AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಭಾಗದ ಬಿಜೆಪಿಯಲ್ಲಿ 5 ಬಣಗಳಿವೆ; ಇದರಿಂದ ಮೈಸೂರು ಪ್ರಾಂತ್ಯದ ಅಭಿವೃದ್ಧಿಯಾಗುತ್ತಿಲ್ಲ: ಕಾಂಗ್ರೆಸ್​

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿ ಮಾಡಿ, ಗೊಂದಲ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ಫಾರ್ಮರ್ ಬದಲು ರೈತ, ಫಾರ್ಮ್ ಲೇಬರ್ ಆಗಲಿದ್ದಾನೆ; ರೈತ ಕೂಲಿಗಾರ ಆಗಿರುತ್ತಾನೆ. ಜನರಿಗೆ ಬಿಜೆಪಿಯ ಮೂರು ಕಾಯ್ದೆ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಭಾಗದ ಬಿಜೆಪಿಯಲ್ಲಿ 5 ಬಣಗಳಿವೆ; ಇದರಿಂದ ಮೈಸೂರು ಪ್ರಾಂತ್ಯದ ಅಭಿವೃದ್ಧಿಯಾಗುತ್ತಿಲ್ಲ: ಕಾಂಗ್ರೆಸ್​
ಮೈಸೂರು ಭಾಗದ ಬಿಜೆಪಿಯಲ್ಲಿ 5 ಬಣಗಳಿವೆ; ಇದರಿಂದ ಮೈಸೂರು ಪ್ರಾಂತ್ಯದ ಅಭಿವೃದ್ಧಿಯಾಗುತ್ತಿಲ್ಲ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆಕ್ರೋಶ
ಸಾಧು ಶ್ರೀನಾಥ್​
|

Updated on: Feb 09, 2021 | 4:08 PM

Share

ಮೈಸೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿ ಮಾಡಿ, ಗೊಂದಲ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ಫಾರ್ಮರ್ ಬದಲು ರೈತ, ಫಾರ್ಮ್ ಲೇಬರ್ ಆಗಲಿದ್ದಾನೆ; ರೈತ ಕೂಲಿಗಾರ ಆಗಿರುತ್ತಾನೆ. ಜನರಿಗೆ ಬಿಜೆಪಿಯ ಮೂರು ಕಾಯ್ದೆ ಬಗ್ಗೆ ಸ್ಪಷ್ಟತೆ ಇಲ್ಲ. ರೈತರು ಬೆಳೆದ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂಬುದಿದೆ. ಪ್ರಾರಂಭದಲ್ಲಿ ಉತ್ತಮ ಬೆಲೆ ಸಿಕ್ಕರೂ ನಂತರ ಕಾರ್ಪೊರೇಟ್ ಕಂಪನಿಗಳ ನಿಯಂತ್ರಣಕ್ಕೆ ಒಳಪಡಲಿದೆ. ಬೆಲೆ ಖಾತರಿ ಮತ್ತು ಒಪ್ಪಂದ ಕಾಯ್ದೆ ಮೂಲಕ ಒಪ್ಪಂದ ಮಾಡಿಕೊಂಡು ಕಂಪನಿ ಹೇಳಿದ ಬೆಳೆಗಳನ್ನೆ ರೈತ ಬೆಳೆಯಬೇಕಾಗುತ್ತದೆ. ರೈತರು ತಮ್ಮ ಜಮೀನಲ್ಲಿ ತಾನೇ ಕೂಲಿಗಳಾಗಿ ಕೆಲಸ ಮಾಡುವಂತೆ ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ (Mysore congress spokesperson M Lakshman) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಯಾಕೆ ಹಠಕ್ಕೆ ಬಿದ್ದಿದೆ?

ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ ಕೂಡ ಮಾರಕವಾಗಲಿದೆ. ಕಾರ್ಪೊರೇಟ್ ಕಂಪನಿಗಳು ಅಗ್ಗದ ಬೆಲೆಗೆ ಖರೀದಿ ಮಾಡಿ ಎಷ್ಟು ಬೇಕಾದರೂ ಶೇಖರಣೆ ಮಾಡಿಕೊಂಡು ಮಾರುಕಟ್ಟೆ ಅಭಾವ ಸೃಷ್ಟಿಸುತ್ತವೆ. ಬಿಜೆಪಿ ಇಂತಹುದಕ್ಕೆ ಯಾಕೆ ಹಠಕ್ಕೆ ಬಿದ್ದಿದೆ? ಈ ಕಾಯ್ದೆಗಳನ್ನು ರೈತರು ಅರ್ಥ ಮಾಡಿಕೊಂಡೇ ಹೋರಾಟ ಮಾಡುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆ ರದ್ದಾಗುವುದಿಲ್ಲ ಎಂದು ಮೋದಿ ಹೇಳುತ್ತಾರೆ. ಎಪಿಎಂಸಿ ಇಲ್ಲದೆ ಇದ್ರೆ ಎಂಎಸ್​ಪಿ ಎಲ್ಲಿ ಇರುತ್ತದೆ? ಸರ್ಕಾರ ಎಪಿಎಂಸಿ ರದ್ದಾಗುವುದಿಲ್ಲ ಎಂದು ಸುಳ್ಳು ಹೇಳುತ್ತಿದೆ‌ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ಹೇಳಿದ್ದಾರೆ.

ಮೈಸೂರು ಭಾಗದ ಬಿಜೆಪಿ (Mysore BJP) ಯಲ್ಲಿ 5 ಬಣಗಳಿವೆ. ಬಿಜೆಪಿ ಶಾಸಕರು, ಸಂಸದರ ನಡುವೆ ಹೊಂದಾಣಿಕೆಯಿಲ್ಲ. ಇದರಿಂದಾಗಿ ಮೈಸೂರು (Mysuru) ಪ್ರಾಂತ್ಯದ ಅಭಿವೃದ್ಧಿಯಾಗುತ್ತಿಲ್ಲ. ರೈಲ್ವೆ ವಿಸ್ತರಣೆಗಂತೂ ಬಜೆಟ್​ನಲ್ಲಿ ಒಂದೂ ನಯಾಪೈಸೆ ಸಿಕ್ಕಿಲ್ಲ. ಬಿಜೆಪಿ ಶಾಸಕರು ಮತ್ತು ಸಂಸದರು ಒಟ್ಟಾಗಿ ಅನುದಾನ ಕೊಡಿಸಿ ಎಂದು ಸ್ಥಳೀಯ ಬಿಜೆಪಿ ನಾಯಕರಿಗೆ ವಕ್ತಾರ ಲಕ್ಷ್ಮಣ ಕಿವಿಮಾತು ಹೇಳಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ