AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಆದೇಶ ಹಿಂಪಡೆದ ಮೈಸೂರು ಡಿಸಿ ರೋಹಿಣಿ ಸಿಂಧೂರಿ

ಈ ಹಿಂದೆ ಕೊರೊನಾ ಬಗ್ಗೆ ಆದೇಶ ಹೊರಡಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಈಗ ಸರ್ಕಾರಕ್ಕೆ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ.

ಕೊರೊನಾ ಬಗ್ಗೆ ಆದೇಶ ಹಿಂಪಡೆದ ಮೈಸೂರು ಡಿಸಿ ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
shruti hegde
| Edited By: |

Updated on:Apr 10, 2021 | 9:12 AM

Share

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮ ಜಾರಿಗೊಳಿಸಲಾಗಿತ್ತು. ಈ ಕುರಿತಾಗಿ ಸರ್ಕಾರಕ್ಕೆ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ತಮ್ಮ ಆದೇಶವನ್ನು ಮೈಸೂರಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಿಂಪಡೆದಿದ್ದಾರೆ. ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ಜನರು ಕೊವಿಡ್ 19 ನೆಗೆಟಿವ್ ವರದಿ ಹೊಂದಿರಲು ಸಲಹಾ ಸೂಚನೆ ನೀಡಲಾಗಿತ್ತು. ಈ ಕುರಿತಾಗಿ ಸಾರ್ವಜನಿಕರಲ್ಲಿ ಸಲಹಾ ಸೂಚನೆ ಬಗ್ಗೆ ಗೊಂದಲ ಉಂಟಾಗಿದೆ. ಅಲ್ಲದೆ ಸರ್ಕಾರದ ಸುತ್ತೋಲೆಯಲ್ಲಿ ಕೊವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕ ಆದೇಶಗಳನ್ನು ಹೊರಡಿಸದಂತೆ ಹೇಳಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈಗಾಗಲೇ ಇಂತಹ ಆದೇಶ ಸೂಚನೆ ಹೊರಡಿಸಿದ್ದಲ್ಲಿ ತಕ್ಷಣವೇ ಹಿಂಪಡೆಯಲು ನಿರ್ದೇಶಿಸಿದೆ. ಆದ್ದರಿಂದ ಹೊರಡಿಸಲಾಗಿರುವ ಸಲಹಾ ಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ. ಸರ್ಕಾರದ ಸಲಹಾ ಸೂಚನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕೋರಿ ಪತ್ರ ಬರೆಯಲಾಗಿರುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೊವಿಡ್ ಟೆಸ್ಟ್ ವರದಿ ತಂದರೆ ಒಳ್ಳೆಯದು. ಬೆಂಗಳೂರಿನಲ್ಲಿ 5 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಮೈಸೂರಿಗೆ ಬೆಂಗಳೂರಿನಿಂದ ಸಾವಿರಾರು ಜನರು ಮೈಸೂರಿಗೆ ಬರುತ್ತಿದ್ದಾರೆ. ಮೈಸೂರಿನ ಹಿತದೃಷ್ಟಿಯಿಂದ ನೆಗೆಟಿವ್ ವರದಿ‌ ತಂದರೆ ಒಳ್ಳೆಯದು. ಜನರೇ ಈ ಬಗ್ಗೆ ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ಅವರು ಈ ಹಿಂದೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದರು.

ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ 28 ಕೊರೊನಾ‌ ಸಾವು ಸಂಭವಿಸಿದೆ. ಏಪ್ರಿಲ್ ತಿಂಗಳ 7 ದಿನಗಳಲ್ಲಿ 12 ಸಾವುಗಳು ಸಂಭವಿಸಿದೆ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟುಕೊಂಡು ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿಂದು 304 ಜನರಿಗೆ ಕೊರೊನಾ ದೃಢಪಟ್ಟಿದೆ ಎಂದು ಹೇಳಿದ್ದರು.

ನಗರ ಪ್ರದೇಶಗಳಲ್ಲಿ ಜಾತ್ರೆ ಊರ ಹಬ್ಬಗಳು ರದ್ದಾಗಿದೆ. ಮದುವೆ ಸಭಾಂಗಣದಲ್ಲಿ ಒಳಾಂಗಣ 200 ಜನ ಹಾಗೂ ಹೊರಾಂಗಣಕ್ಕೆ 500 ಜನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಸಿಪಿ ಇಂದ‌ ಅನುಮತಿಯನ್ನು ಪಡೆಯಬೇಕು‌. ಅನುಮತಿ ಪಡೆದವರಿಗೆ ಕೊವಿಡ್ ನಿಯಮ ಕಡ್ಡಾಯವಾಗಿರುತ್ತದೆ. ಪ್ರವಾಸಿತಾಣಗಳಿಗೆ ಬರುವವರು ಆರೋಗ್ಯ ದೃಷ್ಟಿಯಿಂದ ಕೊವಿಡ್ ಟೆಸ್ಟ್ ಮಾಡಿಸಿದರೆ ಒಳ್ಳೆಯದು‌ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

ಮೈಸೂರಿನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಇದ್ದರಷ್ಟೆ ಸಿನಿಮಾ ವೀಕ್ಷಣೆಗೆ ಅವಕಾಶ: ಏಪ್ರಿಲ್ 10 ರಿಂದ 20 ರವರೆಗೆ ಅನ್ವಯ!

Published On - 11:02 pm, Fri, 9 April 21

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ