Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?

ಬೆಂಗಳೂರು: ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಹಾಗೂ ಜನಸಾಮಾನ್ಯರಿಗೆ ಬಸ್ ಮಾರ್ಗ, ಸಮಯ, ಇನ್ನಿತರ ಮಾಹಿತಿಗಳನ್ನು ನೀಡುವ ಮಹದುದ್ದೇಶದಿಂದ ಆರಂಭವಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ನಿರ್ವಹಣೆಯ ಕೊರತೆಯಿಂದ ಪಾಳುಬಿದ್ದ ಬಸ್ಸಿನಂತಾಗಿದೆ! 2019ರ ಡಿಸೆಂಬರ್ 29ರಂದು ಬಿಡುಗಡೆಯಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ಮೂಲಕ ಬಸ್ ವೇಳಾಪಟ್ಟಿ, ಬಸ್ ಆಗಮಿಸುವ ಸಮಯ, ಸಮೀಪದ ಬಸ್ ನಿಲ್ದಾಣ, ಮಾರ್ಗಗಳ ಸಂಖ್ಯೆ ಮುಂತಾದ ಅವಶ್ಯಕ ಮಾಹಿತಿಗಳನ್ನು ನೀಡುವುದಾಗಿ ಬಿಎಂಟಿಸಿ ಭರವಸೆ ನೀಡಿತ್ತು. ಅಷ್ಟೇ ಅಲ್ಲದೇ, 2020ರ ಜನವರಿ ವೇಳೆಗೆ ಐಫೋನ್ […]

ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?
Follow us
ಸಾಧು ಶ್ರೀನಾಥ್​
|

Updated on:Nov 11, 2020 | 12:06 PM

ಬೆಂಗಳೂರು: ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಹಾಗೂ ಜನಸಾಮಾನ್ಯರಿಗೆ ಬಸ್ ಮಾರ್ಗ, ಸಮಯ, ಇನ್ನಿತರ ಮಾಹಿತಿಗಳನ್ನು ನೀಡುವ ಮಹದುದ್ದೇಶದಿಂದ ಆರಂಭವಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ನಿರ್ವಹಣೆಯ ಕೊರತೆಯಿಂದ ಪಾಳುಬಿದ್ದ ಬಸ್ಸಿನಂತಾಗಿದೆ!

2019ರ ಡಿಸೆಂಬರ್ 29ರಂದು ಬಿಡುಗಡೆಯಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ಮೂಲಕ ಬಸ್ ವೇಳಾಪಟ್ಟಿ, ಬಸ್ ಆಗಮಿಸುವ ಸಮಯ, ಸಮೀಪದ ಬಸ್ ನಿಲ್ದಾಣ, ಮಾರ್ಗಗಳ ಸಂಖ್ಯೆ ಮುಂತಾದ ಅವಶ್ಯಕ ಮಾಹಿತಿಗಳನ್ನು ನೀಡುವುದಾಗಿ ಬಿಎಂಟಿಸಿ ಭರವಸೆ ನೀಡಿತ್ತು. ಅಷ್ಟೇ ಅಲ್ಲದೇ, 2020ರ ಜನವರಿ ವೇಳೆಗೆ ಐಫೋನ್ ಬಳಕೆದಾರರಿಗೂ ಆ್ಯಪ್ ಲಭ್ಯವಾಗಲಿದೆ ಎಂದು ತಿಳಿಸಿತ್ತು.

15 ವರ್ಷ ವಯಸ್ಸಿನ ಶಾಲಾ ವಿದ್ಯಾರ್ಥಿ ಮಾ. ನಿಹಾರ್ ಠಕ್ಕರ್ nihar thakkar ವಿನ್ಯಾಸಗೊಳಿಸಿದ್ದ ಆ್ಯಪ್ ಅನ್ನು ತೆಕ್ಕೆಗೆ ತೆಗೆದುಕೊಂಡಿದ್ದ ಬಿಎಂಟಿಸಿ, ಅದಕ್ಕೂ ಮುನ್ನ ಜುಲೈ 2019ರಲ್ಲಿ ಆತ ರಚಿಸಿದ್ದ ಆ್ಯಪ್ ಅನ್ನು ಭದ್ರತಾ ವಿಚಾರದ ಕಾರಣ ಸ್ಥಗಿತಗೊಳಿಸಿ ಹೊಸ ಆ್ಯಪ್ ಅನ್ನು ‘ಮೈ ಬಿಎಂಟಿಸಿ’ ಹೆಸರಿನೊಂದಿಗೆ ಅಧಿಕೃತಗೊಳಿಸಿತ್ತು.

ಸಮರ್ಪಕವಾಗಿ ಪ್ರತಿಕ್ರಿಯೆ ನೀಡದೆ ಜಾರಿಕೊಂಡ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅದಾದ ನಂತರ ಫೆಬ್ರವರಿ 2020ರಲ್ಲಿ ಅಪ್ಡೇಟ್ ಆಗಿರುವ ಮೈ ಬಿಎಂಟಿಸಿ ಅಧಿಕೃತ ಆ್ಯಪ್ ಸದ್ಯ ಬಳಸಲಾರದ ಸ್ಥಿತಿಯಲ್ಲಿದೆ. ಈಗಲೂ ಪ್ಲೇ ಸ್ಟೋರ್ನಲ್ಲಿ ಆ್ಯಪ್ ಲಭ್ಯವಿದೆಯಾದರೂ ಡೌನ್ಲೋಡ್ ಮಾಡಿಕೊಂಡ ನಂತರ ಯಾವ ಮಾಹಿತಿಯೂ ಸಿಗುವುದಿಲ್ಲ. ಈ ಕುರಿತು ಮಾಹಿತಿ ಪಡೆಯಲು ಟಿವಿ9 ಡಿಜಿಟಲ್ ತಂಡ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿಯವರನ್ನು ಸಂಪರ್ಕಿಸಲು ಯತ್ನಿಸಿತಾದರೂ ಅವರು ಸಮರ್ಪಕವಾಗಿ ಪ್ರತಿಕ್ರಿಯಿಸಲಿಲ್ಲ.

ಲಾಕ್ಡೌನ್ ನಂತರ ಜನ ಸಾಮಾನ್ಯರು ಬಿಎಂಟಿಸಿಯಲ್ಲಿ ಓಡಾಟ ಆರಂಭಿಸಿದ್ದು. ಪ್ರಸ್ತುತ ಸಂದರ್ಭದಲ್ಲಿ ಜನ ಸಂದಣಿ, ಬಸ್ ಸಮಯ, ಮಾರ್ಗ, ವೇಳಾಪಟ್ಟಿಯ ಮಾಹಿತಿ ನೀಡುವ ಆ್ಯಪ್ ನ ಅವಶ್ಯಕತೆ ಹೆಚ್ಚಿದೆ. ಆದರೆ, ಈ ಸಂದರ್ಭದಲ್ಲೇ ನಿರ್ವಹಣೆಯಿಲ್ಲದೆ ಪಾಳು ಬಿದ್ದಿರುವ ಆ್ಯಪ್ ಪರಿಸ್ಥಿತಿಯನ್ನು ನೋಡಿದರೆ ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಮಾತು ನೆನಪಾಗುತ್ತದೆ.

Published On - 12:05 pm, Wed, 11 November 20

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್