AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?

ಬೆಂಗಳೂರು: ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಹಾಗೂ ಜನಸಾಮಾನ್ಯರಿಗೆ ಬಸ್ ಮಾರ್ಗ, ಸಮಯ, ಇನ್ನಿತರ ಮಾಹಿತಿಗಳನ್ನು ನೀಡುವ ಮಹದುದ್ದೇಶದಿಂದ ಆರಂಭವಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ನಿರ್ವಹಣೆಯ ಕೊರತೆಯಿಂದ ಪಾಳುಬಿದ್ದ ಬಸ್ಸಿನಂತಾಗಿದೆ! 2019ರ ಡಿಸೆಂಬರ್ 29ರಂದು ಬಿಡುಗಡೆಯಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ಮೂಲಕ ಬಸ್ ವೇಳಾಪಟ್ಟಿ, ಬಸ್ ಆಗಮಿಸುವ ಸಮಯ, ಸಮೀಪದ ಬಸ್ ನಿಲ್ದಾಣ, ಮಾರ್ಗಗಳ ಸಂಖ್ಯೆ ಮುಂತಾದ ಅವಶ್ಯಕ ಮಾಹಿತಿಗಳನ್ನು ನೀಡುವುದಾಗಿ ಬಿಎಂಟಿಸಿ ಭರವಸೆ ನೀಡಿತ್ತು. ಅಷ್ಟೇ ಅಲ್ಲದೇ, 2020ರ ಜನವರಿ ವೇಳೆಗೆ ಐಫೋನ್ […]

ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?
ಸಾಧು ಶ್ರೀನಾಥ್​
|

Updated on:Nov 11, 2020 | 12:06 PM

Share

ಬೆಂಗಳೂರು: ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಹಾಗೂ ಜನಸಾಮಾನ್ಯರಿಗೆ ಬಸ್ ಮಾರ್ಗ, ಸಮಯ, ಇನ್ನಿತರ ಮಾಹಿತಿಗಳನ್ನು ನೀಡುವ ಮಹದುದ್ದೇಶದಿಂದ ಆರಂಭವಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ನಿರ್ವಹಣೆಯ ಕೊರತೆಯಿಂದ ಪಾಳುಬಿದ್ದ ಬಸ್ಸಿನಂತಾಗಿದೆ!

2019ರ ಡಿಸೆಂಬರ್ 29ರಂದು ಬಿಡುಗಡೆಯಾದ ‘ಮೈ ಬಿಎಂಟಿಸಿ ಮೊಬೈಲ್ ಆ್ಯಪ್’ ಮೂಲಕ ಬಸ್ ವೇಳಾಪಟ್ಟಿ, ಬಸ್ ಆಗಮಿಸುವ ಸಮಯ, ಸಮೀಪದ ಬಸ್ ನಿಲ್ದಾಣ, ಮಾರ್ಗಗಳ ಸಂಖ್ಯೆ ಮುಂತಾದ ಅವಶ್ಯಕ ಮಾಹಿತಿಗಳನ್ನು ನೀಡುವುದಾಗಿ ಬಿಎಂಟಿಸಿ ಭರವಸೆ ನೀಡಿತ್ತು. ಅಷ್ಟೇ ಅಲ್ಲದೇ, 2020ರ ಜನವರಿ ವೇಳೆಗೆ ಐಫೋನ್ ಬಳಕೆದಾರರಿಗೂ ಆ್ಯಪ್ ಲಭ್ಯವಾಗಲಿದೆ ಎಂದು ತಿಳಿಸಿತ್ತು.

15 ವರ್ಷ ವಯಸ್ಸಿನ ಶಾಲಾ ವಿದ್ಯಾರ್ಥಿ ಮಾ. ನಿಹಾರ್ ಠಕ್ಕರ್ nihar thakkar ವಿನ್ಯಾಸಗೊಳಿಸಿದ್ದ ಆ್ಯಪ್ ಅನ್ನು ತೆಕ್ಕೆಗೆ ತೆಗೆದುಕೊಂಡಿದ್ದ ಬಿಎಂಟಿಸಿ, ಅದಕ್ಕೂ ಮುನ್ನ ಜುಲೈ 2019ರಲ್ಲಿ ಆತ ರಚಿಸಿದ್ದ ಆ್ಯಪ್ ಅನ್ನು ಭದ್ರತಾ ವಿಚಾರದ ಕಾರಣ ಸ್ಥಗಿತಗೊಳಿಸಿ ಹೊಸ ಆ್ಯಪ್ ಅನ್ನು ‘ಮೈ ಬಿಎಂಟಿಸಿ’ ಹೆಸರಿನೊಂದಿಗೆ ಅಧಿಕೃತಗೊಳಿಸಿತ್ತು.

ಸಮರ್ಪಕವಾಗಿ ಪ್ರತಿಕ್ರಿಯೆ ನೀಡದೆ ಜಾರಿಕೊಂಡ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅದಾದ ನಂತರ ಫೆಬ್ರವರಿ 2020ರಲ್ಲಿ ಅಪ್ಡೇಟ್ ಆಗಿರುವ ಮೈ ಬಿಎಂಟಿಸಿ ಅಧಿಕೃತ ಆ್ಯಪ್ ಸದ್ಯ ಬಳಸಲಾರದ ಸ್ಥಿತಿಯಲ್ಲಿದೆ. ಈಗಲೂ ಪ್ಲೇ ಸ್ಟೋರ್ನಲ್ಲಿ ಆ್ಯಪ್ ಲಭ್ಯವಿದೆಯಾದರೂ ಡೌನ್ಲೋಡ್ ಮಾಡಿಕೊಂಡ ನಂತರ ಯಾವ ಮಾಹಿತಿಯೂ ಸಿಗುವುದಿಲ್ಲ. ಈ ಕುರಿತು ಮಾಹಿತಿ ಪಡೆಯಲು ಟಿವಿ9 ಡಿಜಿಟಲ್ ತಂಡ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿಯವರನ್ನು ಸಂಪರ್ಕಿಸಲು ಯತ್ನಿಸಿತಾದರೂ ಅವರು ಸಮರ್ಪಕವಾಗಿ ಪ್ರತಿಕ್ರಿಯಿಸಲಿಲ್ಲ.

ಲಾಕ್ಡೌನ್ ನಂತರ ಜನ ಸಾಮಾನ್ಯರು ಬಿಎಂಟಿಸಿಯಲ್ಲಿ ಓಡಾಟ ಆರಂಭಿಸಿದ್ದು. ಪ್ರಸ್ತುತ ಸಂದರ್ಭದಲ್ಲಿ ಜನ ಸಂದಣಿ, ಬಸ್ ಸಮಯ, ಮಾರ್ಗ, ವೇಳಾಪಟ್ಟಿಯ ಮಾಹಿತಿ ನೀಡುವ ಆ್ಯಪ್ ನ ಅವಶ್ಯಕತೆ ಹೆಚ್ಚಿದೆ. ಆದರೆ, ಈ ಸಂದರ್ಭದಲ್ಲೇ ನಿರ್ವಹಣೆಯಿಲ್ಲದೆ ಪಾಳು ಬಿದ್ದಿರುವ ಆ್ಯಪ್ ಪರಿಸ್ಥಿತಿಯನ್ನು ನೋಡಿದರೆ ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಮಾತು ನೆನಪಾಗುತ್ತದೆ.

Published On - 12:05 pm, Wed, 11 November 20

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ