AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆ ಸಾರ್ವಜನಿಕ ವೀಕ್ಷಣೆಗೆ ವಾರದ ಎಲ್ಲಾ ದಿನವು ಮುಕ್ತ.. ಆದರೆ?

ಮೈಸೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಿಗೆ ಲಾಕ್ಡೌನ್ ಹೇರಿದ್ದ ಸರ್ಕಾರ, ಈಗ ಹಂತಹಂತವಾಗಿ ಲಾಕ್ಡೌನ್ ಸಡಿಲಗೊಳಿಸಿದೆ. ಹಾಗೆಯೇ ಮೈಸೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಅರಮನೆಗೂ ಸಹ ಕೊರೊನಾ ಹಾವಳಿಯಿಂದಾಗಿ ಇಷ್ಟು ದಿನಗಳ ಕಾಲ ಸಾರ್ವಜನಿಕರ ವೀಕ್ಷಣೆಗೆ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಆ ನಿರ್ಬಂಧಗಳಿಗೆ ತೆರೆ ಎಳೆಯಲಾಗಿದೆ. ಇನ್ನು ಮುಂದೆ ಮೈಸೂರು ಅರಮನೆಯನ್ನು ವಾರದ ಎಲ್ಲ ದಿನವೂ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಿದ್ದು, ವಾರಾಂತ್ಯದ ದಿನಗಳಾದ ಶನಿವಾರ, ಭಾನುವಾರ ಹಾಗೂ […]

ಮೈಸೂರು ಅರಮನೆ ಸಾರ್ವಜನಿಕ ವೀಕ್ಷಣೆಗೆ ವಾರದ ಎಲ್ಲಾ ದಿನವು ಮುಕ್ತ.. ಆದರೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 11, 2020 | 10:22 AM

Share

ಮೈಸೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಿಗೆ ಲಾಕ್ಡೌನ್ ಹೇರಿದ್ದ ಸರ್ಕಾರ, ಈಗ ಹಂತಹಂತವಾಗಿ ಲಾಕ್ಡೌನ್ ಸಡಿಲಗೊಳಿಸಿದೆ. ಹಾಗೆಯೇ ಮೈಸೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಅರಮನೆಗೂ ಸಹ ಕೊರೊನಾ ಹಾವಳಿಯಿಂದಾಗಿ ಇಷ್ಟು ದಿನಗಳ ಕಾಲ ಸಾರ್ವಜನಿಕರ ವೀಕ್ಷಣೆಗೆ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಆ ನಿರ್ಬಂಧಗಳಿಗೆ ತೆರೆ ಎಳೆಯಲಾಗಿದೆ.

ಇನ್ನು ಮುಂದೆ ಮೈಸೂರು ಅರಮನೆಯನ್ನು ವಾರದ ಎಲ್ಲ ದಿನವೂ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಿದ್ದು, ವಾರಾಂತ್ಯದ ದಿನಗಳಾದ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜೆ ದಿನಗಳಲ್ಲೂ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಸಾರ್ವಜನಿಕ ವೀಕ್ಷಣೆಗೆ ಸಮಯ ನಿಗದಿ ಮಾಡಲಾಗಿದೆ.

ಆದರೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಹಾಗೂ ಪ್ರತಿ ಭಾನುವಾರ ಸಂಜೆ ಆಯೋಜಿಸಲಾಗುತ್ತಿದ್ದ ಅರಮನೆಯ ವಿದ್ಯುತ್ ದೀಪಾಲಂಕಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಮೈಸೂರು ಅರಮನೆ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್