AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ
ಆಯೇಷಾ ಬಾನು
| Edited By: |

Updated on:Mar 24, 2021 | 11:03 AM

Share

ಮೈಸೂರು: ಜಿಲ್ಲೆಯ ರಿಂಗ್​ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ನಡೆದಾಗ ಸ್ಥಳೀಯರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಅದಾದಮೇಲೆ ಖುದ್ದು ಬೈಕ್​ ಮೇಲೆ ಸಂಚರಿಸುತ್ತಿದ್ದ ವ್ಯಕ್ತಿ ಪೊಲೀಸರ ಸಮ್ಮುಖದಲ್ಲಿ ನೀಡಿದ ಹೇಳಿಕೆಯೇ ಬೇರೊಂದು.. ಅದಾದ ಮೇಲೆ ಪೊಲೀಸರು ದಾಂಧಲೆ ನಡೆಸಿದವರ ಪೈಕಿ 13 ಮಂದಿಯನ್ನು ಒಳಗೆ ಹಾಕಿದ್ದಾರೆ. ಇಷ್ಟೆಲ್ಲಾ ಆದ ಮೇಲೆ, ಖುದ್ದು ಮೈಸೂರು ನಗರ ಪೊಲೀಸ್​ ಆಯುಕ್ತ ಡಾ. ಚಂದ್ರಗುಪ್ತ ಅವರು ಅಂದು ಸ್ಥಳದಲ್ಲಿದ್ದ ಅಷ್ಟೂ ಮಂದಿ ಪೊಲೀಸರನ್ನು ಪ್ರಶಂಸಿಸಿ, ಗೌರವಿಸುತ್ತಿರುವ ಸುದ್ದಿಯೂ ಕೇಳಿಬಂದಿದೆ. ಒಟ್ಟಿನಲ್ಲಿ ಪ್ರಕರಣವನ್ನು ಎಳೆ ಎಳೆಯಾಗಿ ಬಿಡಿಸಿ ನೋಡಿದಾಗ ಅಸಹಜ ಘಟನಾವಳಿಗಳು ನಡೆದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಅಪಘಾತ ಸಮಯದಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಂಚಾರ ಪೊಲೀಸರು, 112 ತುರ್ತು ಸ್ಪಂದನ ವಾಹನದ ಕರ್ತವ್ಯದ ಪೊಲೀಸರು ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತನ ದೇಹವನ್ನು ಶವಾಗಾರಕ್ಕೆ ತಲುಪಿಸಿ ಅಪಘಾತಗೊಂಡಿದ್ದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಇದನ್ನು ಗಮನಿಸಿ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರಶಂಸನಾ ಪತ್ರ -ಸ್ವಾಮಿನಾಯಕ, ಎ.ಎಸ್.ಐ, ವಿ.ವಿ.ಪುರಂ ಸಂಚಾರ ಠಾಣೆ -ಮಾದೇಗೌಡ, ಎ.ಎಸ್.ಐ. ವಿ.ವಿ.ಪುರಂ ಸಂಚಾರ ಠಾಣೆ -ಲೋಕೇಶ್. ಎ.ಎಂ. ಸಿ.ಹೆಚ್.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಶಿವನಾಗ, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ರಮೇಶ್, ಸಿ.ಪಿ.ಸಿ. ವಿ.ವಿ.ಪುರಂ ಸಂಚಾರ ಠಾಣೆ -ಗಣೇಶ್, ಹೆಚ್.ಆರ್, ಸಿ.ಹೆಚ್.ಸಿ. ವಿಜಯನಗರ ಠಾಣೆ -ಭಾಸ್ಕರ್, ಎ.ಪಿ.ಸಿ ಸಂಜೀವಿನಿ ತುರ್ತು ಚಿಕಿತ್ಸಾ ವಾಹನ ಚಾಲಕ -ಪಿ.ಮಂಜು, ಎ.ಪಿ.ಸಿ. 112 ವಾಹನ ಚಾಲಕನಿಗೆ ಪ್ರಶಂಸನಾ ಪತ್ರ ನೀಡಿ ಗೌರವ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು ಪ್ರಕರಣ; ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ಅರೆಸ್ಟ್

Published On - 9:59 am, Wed, 24 March 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ