AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Mar 24, 2021 | 11:03 AM

Share

ಮೈಸೂರು: ಜಿಲ್ಲೆಯ ರಿಂಗ್​ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ನಡೆದಾಗ ಸ್ಥಳೀಯರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಅದಾದಮೇಲೆ ಖುದ್ದು ಬೈಕ್​ ಮೇಲೆ ಸಂಚರಿಸುತ್ತಿದ್ದ ವ್ಯಕ್ತಿ ಪೊಲೀಸರ ಸಮ್ಮುಖದಲ್ಲಿ ನೀಡಿದ ಹೇಳಿಕೆಯೇ ಬೇರೊಂದು.. ಅದಾದ ಮೇಲೆ ಪೊಲೀಸರು ದಾಂಧಲೆ ನಡೆಸಿದವರ ಪೈಕಿ 13 ಮಂದಿಯನ್ನು ಒಳಗೆ ಹಾಕಿದ್ದಾರೆ. ಇಷ್ಟೆಲ್ಲಾ ಆದ ಮೇಲೆ, ಖುದ್ದು ಮೈಸೂರು ನಗರ ಪೊಲೀಸ್​ ಆಯುಕ್ತ ಡಾ. ಚಂದ್ರಗುಪ್ತ ಅವರು ಅಂದು ಸ್ಥಳದಲ್ಲಿದ್ದ ಅಷ್ಟೂ ಮಂದಿ ಪೊಲೀಸರನ್ನು ಪ್ರಶಂಸಿಸಿ, ಗೌರವಿಸುತ್ತಿರುವ ಸುದ್ದಿಯೂ ಕೇಳಿಬಂದಿದೆ. ಒಟ್ಟಿನಲ್ಲಿ ಪ್ರಕರಣವನ್ನು ಎಳೆ ಎಳೆಯಾಗಿ ಬಿಡಿಸಿ ನೋಡಿದಾಗ ಅಸಹಜ ಘಟನಾವಳಿಗಳು ನಡೆದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಅಪಘಾತ ಸಮಯದಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಂಚಾರ ಪೊಲೀಸರು, 112 ತುರ್ತು ಸ್ಪಂದನ ವಾಹನದ ಕರ್ತವ್ಯದ ಪೊಲೀಸರು ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತನ ದೇಹವನ್ನು ಶವಾಗಾರಕ್ಕೆ ತಲುಪಿಸಿ ಅಪಘಾತಗೊಂಡಿದ್ದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಇದನ್ನು ಗಮನಿಸಿ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರಶಂಸನಾ ಪತ್ರ -ಸ್ವಾಮಿನಾಯಕ, ಎ.ಎಸ್.ಐ, ವಿ.ವಿ.ಪುರಂ ಸಂಚಾರ ಠಾಣೆ -ಮಾದೇಗೌಡ, ಎ.ಎಸ್.ಐ. ವಿ.ವಿ.ಪುರಂ ಸಂಚಾರ ಠಾಣೆ -ಲೋಕೇಶ್. ಎ.ಎಂ. ಸಿ.ಹೆಚ್.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಶಿವನಾಗ, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ರಮೇಶ್, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಗಣೇಶ್, ಹೆಚ್.ಆರ್, ಸಿ.ಹೆಚ್.ಸಿ. ವಿಜಯನಗರ ಠಾಣೆ -ಭಾಸ್ಕರ್, ಎ.ಪಿ.ಸಿ ಸಂಜೀವಿನಿ ತುರ್ತು ಚಿಕಿತ್ಸಾ ವಾಹನ ಚಾಲಕ -ಪಿ.ಮಂಜು, ಎ.ಪಿ.ಸಿ. 112 ವಾಹನ ಚಾಲಕನಿಗೆ ಪ್ರಶಂಸನಾ ಪತ್ರ ನೀಡಿ ಗೌರವ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು ಪ್ರಕರಣ; ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ಅರೆಸ್ಟ್

Published On - 9:59 am, Wed, 24 March 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ