಲುಗಳನ್ನು ನೋಡುತ್ತಾ ಬಂದಿದ್ದಾರೆ, ರಾಜ್ಯದಲ್ಲಿ ಕೊವಿಡ್-19 ಮತ್ತು ಪ್ರವಾಹದ ಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ, ಹಾಗಾಗೇ ಜನರಿಗೆ ಅವರ ಮೇಲೆ ಪ್ರೀತಿ ಜಾಸ್ತಿ, ಅವರು ಮೇರು ಪರ್ವತವಿದ್ದಂತೆ ಎಂದ ಅರುಣಾದೇವಿ ಪಕ್ಷದ ಆಂತರಿಕ ವಿಷಯಗಳಲ್ಲಿ ತಾನ್ಯಾವತ್ತೂ ತಲೆಹಾಕಿಲ್ಲ ಮತ್ತು ಅದರ ಜ್ಞಾನವೂ ತನಗಿಲ್ಲ ಅಂತ ಹೇಳಿದರು.

ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ