ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
Follow us
| Updated By: ಸಾಧು ಶ್ರೀನಾಥ್​

Updated on:Mar 24, 2021 | 11:03 AM

ಮೈಸೂರು: ಜಿಲ್ಲೆಯ ರಿಂಗ್​ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ನಡೆದಾಗ ಸ್ಥಳೀಯರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಅದಾದಮೇಲೆ ಖುದ್ದು ಬೈಕ್​ ಮೇಲೆ ಸಂಚರಿಸುತ್ತಿದ್ದ ವ್ಯಕ್ತಿ ಪೊಲೀಸರ ಸಮ್ಮುಖದಲ್ಲಿ ನೀಡಿದ ಹೇಳಿಕೆಯೇ ಬೇರೊಂದು.. ಅದಾದ ಮೇಲೆ ಪೊಲೀಸರು ದಾಂಧಲೆ ನಡೆಸಿದವರ ಪೈಕಿ 13 ಮಂದಿಯನ್ನು ಒಳಗೆ ಹಾಕಿದ್ದಾರೆ. ಇಷ್ಟೆಲ್ಲಾ ಆದ ಮೇಲೆ, ಖುದ್ದು ಮೈಸೂರು ನಗರ ಪೊಲೀಸ್​ ಆಯುಕ್ತ ಡಾ. ಚಂದ್ರಗುಪ್ತ ಅವರು ಅಂದು ಸ್ಥಳದಲ್ಲಿದ್ದ ಅಷ್ಟೂ ಮಂದಿ ಪೊಲೀಸರನ್ನು ಪ್ರಶಂಸಿಸಿ, ಗೌರವಿಸುತ್ತಿರುವ ಸುದ್ದಿಯೂ ಕೇಳಿಬಂದಿದೆ. ಒಟ್ಟಿನಲ್ಲಿ ಪ್ರಕರಣವನ್ನು ಎಳೆ ಎಳೆಯಾಗಿ ಬಿಡಿಸಿ ನೋಡಿದಾಗ ಅಸಹಜ ಘಟನಾವಳಿಗಳು ನಡೆದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಅಪಘಾತ ಸಮಯದಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಂಚಾರ ಪೊಲೀಸರು, 112 ತುರ್ತು ಸ್ಪಂದನ ವಾಹನದ ಕರ್ತವ್ಯದ ಪೊಲೀಸರು ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತನ ದೇಹವನ್ನು ಶವಾಗಾರಕ್ಕೆ ತಲುಪಿಸಿ ಅಪಘಾತಗೊಂಡಿದ್ದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಇದನ್ನು ಗಮನಿಸಿ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರಶಂಸನಾ ಪತ್ರ -ಸ್ವಾಮಿನಾಯಕ, ಎ.ಎಸ್.ಐ, ವಿ.ವಿ.ಪುರಂ ಸಂಚಾರ ಠಾಣೆ -ಮಾದೇಗೌಡ, ಎ.ಎಸ್.ಐ. ವಿ.ವಿ.ಪುರಂ ಸಂಚಾರ ಠಾಣೆ -ಲೋಕೇಶ್. ಎ.ಎಂ. ಸಿ.ಹೆಚ್.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಶಿವನಾಗ, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ರಮೇಶ್, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಗಣೇಶ್, ಹೆಚ್.ಆರ್, ಸಿ.ಹೆಚ್.ಸಿ. ವಿಜಯನಗರ ಠಾಣೆ -ಭಾಸ್ಕರ್, ಎ.ಪಿ.ಸಿ ಸಂಜೀವಿನಿ ತುರ್ತು ಚಿಕಿತ್ಸಾ ವಾಹನ ಚಾಲಕ -ಪಿ.ಮಂಜು, ಎ.ಪಿ.ಸಿ. 112 ವಾಹನ ಚಾಲಕನಿಗೆ ಪ್ರಶಂಸನಾ ಪತ್ರ ನೀಡಿ ಗೌರವ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು ಪ್ರಕರಣ; ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ಅರೆಸ್ಟ್

Published On - 9:59 am, Wed, 24 March 21

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್